AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೂ ವಕ್ಫ್ ಕಂಟಕ, ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ

ರೈತರ ಆಸ್ತಿ ಪಹಣಿಯಲ್ಲಿ ಬರುತ್ತಿದ್ದ ವಕ್ಫ್ ಹೆಸರಿನ ಬಿಸಿ ಹಿಂದೂ ಮಠ ಮಂದಿರಗಳಿಗೂ ತಟ್ಟಿತ್ತು. ಇದೀಗ ದೇವಾಲಯಗಳಿಗೂ ಸಮಸ್ಯೆ ಎದುರಾಗತೊಡಗಿದೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೂ ವಕ್ಫ್ ಕಂಟಕ ಎದುರಾಗಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ವಿವರ ಇಲ್ಲಿದೆ.

ಮಂಡ್ಯ: ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೂ ವಕ್ಫ್ ಕಂಟಕ, ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ
ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನ
ಪ್ರಶಾಂತ್​ ಬಿ.
| Edited By: |

Updated on: Nov 01, 2024 | 7:38 AM

Share

ಮಂಡ್ಯ, ನವೆಂಬರ್ 1: ದಕ್ಷಿಣ ಕರ್ನಾಟಕದಲ್ಲಿಯೂ ವಕ್ಫ್ ಆತಂಕ ಎದುರಾಗಿರುವುದು ಮತ್ತು ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಿರ್ದಿಷ್ಟ ಜಮೀನನ್ನು ತಮ್ಮ ಹೆಸರಿಗೆ ಪಹಣಿ ಮಾಡಿಕೊಡುವಂತೆ ಮುಸ್ಲಿಮರು ಮನವಿ ಮಾಡಿರುವ ಬಗ್ಗೆ ಗುರುವಾರ ವರದಿಯಾಗಿತ್ತು. ಇದೀಗ ಸಮಸ್ಯೆ ಮತ್ತೊಂದು ಹಂತಕ್ಕೆ ತಲುಪಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಪಹಣಿಯಲ್ಲಿಯೂ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ತಿಳಿದುಬಂದಿದೆ. ಇದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.

ರಾಜ್ಯದಾದ್ಯಂತ ವಕ್ಫ್ ವಿಚಾರದ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ದೇಗುಲದ ಆಸ್ತಿ ದಾಖಲೆ ನೋಡಿದ ಗ್ರಾಮಸ್ಥರಿಗೆ ಶಾಕ್ ಆಗಿದೆ. ಇದರಿಂದಾಗಿ ಅವರು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಕಳೆದ ಹಲವು ವರ್ಷಗಳಿಂದ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಹೆಸರು ಪಹಣಿಯಲ್ಲಿ ಬರುತ್ತಿತ್ತು. ತಲತಲಾಂತರದಿಂದ ಚಿಕ್ಕಮ್ಮ ಚಿಕ್ಕದೇವಿಗೆ ಗ್ರಾಮದ ಜನರಿಂದ ಪೂಜಾಕೈಂಕರ್ಯ ನೆರವೇರುತ್ತಿದೆ. ಹಲವು ದಶಕಗಳ ಹಿಂದೆಯೇ ಗ್ರಾಮಸ್ಥರ ಸಹಾಯದಿಂದ ದೇಗುಲ ನಿರ್ಮಾಣವಾಗಿದೆ. ಭೂ ದಾಖಲೆ ಕೂಡ ಚಿಕ್ಕಮ್ಮ ಚಿಕ್ಕದೇವಿ ಹೆಸರಲ್ಲಿಯೇ ಇತ್ತು ಎನ್ನುತ್ತಿದ್ದಾರೆ ಗ್ರಾಮಸ್ಥರು. ಆದರೆ, ಒಂದು ವರ್ಷದ ಹಿಂದೆ ದಿಢೀರಾಗಿ ‘ವಕ್ಫ್ ಆಸ್ತಿ’ ಎಂದು ನಮೂದಿಸಲಾಗಿದೆ. ಸರ್ವೆ ನಂಬರ್ 74 ರಲ್ಲಿರುವ ದೇಗುಲ ಹಾಗೂ ದೇಗುಲಕ್ಕೆ ಸೇರಿ 6 ಗುಂಟೆ ಜಾಗ ವಕ್ಫ್ ಆಸ್ತಿ ಎಂದು ನಮೂದಾಗಿದೆ.

ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ

Karnataka waqf board name in Mandya Mahadevapura Chikkamma Devi Temple pahani

ವಕ್ಫ್ ಒಡೆತನದಲ್ಲಿ ದೇಗುಲವಿದೆ ಎಂಬ ಆರ್‌ಟಿಸಿ ಹಾಗೂ‌ ಭೂ ದಾಖಲೆ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಉಪವಿಭಾಗಧಿಕಾರಿ ಸೂಚನೆ ಮೇರೆಗೆ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂದು ಆರೋಪಿಸಿರುವ ಅವರು, ನಮ್ಮೂರಲ್ಲಿ ಮುಸ್ಲಿಂ ಪ್ರಾಬಲ್ಯವೂ ಇಲ್ಲ. ದೇವಾಲಯದ ಹೆಸರಲ್ಲಿದ್ದ ಆಸ್ತಿಯನ್ನು ವಕ್ಫ್​​ಗೆ ಸೇರಿಸುವಂತೆ ಗ್ರಾಮಸ್ಥರು ಪತ್ರ ಬರೆದಿಲ್ಲ. ಆದರೆ ಅದ್ಹೇಗೆ ಗ್ರಾಮಸ್ಥರ ಗಮನಕ್ಕೂ ಬಾರದೇ ವಕ್ಫ್ ಆಸ್ತಿ ಎಂದು ದಾಖಲಾಗಿದೆ? ಇದರ ಹಿಂದೆ ಹಲವು ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲೂ ವಕ್ಫ್ ಸಮಸ್ಯೆ, ವಿಜಯಪುರದ ಮತ್ತೊಂದು ಮಠಕ್ಕೆ ಬಂತು ನೋಟಿಸ್

ದೇಗುಲವಲ್ಲದೇ ರೈತರ ಜಮೀನ ಮೇಲೂ ದಾಖಲೆ ತಿದ್ದಿರುವ ಶಂಕೆ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು, ಕೂಡಲೇ ದೇಗುಲ ಹಾಗೂ ದೇಗುಲದ ಜಾಗ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿರುವುದನ್ನು ತಿದ್ದುಪಡಿ ಮಾಡಬೇಕು, ದೇಗುಲದ ಆಸ್ತಿಯೆಂದು ನಮೂದಾಗಬೇಕು ಎಂದು ಆಗ್ರಹಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು‌ ಎಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕಿಳಿಯುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ