AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ; ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ

ನೀರು ಬಿಡುಗಡೆ ವಿಚಾರವಾಗಿ ಮಂಗಳವಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಈ ಸಭೆಯ ತೀರ್ಮಾನ ಏನೆಂಬುದನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ರೈತರು ಮುಂದಾಗಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಕಾವೇರಿ ಕಿಚ್ಚು ಮತಷ್ಟು ತಾರಕ್ಕಕ್ಕೇರಲಿದೆ.

ಮಂಡ್ಯ; ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ
ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ
TV9 Web
| Edited By: |

Updated on: Sep 11, 2023 | 2:54 PM

Share

ಮಂಡ್ಯ, ಸೆಪ್ಟೆಂಬರ್ 11: ಕೆಆರ್​ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನದಿ ನೀರು (Cauvery Water) ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ ಕರೆ ನೀಡಲಾಗಿದ್ದ ಬೆಂಗಳೂರು ಮೈಸೂರು ಹೆದ್ದಾರಿ (Bangalore Mysore Highway) ಬಂದ್ ಅನ್ನು ಕರ್ನಾಟಕ ರಾಜ್ಯ ರೈತ ಸಂಘ ಹಿಂಪಡೆದಿದೆ. ಈ ಹಿಂದೆ ರೈತ ಸಂಘವು ಸೋಮವಾರ ಬಂದ್​ಗೆ ಕರೆ ನೀಡಿತ್ತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಹೆದ್ದಾರಿ ಬಂದ್​​ಗೆ ಕರೆ ಕೊಟ್ಟಿದ್ದರು. ಸದ್ಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಿದ ಕಾರಣ ಬಂದ್ ಹಿಂಪಡೆಯಲಾಗಿದೆ.

ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹೋರಾಟ ಮುಂದುವರಿಸಿದೆ. ಎಂದಿನಂತೆಯೇ ಶ್ರೀರಂಗಪಟ್ಟಣದಲ್ಲಿ ರೈತರ ಧರಣಿ ಮುಂದುವರಿದಿದೆ. ಶ್ರೀರಂಗಪಟ್ಟಣದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆಯಲು ಮುಂದಾಗಿದ್ದ ರೈತರು ಬಂದ್ ವಾಪಸ್ ಪಡೆದು ನಾಳಿನ ಸಭೆಯತ್ತ ಗಮನ ಕೇಂದ್ರೀಕರಿಸಿದ್ದಾರೆ. ರೈತರ ಹೋರಾಟ ಮುಂದುವರಿಕೆಯ ಸ್ಪಷ್ಟ ಚಿತ್ರಣ ನಾಳಿನ ಸಭೆಯ ನಂತರ ಸಿಗಲಿದೆ.

ನೀರು ಬಿಡುಗಡೆ ವಿಚಾರವಾಗಿ ಮಂಗಳವಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಈ ಸಭೆಯ ತೀರ್ಮಾನ ಏನೆಂಬುದನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ರೈತರು ಮುಂದಾಗಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಕಾವೇರಿ ಕಿಚ್ಚು ಮತಷ್ಟು ತಾರಕ್ಕಕ್ಕೇರಲಿದೆ. ಈಗಾಗಲೇ ಜಿಲ್ಲಾದ್ಯಂತ ರೈತರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ.

ನಂಜನಗೂಡಿನಲ್ಲಿ ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ

ತಮಿಳುನಾಡಿಗೆ ಕೆಆರ್​ಎಸ್ ಡ್ಯಾಮ್​ನಿಂದ ನೀರು ಬಿಡುಗಡೆ ವಿಚಾರವಾಗಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ರೈತರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಅರೆ ಬೆತ್ತಲೆಯಾಗಿ ಕಲ್ಲು ಹೊತ್ತುಕೊಂಡು ಕಪಿಲಾ ನದಿಗಿಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ಪ್ರತಿಭಟನೆ ನಡೆಸಿವೆ. ಇಷ್ಟೇ ಅಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಸ್ತೆ ತಡೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ನಮ್ಮ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದೆ ಕಂಗಾಲಾಗಿದ್ದಾರೆ. ನಮ್ಮ ನಾಲೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ಬಿಟ್ಟಿದ್ದು ಖಂಡನೀಯ. ರಾಜ್ಯದಲ್ಲಿರುವ ಸಂಸದರು ಸತ್ತು ಹೋಗಿದ್ದಾರೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕೆರೆಕಟ್ಟೆಗಳು ಹಾಗೂ ನಾಲೆಗಳಿಗೆ ಕೂಡಲೇ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸರ್ಕಾರವನ್ನು ಆಗ್ರಹಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ