AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಗೋಡು ಹನುಮಧ್ವಜ ತೆರವು ವಿವಾದ; ವಿರೋಧ ಪಕ್ಷಗಳಿಗೆ ಟಕ್ಕರ್ ಕೊಡಲು ಬೂದನೂರು ಉತ್ಸವ ಆಚರಣೆ

ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಅರ್ಜುನ ಸ್ತಂಭದ ಮೇಲೆ ಇದ್ದ ಹನುಮಧ್ವಜ ತೆರವು ವಿವಾದ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆ ಸಂಬಂಧ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ದ ಹಿಂದೂಪರ ಹಿಂದೂ ವಿರೋಧಿ ಪಕ್ಷ ಎಂಬ ಹಣೆಪಟ್ಟಿ ಕಟ್ಟಿದ್ರು. ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರೋ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಬೂದನೂರು ಉತ್ಸವ ಆಚರಣೆ ಮಾಡುತ್ತಿದೆ.

ಕೆರೆಗೋಡು ಹನುಮಧ್ವಜ ತೆರವು ವಿವಾದ; ವಿರೋಧ ಪಕ್ಷಗಳಿಗೆ ಟಕ್ಕರ್ ಕೊಡಲು ಬೂದನೂರು ಉತ್ಸವ ಆಚರಣೆ
ಬೂದನೂರು ಉತ್ಸವ
ಪ್ರಶಾಂತ್​ ಬಿ.
| Edited By: |

Updated on: Mar 03, 2024 | 1:16 PM

Share

ಮಂಡ್ಯ, ಮಾರ್ಚ್.03: ಕೆರಗೋಡು ಹನುಮಧ್ವಜ ತೆರವು ವಿವಾದ ಸಾಕಷ್ಟು ದೊಡ್ಡಮಟ್ಟಿಗೆ ಸುದ್ದಿಯಾಗಿತ್ತು. ಇದೇ ವಿಚಾರವನ್ನ ಇಟ್ಟುಕೊಂಡು ಬಿಜೆಪಿ (BJP) ಹಾಗೂ ಜೆಡಿಎಸ್ (JDS), ಕಾಂಗ್ರೆಸ್ (Congress) ಅನ್ನ ಹಿಂದೂ ವಿರೋಧಿ ಪಕ್ಷ ಎಂಬ ಹಣೆಪಟ್ಟಿ ಕಟ್ಟಲು ಮುಂದಾಗಿತ್ತು. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರೋ ಕಾಂಗ್ರೆಸ್, ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ಗೆ ಟಕ್ಕರ್ ಕೊಡಲು ಇದೇ ಮೊದಲ ಬಾರಿಗೆ ಸಕ್ಕರಿನಗರಿ ಮಂಡ್ಯದಲ್ಲಿ ಬೂದನೂರು ಉತ್ಸವವನ್ನ ಹಮ್ಮಿಕೊಂಡಿದೆ.

ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಅರ್ಜುನ ಸ್ತಂಭದ ಮೇಲೆ ಇದ್ದ ಹನುಮಧ್ವಜ ತೆರವು ವಿವಾದ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅದರಲ್ಲೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಾಕಷ್ಟು ಹೋರಾಟವನ್ನ ನಡೆಸಿದ್ರು. ಕಾಂಗ್ರೆಸ್ ಅನ್ನ ಹಿಂದೂ ವಿರೋಧಿ ಪಕ್ಷ ಎಂಬ ಹಣೆಪಟ್ಟಿ ಕಟ್ಟಿದ್ರು. ಈ ವಿವಾದ ಕಾಂಗ್ರೆಸ್ ಗೂ ಸಹ ದೊಡ್ಡಮಟ್ಟದ ಇರಿಸು-ಮುರಿಸು ತರಿಸಿತ್ತು. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರೋ ಕಾಂಗ್ರೆಸ್ ಸಾವಿರಾರು ವರ್ಷಗಳ ಇತಿಹಾಸ ಇರೋ ಬೂದನೂರು ಗ್ರಾಮದಲ್ಲಿ ಅದ್ದೂರಿಯಾಗಿ ಇದೇ ಮೊದಲ ಬಾರಿಗೆ ಬೂದನೂರು ಉತ್ಸವ ಆಚರಣೆ ಮಾಡುತ್ತಿದೆ.

ಅದರಲ್ಲೂ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗೆ ಕ್ಷೇತ್ರದಲ್ಲಿಯೇ ವಿವಾದ ತಾರಕಕ್ಕೇ ಏರಿತ್ತು. ಈ ನಿಟ್ಟಿನಲ್ಲಿ ಶಾಸಕನ ಕ್ಷೇತ್ರದಲ್ಲಿಯೇ ಸರ್ಕಾರದ ವತಿಯಿಂದಲೇ ಇದೇ ಮೊದಲ ಬಾರಿಗೆ ಅದ್ದೂರಿಯಾಗಿ ಬೂದನೂರು ಉತ್ಸವನ್ನ ಆಚರಣೆ ಮಾಡುತ್ತಿದೆ. ನಿನ್ನೆಯಿಂದ ಆರಂಭಗೊಂಡಿರೋ ಕಾರ್ಯಕ್ರಮ ಎರಡು ದಿನಗಳ ಕಾಲ ನಡೆಯಲಿದೆ. ಈ ಮೂಲಕ ನಾವು ಹಿಂದೂ ವಿರೋಧಿ ಅಲ್ಲ ಎಂದು ಸಾರಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮವನ್ನ ಸಚಿವ ಎನ್ ಚಲುವರಾಯಸ್ವಾಮಿ ಉದ್ಘಾಟಿಸಿ, ವಿರೋಧ ಪಕ್ಷದ ವಿರುದ್ದ ವಾಗ್ದಾಳಿ ಕೂಡ ನಡೆಸಿದ್ರು.

ಇದನ್ನೂ ಓದಿ: ಎನ್​ಇಎಫ್​ಟಿ ಹೊಸ ಮೈಲಿಗಲ್ಲು; ಒಂದೇ ದಿನ 4 ಕೋಟಿಗೂ ಹೆಚ್ಚು ಹಣದ ವಹಿವಾಟು

ಅಂದ ಹಾಗೆ ಮಂಡ್ಯ ತಾಲೂಕಿನ ಬೂದನೂರು ಗ್ರಾಮಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಈ ಕಾರ್ಯಕ್ರಮದಲ್ಲಿ ಇರುವ ಎರಡು ಪ್ರಮುಖ ದೇವಾಲಯಗಳು ಇತಿಹಾಸವನ್ನ ಸಾರಿ ಹೇಳುತ್ತಿವೆ. ಕಾಶಿ ವಿಶ್ವನಾಥಸ್ವಾಮಿ ದೇವಸ್ಥಾನ ಹಾಗೂ ಆನಂತ ಪದ್ಮನಾಭ ದೇವಸ್ಥಾನಗಳು 13ನೇ ಶತಮಾನದಲ್ಲಿ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾದ ದೇವಾಲಯಗಳು. ಹೀಗಾಗಿ ದೇವಸ್ಥಾನದ ಇತಿಹಾಸವನ್ನ ಸಾರುವ ಜೊತೆಗೆ ಉತ್ಸವವನ್ನ ಆಚರಣೆ ಮಾಡಿ, ನಾವು ಹಿಂದೂ ವಿರೋಧಿ ಅಲ್ಲ. ಹಿಂದೂಗಳ ಪರವಾಗಿ ಇದ್ದೇವೆ ಎಂದು ಬಿಂಬಿಸಲು ಕಾಂಗ್ರೆಸ್ ಮುಂದಾಗಿದೆ. ಹೀಗಾಗಿ ಎರಡು ದಿನಗಳ ಕಾಲ ಅದ್ದೂರಿಯಾಗಿ ಕಾರ್ಯಕ್ರಮವನ್ನ ಬೂದನೂರು ಗ್ರಾಮದಲ್ಲಿಯೇ ದೇವಸ್ಥಾನದ ಆವರಣದಲ್ಲಿಯೇ ಆಯೋಜನೆ ಮಾಡಲಾಗಿದೆ. ಇನ್ನು ಈ ಬಗ್ಗೆ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ, ಇತಿಹಾಸ ಇದ್ದಾಗ ಮಾತ್ರ ಇತಿಹಾಸ ಸೃಷ್ಠಿಸಲು ಸಾಧ್ಯ. ಯಾರು ಮಾಡದ ಕೆಲಸವನ್ನ ನಾವು ಮಾಡುತ್ತಿದ್ದೇವೆ ಎಂದರು.

ಒಟ್ಟಾರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರೋ ಕಾಂಗ್ರೆಸ್ ಬೂದನೂರು ಉತ್ಸವನ್ನ ಆಚರಣೆ ಮಾಡಿ, ಹಿಂದೂ ವಿರೋಧಿ ಹಣೆಪಟ್ಟಿಯಿಂದ ಹೊರಬಂದು ಹಿಂದೂಮತಗಳನ್ನ ಸೆಳೆಯಲು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?