AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಕ್ಕರೆ ಬೆಳ್ಳೂರು ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ‘ಗರಿ’

ಮಂಡ್ಯ: ಜಿಲ್ಲೆಯ‌ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವೂ ಒಂದು. ಗ್ರಾಮದಲ್ಲಿ ನೆಲೆಸಿರುವ ಜನ ಸಮುದಾಯದ ನಟ್ಟನಡುವೆ ಹಲವಾರು ದೇಶಿಯ ಮತ್ತು ವಿದೇಶಿ ಪ್ರಜಾತಿಯ ಹಕ್ಕಿಗಳು ತಮ್ಮ ಗೂಡುಗಳನ್ನು ಕಟ್ಟಿ ಸ್ವಚ್ಛಂದವಾಗಿ ಹಾರುವ ಏಕೈಕ ಸ್ಥಳ ಎಂಬ ಖ್ಯಾತಿಯನ್ನು ಪಡೆದಿತ್ತು. ಇದೀಗ ಈ ಮುಕ್ತ ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ. ಪ್ರತಿಷ್ಠಿತ ಅರ್ಥ್ ಡೇ ನೆಟ್ವರ್ಕ್​ನಿಂದ ಸಿಕ್ತು ‘ಸ್ಟಾರ್ ವಿಲೇಜ್​​’ ಗೌರವ ಹೌದು. ಜನ ಸಮುದಾಯದ ನಡುವೆ ದೇಶ ವಿದೇಶಗಳಿಂದ ಬರುವ […]

ಕೊಕ್ಕರೆ ಬೆಳ್ಳೂರು ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ‘ಗರಿ’
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:31 PM

Share

ಮಂಡ್ಯ: ಜಿಲ್ಲೆಯ‌ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವೂ ಒಂದು. ಗ್ರಾಮದಲ್ಲಿ ನೆಲೆಸಿರುವ ಜನ ಸಮುದಾಯದ ನಟ್ಟನಡುವೆ ಹಲವಾರು ದೇಶಿಯ ಮತ್ತು ವಿದೇಶಿ ಪ್ರಜಾತಿಯ ಹಕ್ಕಿಗಳು ತಮ್ಮ ಗೂಡುಗಳನ್ನು ಕಟ್ಟಿ ಸ್ವಚ್ಛಂದವಾಗಿ ಹಾರುವ ಏಕೈಕ ಸ್ಥಳ ಎಂಬ ಖ್ಯಾತಿಯನ್ನು ಪಡೆದಿತ್ತು. ಇದೀಗ ಈ ಮುಕ್ತ ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ.

ಪ್ರತಿಷ್ಠಿತ ಅರ್ಥ್ ಡೇ ನೆಟ್ವರ್ಕ್​ನಿಂದ ಸಿಕ್ತು ‘ಸ್ಟಾರ್ ವಿಲೇಜ್​​’ ಗೌರವ ಹೌದು. ಜನ ಸಮುದಾಯದ ನಡುವೆ ದೇಶ ವಿದೇಶಗಳಿಂದ ಬರುವ ಪೆಲಿಕಾನ್, ಹೆಜ್ಜಾರ್ಲೆ ಹಾಗೂ ಇನ್ನಿತರ ಜಾತಿಯ ಕೊಕ್ಕರೆಗಳು ವಾಸವಾಗಿರೋ ಕಾರಣದಿಂದ ಈ ಗ್ರಾಮಕ್ಕೆ ‘ಸ್ಟಾರ್ ವಿಲೇಜ್’ ಎಂಬ ಬಿರುದು ದೊರೆತಿದೆ. ಈ ಗೌರವವನ್ನು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪರಿಸರ ಸಂಸ್ಥೆ ಅರ್ಥ್ ಡೇ ನೆಟ್ವರ್ಕ್​ ನೀಡಿದೆ.

ಇತ್ತೀಚೇಗಷ್ಟೆ ಈ ಸಂಸ್ಥೆಯು ಕೊಕ್ಕರೆ ಬೆಳ್ಳೂರು ಗ್ರಾಮಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಚಿತ್ರವೊಂದನ್ನು ತಯಾರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಗ್ರಾಮವನ್ನು ಪರಿಚಯಿಸಿತ್ತು. ಇಲ್ಲಿನ ಜನರಿಗೆ ಹಕ್ಕಿಗಳ ಮೇಲಿರೋ ಪ್ರೀತಿ, ತಮ್ಮ ಜಮೀನಿನಲ್ಲಿ ಹಕ್ಕಿಗಳ ಅನುಕೂಲಕ್ಕಾಗಿ ಮರಗಳನ್ನು ಬೆಳೆಸಿರುವ ರೈತರಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ‌ ನೀಡುತ್ತಿರುವ ಬಗ್ಗೆಯೂ ಕೂಡ ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿತ್ತು. ಇದರಿಂದ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಂಸೆ ಪಡೆದಿರುವ ಗ್ರಾಮಕ್ಕೆ ಇದೀಗ ಈ ಗೌರವ ಸಂದಿದೆ. ಈ ಮಾಹಿತಿಯನ್ನು ಅರ್ಥ್ ಡೇ ನೆಟ್ವರ್ಕ್ ತನ್ನ ವೆಬ್​ಸೈಟ್​ನಲ್ಲೂ ಪ್ರಕಟಿಸಿದೆ. -ರವಿ ಲಾಲಿಪಾಳ್ಯ

Published On - 1:51 am, Tue, 16 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!