AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ರೈತರಿಂದ ನಾಳೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ, ರೈಲು ತಡೆ ಚಳವಳಿ

ತಮಿಳುನಾಡಿಗೆ ಹರಿಬಿಡುತ್ತಿರುವ ಕಾವೇರಿ ನೀರಿನ ಬಗ್ಗೆ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಹೊತ್ತಿ ಉರಿಯುತ್ತಿದ್ದು, Karnataka Bandh: ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಅದರಲ್ಲೂ ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ರೈ ಸಂಘಟನೆಗಳು ನಿರ್ಧರಿಸಿದ್ದು, ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಹಾಗೂ ರೈಲು ತಡೆ ಚಳವಳಿ ನಡೆಸಲು ಸಹ ತೀರ್ಮಾನಿಸಿವೆ.

ಮಂಡ್ಯ ರೈತರಿಂದ ನಾಳೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ, ರೈಲು ತಡೆ ಚಳವಳಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ
ಪ್ರಶಾಂತ್​ ಬಿ.
| Edited By: |

Updated on: Sep 28, 2023 | 10:11 AM

Share

ಮಂಡ್ಯ, (ಸೆಪ್ಟೆಂಬರ್ 29): ತಮಿಳುನಾಡಿಗೆ (Tamil Nadu) ಹರಿಬಿಡುತ್ತಿರುವ ಕಾವೇರಿ ನೀರಿನ (Cauvery Water Dispute) ಬಗ್ಗೆ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಹೊತ್ತಿ ಉರಿಯುತ್ತಿದೆ. ಇದೇ ಮಂಗಳವಾರ ನೀಡಿದ್ದ ಬೆಂಗಳೂರು ಬಂದ್​ಗೆ ಅಭೂತಪೂರ್ವ ಬೆಂಬಲ ಸಿಕ್ಕಿರುವ ಬೆನ್ನಲ್ಲೇ ಇದೀಗ ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಲಾಗಿದೆ. ನಾಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳು ಲಭ್ಯವಾಗುದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಇತ್ತ ನಾಳೆ(ಸೆ.29) ಮಂಡ್ಯ ಜಿಲ್ಲೆಯಲ್ಲಿ ಹೆದ್ದಾರಿ, ರೈಲು ತಡೆ ಚಳವಳಿ ನಡೆಸಲು ಸಹ ತೀರ್ಮಾನಿಸಲಾಗಿದೆ.

ತಮಿಳುನಾಡಿಗೆ ನೀರು ಬಿಡ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್​ಗೆ​ ಬೆಂಬಲಿಸಿ ನಾಳೆ ಹೆದ್ದಾರಿ, ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ ಮಾಡಿದ್ದೇವೆ. ಹೀಗಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಹಾಗೂ ರೈಲು ತಡೆಯಲು ತೀರ್ಮಾನಿಸಲಾಗಿದ್ದು, ಶ್ರೀರಂಗಪಟ್ಟಣದ ಗೌರಿಪುರ ಬಳಿ ಎಕ್ಸ್‌ಪ್ರೆಸ್‌ ಹೈವೇ ತಡೆದು ಧರಣಿ ನಡೆಸುತ್ತೇವೆ ಎಂದರು.

ಇದನ್ನೂ ಓದಿ: Karnataka Breaking Kannada News Live: ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಬೀದಿ ಬದಿ ವ್ಯಾಪಾರಿಗಳು

ಶ್ರೀರಂಗಪಟ್ಟಣದ ಗೆಜ್ಜಲಗೆರೆ ಗ್ರಾಮದ ಬಳಿ ರೈಲು ತಡೆಗೆ ರೈತ ಸಂಘ ನಿರ್ಧರಿಸಿದ್ದೇವೆ. ಸರ್ಕಾರ ಒಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎಂದು ಸ್ಪಷ್ಟ ನಿರ್ಧಾರ ತಿಳಿಸಬೇಕು. ಈಗಾಗಲೇ ಸಾಕಷ್ಟು ಪ್ರಮಾಣದ ನೀರು ನದಿಗೆ ಹರಿದು ಹೋಗಿದೆ. ಪ್ರಾಧಿಕಾರದ ತಜ್ಞರನ್ನ ಕಳುಹಿಸಿ ವಸ್ತುಸ್ಥಿತಿ ಪರಿಶೀಲನೆ ನಡೆಸಬೇಕು ಎಂದು ಮಂಡ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್