AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟ ರಾಜ್ಯ ಸರ್ಕಾರ: ರೈತರ ಆಕ್ರೋಶ

ರಾತ್ರೋರಾತ್ರಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಹೋರಾಟದ ರೂಪರೇಷು ಕುರಿತು ಸಭೆ ಇಂದು ರೈತರು ಸಭೆ ನಡೆಸಲಿದ್ದಾರೆ. ಇನ್ನು ಕೆಆರ್​ಎಸ್​​ ಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿ ಇದ್ದು, ಸದ್ಯ ಜಲಾಶಯದಲ್ಲಿ 101.58 ಅಡಿ ನೀರು ಸಂಗ್ರಹವಾಗಿದೆ.

ರಾತ್ರೋರಾತ್ರಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟ ರಾಜ್ಯ ಸರ್ಕಾರ: ರೈತರ ಆಕ್ರೋಶ
ಕೆಆರ್​​ಎಸ್​ ಜಲಾಶಯ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Aug 30, 2023 | 11:26 AM

Share

ಮಂಡ್ಯ: ಮುಂಗಾರು ಮಳೆಯ (Monsoon Rain) ಕೊರತೆಯಿಂದ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜೂನ್​ನಿ೦ದ ಈವರೆಗೆ ಮು೦ಗಾರು ಅವಧಿಯಲ್ಲಿ ರಾಜ್ಯದಲ್ಲಿ 666 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ, ರಾಜ್ಯದಲ್ಲಿ ಈವರೆಗೆ ಕೇವಲ 490ಮಿ.ಮೀ.ಮಳೆಯಾಗಿದೆ. ಇದರಿಂದ ರಾಜ್ಯದ 130 ತಾಲೂಕುಗಳಲ್ಲಿ ಬರಗಾಲ ಬಿದ್ದಿದ್ದು, ಜಲಾಶಯಗಳಿಗೆ ನೀರು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಮಂದಾಕಿನಿ ಕಾವೇರಿ (Cauvery) ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಆದರೂ ಕೂಡ ಕಾವೇರಿ ‌ನೀರು ನಿರ್ವಹಣ ಪ್ರಾಧಿಕಾರದ ಆದೇಶಕ್ಕೆ ಮಣಿದು ರಾಜ್ಯ ಸರ್ಕಾರ ರಾತ್ರಿಯಿಂದಲೇ ಕೆಆರ್​​ಎಸ್ (KRS) ಜಲಾಶಯದಿಂದ ಹೆಚ್ಚುವರಿ ಕ್ಯೂಸೆಸ್ ನೀರನ್ನು ತಮಿಳುನಾಡಿಗೆ ಬಿಟ್ಟಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ನಿನ್ನೆ (ಆ.29) ರಂದು ಕೆಆರ್​ಎಸ್​ ಜಲಾಯಶದಿಂದ ಎರಡು ಸಾವಿರ ಕ್ಯೂಸೆಕ್​ ನೀರನ್ನು ನದಿಗೆ ಬಿಡಲಾಗುತ್ತು. ಸಾಯಂಕಾಲದ ಹೊತ್ತಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿನಿತ್ಯ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ ಜಲಾಶಯದಿಂದ‌‌ ಕಾವೇರಿ ನದಿಗೆ 4,448 ಕ್ಯೂಸೆಕ್​ ನೀರು ಬಿಡುಗಡೆ ಮಾಡಿದೆ. 15 ದಿನಗಳ ಕಾಲ ನೀರು ಹೀಗೆ ಹರಿಸಿದರೆ ಡ್ಯಾಮ್ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: CWRC ಹೇಳಿದಷ್ಟೇ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ

ರಾತ್ರೋರಾತ್ರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಹೋರಾಟದ ರೂಪರೇಷು ಕುರಿತು ಸಭೆ ಇಂದು ರೈತರು ಸಭೆ ನಡೆಸಲಿದ್ದಾರೆ. ಇನ್ನು ಕೆಆರ್​ಎಸ್​​ ಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿ ಇದ್ದು, ಸದ್ಯ ಜಲಾಶಯದಲ್ಲಿ 101.58 ಅಡಿ ನೀರು ಸಂಗ್ರಹವಾಗಿದೆ.

ಕರ್ನಾಟಕಕ್ಕೆ ಸೂಚನೆ ನೀಡಿದ್ದೇನು?

ಪ್ರಸ್ತುತ ಕರ್ನಾಟಕ ತಮಿಳುನಾಡಿಗೆ 1900 ಕ್ಯೂಸೆಕ್‌ ನೀರು ಹರಿಸುತ್ತಿದೆ. ಆದರೆ ಸಭೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು ಹೆಚ್ಚುವರಿಯಾಗಿ 3,100 ಕ್ಯೂಸೆಕ್ಸ್​ ನೀರು ಹರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು