ಮಂಡ್ಯ: ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ಹರಿಯದ ನೀರು; ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ

ಸಕ್ಕರೆ ನಗರಿ ಮಂಡ್ಯ ಜಿಲ್ಲೆಯ ಪ್ರಧಾನ ಕಸುಬು ಕೃಷಿ. ಅದರಲ್ಲೂ ಕೆಆರ್​ಎಸ್ ಜಲಾಶಯದ ನೀರನ್ನೇ ಅವಲಂಬಿಸಿ ಲಕ್ಷಾಂತರ ರೈತರು ಬೆಳಗಳನ್ನ ಬೆಳೆಯುತ್ತಾರೆ. ಆದರೆ, ಕೆಆರ್​ಎಸ್ ನಾಲೆಗಳ ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ನೀರು ಹರಿಸಿಲ್ಲ. ಹೀಗಾಗಿ ಈ ಬಾರಿ ರೈತರು ಬೆಳೆಯನ್ನು ಕೂಡ ಬೆಳೆದಿಲ್ಲ. ಇದೀಗ ಕಾಮಗಾರಿ ಕೂಡ ವಿಳಂಭವಾಗುತ್ತಿದೆ ಎಂದು ರೈತ ಸಂಘಟನೆ ಆರೋಪ ಮಾಡುತ್ತಿದ್ದು, ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕುತ್ತಿದೆ.

ಮಂಡ್ಯ: ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ಹರಿಯದ ನೀರು; ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ
ಮಂಡ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 15, 2024 | 9:55 PM

ಮಂಡ್ಯ, ಮೇ.15: ಜಿಲ್ಲೆಯಲ್ಲಿ ನಾಲೆಗಳ ಆಧುನೀಕರಣ ಹೆಸರಲ್ಲಿ ಈ ಬಾರಿ ನಾಲೆಗಳಿಗೆ(Canals)ನೀರು ಹರಿಸಿಲ್ಲ. ಹೀಗಾಗಿ ಈ ಬಾರಿ ಮಂಡ್ಯ ಜಿಲ್ಲೆಯ ಬಹುತೇಕ ರೈತರು ಬೆಳೆಯನ್ನ ಬೆಳೆಯದೇ, ಇರುವ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂದಹಾಗೆ ಮಂಡ್ಯ(Mandya) ಜಿಲ್ಲೆಯ ಕೊನೆಯ ಭಾಗದ ರೈತರಿಗೆ ನಾಲೆಗಳ ಮೂಲಕ ನೀರು ತಲುಪಿಲ್ಲ. ನೀರು ಪೋಲಾಗುತ್ತಿದೆ ಎಂಬ ಉದ್ದೇಶದಿಂದ ನೂರಾರು ಕೋಟಿ ರೂ. ವೆಚ್ಚದಲ್ಲಿ ಮಂಡ್ಯದಲ್ಲಿ ವಿಸಿ ನಾಲೆಗಳ ಆಧುನಿಕರಣ ನಡೆಯುತ್ತಿದೆ. ಆದರೆ, ಕಾಮಗಾರಿ ಆರಂಭಗೊಂಡು ಆರು ತಿಂಗಳುಗಳು ಕಳೆಯುತ್ತಿದ್ದರೂ ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ.

ಸುಮಾರು 40 ಕಿಲೋ ಮೀಟರ್​ನಷ್ಟು ಕಾಮಗಾರಿಯಲ್ಲಿ ಕೇವಲ 18 ಕಿಲೋ ಮೀಟರ್ ಕಾಮಗಾರಿ ಮಾತ್ರ ನಡೆದಿದೆ. ಹೀಗಾಗಿ ಮತ್ತೆ ಕಾಮಗಾರಿ ಹೆಸರಲ್ಲಿ ನೀರು ಹರಿಸದೇ ಇದ್ದರೇ ಕಾಮಗಾರಿಗಳನ್ನ ಮಾಡಲು ಬಿಡುವುದಿಲ್ಲ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ. ಅಂದಹಾಗೆ ಮಂಡ್ಯ, ಕೃಷಿ ಪ್ರಧಾನ ಜಿಲ್ಲೆ. ಲಕ್ಷಾಂತರ ಹೆಕ್ಟರ್ ಪ್ರದೇಶ ವಿಸಿ ನಾಲೆಯನ್ನೇ ಅವಲಂಬಿಸಿದೆ. ಕೆಆರ್​ಎಸ್ ಜಲಾಶಯವೇ ಜೀವಾಳ. ಇದೇ ಕೆಆರ್​ಎಸ್ ಜಲಾಶಯದ ಮೂಲಕ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಸುಮಾರು ಮಂಡ್ಯ ಜಿಲ್ಲೆಯಲ್ಲಿ 500 ಕಿಲೋ ಮೀಟರ್ ನಷ್ಟು ನಾಲೆಗಳು ಇವೆ. ಆದರೆ, ಕೊನೆ ಭಾಗದ ರೈತರಿಗೆ ನಾಲೆಗಳಲ್ಲಿ ನೀರು ಹರಿಯುತ್ತಿರಲಿಲ್ಲ.

ಇದನ್ನೂ ಓದಿ:ರಾಜಧಾನಿ ಮಗ್ಗುಲಲ್ಲಿ ಬೆಳೆ ಬೆಳೆಯುತ್ತಿದ್ದರೂ 600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕೆಐಎಡಿಬಿ! ರೈತರ ಆಕ್ರೋಶ

ಹೀಗಾಗಿ ಕಾಮಗಾರಿಯನ್ನ ಆರಂಭಿಸುವ ನಿಟ್ಟಿನಲ್ಲಿ ಈ ಭಾರಿ ರೈತರಿಗೆ ತಿಳಿಸಿ ಬೆಳೆಗಳನ್ನ ಬೆಳೆಯದಂತೆ ಸೂಚನೆ ನೀಡಲಾಗಿತ್ತು. ಇದರಿಂದ ರೈತರು ಬೆಳೆಯನ್ನ ಬೆಳೆದಿಲ್ಲ. ಜೊತೆಗೆ ಇರುವ ಬೆಳೆಗಳು ಕೂಡ ಒಣಗಿವೆ. ರೈತರು ಸಹ ಕಾಮಗಾರಿ ಬೇಗನೇ ಮುಗಿದು ನಾಲೆಗಳಲ್ಲಿ ನೀರು ಹರಿಯುತ್ತದೆ ಅಂದುಕೊಂಡಿದ್ರು. ಆದರೆ, ಕಾಮಗಾರಿ ಪೂರ್ಣಗೊಳ್ಳದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಒಟ್ಟಾರೆ ನಾಲೆಗಳ ಕಾಮಗಾರಿ ಕುಂಠಿತಗೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ