AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಮತದಾನದ ಬಳಿಕ ತುಮಕೂರು, ಮಂಡ್ಯದಲ್ಲಿ ದುರಂತ ಅಂತ್ಯಕಂಡ ಮತದಾರ

ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ ಇಂದು(ಏ.26) ನಡೆಯುತ್ತಿದೆ. ಈ ಮಧ್ಯೆ ತುಮಕೂರಿನಲ್ಲಿ ಮತದಾನದ ಬಳಿಕ ದಿಢೀರನೆ ಕುಸಿದು ಬಿದ್ದು ಮತದಾರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತ್ತ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚನ್ನೇಗೌಡನಹಳ್ಳಿಯಲ್ಲಿ ಅಜ್ಜ ಮೃತಪಟ್ಟಿದ್ದಾರೆ.

ಪ್ರತ್ಯೇಕ ಘಟನೆ: ಮತದಾನದ ಬಳಿಕ ತುಮಕೂರು, ಮಂಡ್ಯದಲ್ಲಿ ದುರಂತ ಅಂತ್ಯಕಂಡ ಮತದಾರ
ಮೃತ ವ್ಯಕ್ತಿ
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 26, 2024 | 4:36 PM

Share

ತುಮಕೂರು, ಏ.26: ಮತದಾನದ ಬಳಿಕ ದಿಢೀರನೆ ಕುಸಿದು ಬಿದ್ದು ಮತದಾರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ(Tumakuru) ನಡೆದಿದೆ. ಮಯೂರ ಯುವ ವೇದಿಕೆಯ ಸದಸ್ಯ ಹೆಚ್‌.ಕೆ.ರಮೇಶ್, ಮೃತಪಟ್ಟವರು. ಇಂದು(ಏ.26) ನಗರದ ಎಸ್‌ಎಸ್‌ ಪುರಂ ಮತಗಟ್ಟೆಗೆ ಪತ್ನಿ ಸಮೇತ ಬಂದು ಮತ ಚಲಾಯಿಸಿದ್ದರು. ಬಳಿಕ ತಮ್ಮದೇ ಮಾಲೀಕತ್ವದ ಬಟ್ಟೆ ಅಂಗಡಿಯಲ್ಲಿದ್ದಾಗ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಮತದಾನ ಬಳಿಕ ಸಾವನ್ನಪ್ಪಿದ ಅಜ್ಜ

ಮಂಡ್ಯ: ಮತದಾನ ಬಳಿಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚನ್ನೇಗೌಡನಹಳ್ಳಿಯ ಅಜ್ಜ ಮೃತಪಟ್ಟಿದ್ದಾರೆ. ಕುಂದೂರಯ್ಯ (87) ಸಾವನ್ನಪ್ಪಿರುವ ಅಜ್ಜ. ಕಾಲು ನೋವಿನಿಂದ ಬಳಲುತ್ತಿದ್ದ ಕುಂದೂರಯ್ಯ ಅವರು, ಇಂದು ಬೆಳಗ್ಗೆಯೇ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದರು. ಬಳಿಕ ಮನೆಗೆ ಬಂದಿದ್ದ ಮೇಲೆ ಅಜ್ಜ ದಿಢೀರ್​ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಮಣಿಪುರ ಹಿಂಸಾಚಾರ: ನಮ್ಮ ನಾಯಕರನ್ನು ನಂಬುವುದಿಲ್ಲ, ಈ ಚುನಾವಣೆಗೆ ಅರ್ಥವಿಲ್ಲ: ಸಂತ್ರಸ್ತರು

ಮತದಾನ ಮಾಡಿ ಹೊರ ಬಂದು ಕೈ ಮುರಿದುಕೊಂಡ ವೃದ್ದೆ

ಮೈಸೂರು: ಮೈಸೂರಿನ ಕುವೆಂಪುನಗರದ ಎಂ.ಬ್ಲಾಕ್ ಗೋಕುಲ್ ಶಾಲೆಯ ಬೂತ್ ಬಳಿ ಮತದಾನ ಮಾಡಿ ಹೊರ ಬಂದ ವೃದ್ದೆಯೊಬ್ಬರು ಕೈ ಮುರಿದುಕೊಂಡ ಘಟನೆ ನಡೆದಿದೆ. ಜಯಮ್ಮ (76) ಬಿದ್ದು ಕೈ ಮುರಿದುಕೊಂಡ ವೃದ್ದೆ. ಮತದಾನ ಮಾಡಿ ಹೊರ ಬಂದಿದ್ದರು. ಈ ವೇಳೆ ಪಕ್ಕದಲ್ಲಿದ್ದ ಹಸುಗಳ ಕಾಳಗಕ್ಕೆ ಹೆದರಿ ಓಡುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಕೈ ಮುರಿತವಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಸೇರಿಸಿ ವೃದ್ದ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್