ಕೆರೆಗೋಡು ಹನುಮ ಧ್ವಜ ವಿವಾದ: ಫೆ.07ಕ್ಕೆ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ಮಂಡ್ಯ ಬಂದ್​​​ ವಾಪಸ್

ಭಜರಂಗದಳ ಬಂದ್ ಕರೆ ವಿರೋಧಿಸಿ ಫೆ.7 ಕ್ಕೆ ಸಮಾನ ಮನಸ್ಕರ ವೇದಿಕೆ ಬಂದ್​ಗೆ ಕರೆ ಕೊಟ್ಟಿತ್ತು. ಆದರೆ ಇದೀಗ ಜಿಲ್ಲಾಡಳಿತ ಮನವಿ ಮೇರೆಗೆ ಸಮಾನ ಮನಸ್ಕರ ವೇದಿಕೆ ಬಂದ್ ಹಿಂಪಡೆದಿದೆ. ಫೆ.9 ರಂದು ಮಂಡ್ಯ ನಗರವನ್ನ ಭಜರಂಗದಳ ಬಂದ್ ಮಾಡಿದ್ರೆ ಅದನ್ನ ವಿರೋಧಿಸಿ ಮತ್ತೆ ಬಂದ್ ಗೆ ಕರೆಕೊಡುತ್ತೇವೆ ಎಂದು ಸಮಾನ ಮನಸ್ಕರ ವೇದಿಕೆ ಎಚ್ಚರಿಕೆ ನೀಡಿದೆ. ಆದರೆ ಫೆ.9 ರಂದು ಮಂಡ್ಯನಗರ ಬಂದ್ ಮಾಡದ ಬಗ್ಗೆ ಇನ್ನೂ ಭಜರಂಗದಳ ನಿಲುವು ತಿಳಿಸಿಲ್ಲ.

ಕೆರೆಗೋಡು ಹನುಮ ಧ್ವಜ ವಿವಾದ: ಫೆ.07ಕ್ಕೆ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ಮಂಡ್ಯ ಬಂದ್​​​ ವಾಪಸ್
ಬಂದ್ ಹಿಂಪಡೆಯಲು ಸಭೆ ನಡೆಸಿ ಮನವಿ
Follow us
| Updated By: ಆಯೇಷಾ ಬಾನು

Updated on: Feb 06, 2024 | 8:09 AM

ಮಂಡ್ಯ, ಫೆ.06: ಲೋಕ ಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ (Keregodu Hanuman Flag Controversy) ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಬಿಜೆಪಿ (BJP) ಮನೆ ಮನೆಗೆ ಹನುಮ ಧ್ವಜ ನೀಡಿ ಅಭಿಯಾನ ಮಾಡಿದೆ. ಸದ್ಯ ಈಗ ಮತ್ತೊಂದು ಬೆಳವಣಿಗೆಯಾಗಿದ್ದು ನಾಳೆ (ಫೆ.07) ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ಮಂಡ್ಯ ಬಂದ್​​​ ಹಿಂಪಡೆಯಲಾಗಿದೆ. ಮಂಡ್ಯ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್​​ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಫೆ.9ಕ್ಕೆ ಭಜರಂಗದಳ ಬಂದ್ ಗೆ ಕರೆ ಕೊಟ್ಟಿದೆ. ಮತ್ತೊಂದೆಡೆ ಭಜರಂಗದಳ ಬಂದ್ ಕರೆ ವಿರೋಧಿಸಿ ಫೆ.7 ಕ್ಕೆ ಸಮಾನ ಮನಸ್ಕರ ವೇದಿಕೆ ಬಂದ್​ಗೆ ಕರೆ ಕೊಟ್ಟಿತ್ತು. ಸಮಾನ ಮನಸ್ಕರ ವೇದಿಕೆಗೆ ದಲಿತ ಪರ ಸಂಘಟನೆ, ಪ್ರಗತಿಪರರು, ಸಿಐಟಿಯು ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರು. ಆದರೆ ಇದೀಗ ಜಿಲ್ಲಾಡಳಿತ ಮನವಿ ಮೇರೆಗೆ ಸಮಾನ ಮನಸ್ಕರ ವೇದಿಕೆ ಬಂದ್ ಹಿಂಪಡೆದಿದೆ.

ಮಂಡ್ಯ ಡಿಸಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ನೇತೃತ್ವದಲ್ಲಿ ಸಭೆ ನಡೆಸಿ, ಬಂದ್ ನಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತೆ. ಅಂಗಡಿ ಮುಂಗಟ್ಟುಗಳ ವ್ಯಾಪಾರಕ್ಕೂ, ಜನ ಸಾಮಾನ್ಯರಿಗೆ ತೊಂದರೆಯಾಗುತ್ತೆ. ಹೀಗಾಗಿ ಸಂಘಟನೆಗಳು ಬಂದ್ ಹಿಂಪಡೆಯಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲಾಡಳಿತದ ಮನವಿಗೆ ಸಮಾನ ಮನಸ್ಕರ ವೇದಿಕೆ ಸ್ಪಂದಿಸಿದ್ದು ಬಂದ್ ಹಿಂಪಡೆದಿದೆ. ಫೆ.7ರಂದು ಕರೆಕೊಟ್ಟಿದ್ದ ಬಂದ್ ತಾತ್ಕಾಲಿಕ ವಾಪಸ್ಸು ಪಡೆದಿದೆ. ಫೆ.9 ರಂದು ಮಂಡ್ಯ ನಗರ ಬಂದ್​ಗೂ ಅವಕಾಶ ಕೊಡಬೇಡಿ. ಫೆ.9 ರಂದು ಮಂಡ್ಯ ನಗರವನ್ನ ಭಜರಂಗದಳ ಬಂದ್ ಮಾಡಿದ್ರೆ ಅದನ್ನ ವಿರೋಧಿಸಿ ಮತ್ತೆ ಬಂದ್ ಗೆ ಕರೆಕೊಡುತ್ತೇವೆ ಎಂದು ಸಮಾನ ಮನಸ್ಕರ ವೇದಿಕೆ ಎಚ್ಚರಿಕೆ ನೀಡಿದೆ. ಆದರೆ ಫೆ.9 ರಂದು ಮಂಡ್ಯನಗರ ಬಂದ್ ಮಾಡದ ಬಗ್ಗೆ ಇನ್ನೂ ಭಜರಂಗದಳ ನಿಲುವು ತಿಳಿಸಿಲ್ಲ.

ಇದನ್ನೂ ಓದಿ:Keragodu flag row: ಕೆರೆಗೋಡು ಪ್ರಕರಣ, ಮನೆಗಳ ಮೇಲೆ ಹನುಮಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು 

ಜನವರಿ 28ರಂದು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಅರ್ಜುನ ಧ್ವಜಸ್ತಂಭದ ಮೇಲೆ ಹನುಮ ಧ್ವಜವನ್ನ ಇಳಿಸಿ, ತ್ರಿವರ್ಣ ಧ್ವಜವನ್ನ ಜಿಲ್ಲಾಡಳಿತ ಹಾರಿಸಿತ್ತು. ಇದನ್ನ ವಿರೋಧಿಸಿ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬೃಹತ್ ಹೋರಾಟವನ್ನ ನಡೆಸಿದರು. ಆದಾದ ಬಳಿಕ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ ಇಂದ್ರೇಶ್ ನೇತೃತ್ವದಲ್ಲಿ ಹನುಮಧ್ವಜ ಅಭಿಯಾನ ಅನ್ನ ಕೆರೆಗೋಡು ಗ್ರಾಮದಿಂದಲೇ ಆರಂಭಿಸಿ, ಕೆರಗೋಡು ಗ್ರಾಮದ ನೂರಾರು ಮನೆಗಳ ಮೇಲೆ ಹನುಮಧ್ವಜವನ್ನ ಹಾರಿಸಲಾಗಿತ್ತು. ಇನ್ನು ಈ ವಿವಾದವನ್ನ ಜೀವಂತವಾಗಿ ಇಟ್ಟು ಮತದಾರರನ್ನ ಭಾವನಾತ್ಮಕವಾಗಿ ಸೆಳೆಯಲು ಮುಂದಾಗಿರೋ ಬಿಜೆಪಿ ಮಂಡ್ಯ ನಗರದಲ್ಲಿ ಅಭಿಯಾನವನ್ನ ಮುಂದುವರೆಸಿದೆ. ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿ ಹಲವು ಅಭಿಯಾನವನ್ನ ಮುಂದುವರೆಸಿ, ಮನೆಗಳ ಮೇಲೆ ಹನುಮಧ್ವಜವನ್ನ ಹಾರಿಸಲಾಗಿದೆ. ಇನ್ನು ಈ ಘಟನೆ ಮಂಡ್ಯದಲ್ಲಿ ಗಲಬೆಗೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ