AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ಹರಿಯದ ನೀರು; ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ

ಸಕ್ಕರೆ ನಗರಿ ಮಂಡ್ಯ ಜಿಲ್ಲೆಯ ಪ್ರಧಾನ ಕಸುಬು ಕೃಷಿ. ಅದರಲ್ಲೂ ಕೆಆರ್​ಎಸ್ ಜಲಾಶಯದ ನೀರನ್ನೇ ಅವಲಂಬಿಸಿ ಲಕ್ಷಾಂತರ ರೈತರು ಬೆಳಗಳನ್ನ ಬೆಳೆಯುತ್ತಾರೆ. ಆದರೆ, ಕೆಆರ್​ಎಸ್ ನಾಲೆಗಳ ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ನೀರು ಹರಿಸಿಲ್ಲ. ಹೀಗಾಗಿ ಈ ಬಾರಿ ರೈತರು ಬೆಳೆಯನ್ನು ಕೂಡ ಬೆಳೆದಿಲ್ಲ. ಇದೀಗ ಕಾಮಗಾರಿ ಕೂಡ ವಿಳಂಭವಾಗುತ್ತಿದೆ ಎಂದು ರೈತ ಸಂಘಟನೆ ಆರೋಪ ಮಾಡುತ್ತಿದ್ದು, ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕುತ್ತಿದೆ.

ಮಂಡ್ಯ: ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ಹರಿಯದ ನೀರು; ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ
ಮಂಡ್ಯ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 15, 2024 | 9:55 PM

Share

ಮಂಡ್ಯ, ಮೇ.15: ಜಿಲ್ಲೆಯಲ್ಲಿ ನಾಲೆಗಳ ಆಧುನೀಕರಣ ಹೆಸರಲ್ಲಿ ಈ ಬಾರಿ ನಾಲೆಗಳಿಗೆ(Canals)ನೀರು ಹರಿಸಿಲ್ಲ. ಹೀಗಾಗಿ ಈ ಬಾರಿ ಮಂಡ್ಯ ಜಿಲ್ಲೆಯ ಬಹುತೇಕ ರೈತರು ಬೆಳೆಯನ್ನ ಬೆಳೆಯದೇ, ಇರುವ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂದಹಾಗೆ ಮಂಡ್ಯ(Mandya) ಜಿಲ್ಲೆಯ ಕೊನೆಯ ಭಾಗದ ರೈತರಿಗೆ ನಾಲೆಗಳ ಮೂಲಕ ನೀರು ತಲುಪಿಲ್ಲ. ನೀರು ಪೋಲಾಗುತ್ತಿದೆ ಎಂಬ ಉದ್ದೇಶದಿಂದ ನೂರಾರು ಕೋಟಿ ರೂ. ವೆಚ್ಚದಲ್ಲಿ ಮಂಡ್ಯದಲ್ಲಿ ವಿಸಿ ನಾಲೆಗಳ ಆಧುನಿಕರಣ ನಡೆಯುತ್ತಿದೆ. ಆದರೆ, ಕಾಮಗಾರಿ ಆರಂಭಗೊಂಡು ಆರು ತಿಂಗಳುಗಳು ಕಳೆಯುತ್ತಿದ್ದರೂ ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ.

ಸುಮಾರು 40 ಕಿಲೋ ಮೀಟರ್​ನಷ್ಟು ಕಾಮಗಾರಿಯಲ್ಲಿ ಕೇವಲ 18 ಕಿಲೋ ಮೀಟರ್ ಕಾಮಗಾರಿ ಮಾತ್ರ ನಡೆದಿದೆ. ಹೀಗಾಗಿ ಮತ್ತೆ ಕಾಮಗಾರಿ ಹೆಸರಲ್ಲಿ ನೀರು ಹರಿಸದೇ ಇದ್ದರೇ ಕಾಮಗಾರಿಗಳನ್ನ ಮಾಡಲು ಬಿಡುವುದಿಲ್ಲ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ. ಅಂದಹಾಗೆ ಮಂಡ್ಯ, ಕೃಷಿ ಪ್ರಧಾನ ಜಿಲ್ಲೆ. ಲಕ್ಷಾಂತರ ಹೆಕ್ಟರ್ ಪ್ರದೇಶ ವಿಸಿ ನಾಲೆಯನ್ನೇ ಅವಲಂಬಿಸಿದೆ. ಕೆಆರ್​ಎಸ್ ಜಲಾಶಯವೇ ಜೀವಾಳ. ಇದೇ ಕೆಆರ್​ಎಸ್ ಜಲಾಶಯದ ಮೂಲಕ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಸುಮಾರು ಮಂಡ್ಯ ಜಿಲ್ಲೆಯಲ್ಲಿ 500 ಕಿಲೋ ಮೀಟರ್ ನಷ್ಟು ನಾಲೆಗಳು ಇವೆ. ಆದರೆ, ಕೊನೆ ಭಾಗದ ರೈತರಿಗೆ ನಾಲೆಗಳಲ್ಲಿ ನೀರು ಹರಿಯುತ್ತಿರಲಿಲ್ಲ.

ಇದನ್ನೂ ಓದಿ:ರಾಜಧಾನಿ ಮಗ್ಗುಲಲ್ಲಿ ಬೆಳೆ ಬೆಳೆಯುತ್ತಿದ್ದರೂ 600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕೆಐಎಡಿಬಿ! ರೈತರ ಆಕ್ರೋಶ

ಹೀಗಾಗಿ ಕಾಮಗಾರಿಯನ್ನ ಆರಂಭಿಸುವ ನಿಟ್ಟಿನಲ್ಲಿ ಈ ಭಾರಿ ರೈತರಿಗೆ ತಿಳಿಸಿ ಬೆಳೆಗಳನ್ನ ಬೆಳೆಯದಂತೆ ಸೂಚನೆ ನೀಡಲಾಗಿತ್ತು. ಇದರಿಂದ ರೈತರು ಬೆಳೆಯನ್ನ ಬೆಳೆದಿಲ್ಲ. ಜೊತೆಗೆ ಇರುವ ಬೆಳೆಗಳು ಕೂಡ ಒಣಗಿವೆ. ರೈತರು ಸಹ ಕಾಮಗಾರಿ ಬೇಗನೇ ಮುಗಿದು ನಾಲೆಗಳಲ್ಲಿ ನೀರು ಹರಿಯುತ್ತದೆ ಅಂದುಕೊಂಡಿದ್ರು. ಆದರೆ, ಕಾಮಗಾರಿ ಪೂರ್ಣಗೊಳ್ಳದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಒಟ್ಟಾರೆ ನಾಲೆಗಳ ಕಾಮಗಾರಿ ಕುಂಠಿತಗೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ