AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟ ರಾಜ್ಯ ಸರ್ಕಾರ: ರೈತರ ಆಕ್ರೋಶ

ರಾತ್ರೋರಾತ್ರಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಹೋರಾಟದ ರೂಪರೇಷು ಕುರಿತು ಸಭೆ ಇಂದು ರೈತರು ಸಭೆ ನಡೆಸಲಿದ್ದಾರೆ. ಇನ್ನು ಕೆಆರ್​ಎಸ್​​ ಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿ ಇದ್ದು, ಸದ್ಯ ಜಲಾಶಯದಲ್ಲಿ 101.58 ಅಡಿ ನೀರು ಸಂಗ್ರಹವಾಗಿದೆ.

ರಾತ್ರೋರಾತ್ರಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟ ರಾಜ್ಯ ಸರ್ಕಾರ: ರೈತರ ಆಕ್ರೋಶ
ಕೆಆರ್​​ಎಸ್​ ಜಲಾಶಯ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Aug 30, 2023 | 11:26 AM

Share

ಮಂಡ್ಯ: ಮುಂಗಾರು ಮಳೆಯ (Monsoon Rain) ಕೊರತೆಯಿಂದ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜೂನ್​ನಿ೦ದ ಈವರೆಗೆ ಮು೦ಗಾರು ಅವಧಿಯಲ್ಲಿ ರಾಜ್ಯದಲ್ಲಿ 666 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ, ರಾಜ್ಯದಲ್ಲಿ ಈವರೆಗೆ ಕೇವಲ 490ಮಿ.ಮೀ.ಮಳೆಯಾಗಿದೆ. ಇದರಿಂದ ರಾಜ್ಯದ 130 ತಾಲೂಕುಗಳಲ್ಲಿ ಬರಗಾಲ ಬಿದ್ದಿದ್ದು, ಜಲಾಶಯಗಳಿಗೆ ನೀರು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಮಂದಾಕಿನಿ ಕಾವೇರಿ (Cauvery) ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಆದರೂ ಕೂಡ ಕಾವೇರಿ ‌ನೀರು ನಿರ್ವಹಣ ಪ್ರಾಧಿಕಾರದ ಆದೇಶಕ್ಕೆ ಮಣಿದು ರಾಜ್ಯ ಸರ್ಕಾರ ರಾತ್ರಿಯಿಂದಲೇ ಕೆಆರ್​​ಎಸ್ (KRS) ಜಲಾಶಯದಿಂದ ಹೆಚ್ಚುವರಿ ಕ್ಯೂಸೆಸ್ ನೀರನ್ನು ತಮಿಳುನಾಡಿಗೆ ಬಿಟ್ಟಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ನಿನ್ನೆ (ಆ.29) ರಂದು ಕೆಆರ್​ಎಸ್​ ಜಲಾಯಶದಿಂದ ಎರಡು ಸಾವಿರ ಕ್ಯೂಸೆಕ್​ ನೀರನ್ನು ನದಿಗೆ ಬಿಡಲಾಗುತ್ತು. ಸಾಯಂಕಾಲದ ಹೊತ್ತಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿನಿತ್ಯ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ ಜಲಾಶಯದಿಂದ‌‌ ಕಾವೇರಿ ನದಿಗೆ 4,448 ಕ್ಯೂಸೆಕ್​ ನೀರು ಬಿಡುಗಡೆ ಮಾಡಿದೆ. 15 ದಿನಗಳ ಕಾಲ ನೀರು ಹೀಗೆ ಹರಿಸಿದರೆ ಡ್ಯಾಮ್ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: CWRC ಹೇಳಿದಷ್ಟೇ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ

ರಾತ್ರೋರಾತ್ರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಹೋರಾಟದ ರೂಪರೇಷು ಕುರಿತು ಸಭೆ ಇಂದು ರೈತರು ಸಭೆ ನಡೆಸಲಿದ್ದಾರೆ. ಇನ್ನು ಕೆಆರ್​ಎಸ್​​ ಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿ ಇದ್ದು, ಸದ್ಯ ಜಲಾಶಯದಲ್ಲಿ 101.58 ಅಡಿ ನೀರು ಸಂಗ್ರಹವಾಗಿದೆ.

ಕರ್ನಾಟಕಕ್ಕೆ ಸೂಚನೆ ನೀಡಿದ್ದೇನು?

ಪ್ರಸ್ತುತ ಕರ್ನಾಟಕ ತಮಿಳುನಾಡಿಗೆ 1900 ಕ್ಯೂಸೆಕ್‌ ನೀರು ಹರಿಸುತ್ತಿದೆ. ಆದರೆ ಸಭೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು ಹೆಚ್ಚುವರಿಯಾಗಿ 3,100 ಕ್ಯೂಸೆಕ್ಸ್​ ನೀರು ಹರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ