AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ; ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ

ನೀರು ಬಿಡುಗಡೆ ವಿಚಾರವಾಗಿ ಮಂಗಳವಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಈ ಸಭೆಯ ತೀರ್ಮಾನ ಏನೆಂಬುದನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ರೈತರು ಮುಂದಾಗಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಕಾವೇರಿ ಕಿಚ್ಚು ಮತಷ್ಟು ತಾರಕ್ಕಕ್ಕೇರಲಿದೆ.

ಮಂಡ್ಯ; ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ
ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ
TV9 Web
| Edited By: |

Updated on: Sep 11, 2023 | 2:54 PM

Share

ಮಂಡ್ಯ, ಸೆಪ್ಟೆಂಬರ್ 11: ಕೆಆರ್​ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನದಿ ನೀರು (Cauvery Water) ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ ಕರೆ ನೀಡಲಾಗಿದ್ದ ಬೆಂಗಳೂರು ಮೈಸೂರು ಹೆದ್ದಾರಿ (Bangalore Mysore Highway) ಬಂದ್ ಅನ್ನು ಕರ್ನಾಟಕ ರಾಜ್ಯ ರೈತ ಸಂಘ ಹಿಂಪಡೆದಿದೆ. ಈ ಹಿಂದೆ ರೈತ ಸಂಘವು ಸೋಮವಾರ ಬಂದ್​ಗೆ ಕರೆ ನೀಡಿತ್ತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಹೆದ್ದಾರಿ ಬಂದ್​​ಗೆ ಕರೆ ಕೊಟ್ಟಿದ್ದರು. ಸದ್ಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಿದ ಕಾರಣ ಬಂದ್ ಹಿಂಪಡೆಯಲಾಗಿದೆ.

ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹೋರಾಟ ಮುಂದುವರಿಸಿದೆ. ಎಂದಿನಂತೆಯೇ ಶ್ರೀರಂಗಪಟ್ಟಣದಲ್ಲಿ ರೈತರ ಧರಣಿ ಮುಂದುವರಿದಿದೆ. ಶ್ರೀರಂಗಪಟ್ಟಣದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆಯಲು ಮುಂದಾಗಿದ್ದ ರೈತರು ಬಂದ್ ವಾಪಸ್ ಪಡೆದು ನಾಳಿನ ಸಭೆಯತ್ತ ಗಮನ ಕೇಂದ್ರೀಕರಿಸಿದ್ದಾರೆ. ರೈತರ ಹೋರಾಟ ಮುಂದುವರಿಕೆಯ ಸ್ಪಷ್ಟ ಚಿತ್ರಣ ನಾಳಿನ ಸಭೆಯ ನಂತರ ಸಿಗಲಿದೆ.

ನೀರು ಬಿಡುಗಡೆ ವಿಚಾರವಾಗಿ ಮಂಗಳವಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಈ ಸಭೆಯ ತೀರ್ಮಾನ ಏನೆಂಬುದನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ರೈತರು ಮುಂದಾಗಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಕಾವೇರಿ ಕಿಚ್ಚು ಮತಷ್ಟು ತಾರಕ್ಕಕ್ಕೇರಲಿದೆ. ಈಗಾಗಲೇ ಜಿಲ್ಲಾದ್ಯಂತ ರೈತರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ.

ನಂಜನಗೂಡಿನಲ್ಲಿ ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ

ತಮಿಳುನಾಡಿಗೆ ಕೆಆರ್​ಎಸ್ ಡ್ಯಾಮ್​ನಿಂದ ನೀರು ಬಿಡುಗಡೆ ವಿಚಾರವಾಗಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ರೈತರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಅರೆ ಬೆತ್ತಲೆಯಾಗಿ ಕಲ್ಲು ಹೊತ್ತುಕೊಂಡು ಕಪಿಲಾ ನದಿಗಿಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ಪ್ರತಿಭಟನೆ ನಡೆಸಿವೆ. ಇಷ್ಟೇ ಅಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಸ್ತೆ ತಡೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ನಮ್ಮ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದೆ ಕಂಗಾಲಾಗಿದ್ದಾರೆ. ನಮ್ಮ ನಾಲೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ಬಿಟ್ಟಿದ್ದು ಖಂಡನೀಯ. ರಾಜ್ಯದಲ್ಲಿರುವ ಸಂಸದರು ಸತ್ತು ಹೋಗಿದ್ದಾರೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕೆರೆಕಟ್ಟೆಗಳು ಹಾಗೂ ನಾಲೆಗಳಿಗೆ ಕೂಡಲೇ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸರ್ಕಾರವನ್ನು ಆಗ್ರಹಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ