AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಕ್ಕರೆ ಬೆಳ್ಳೂರು ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ‘ಗರಿ’

ಮಂಡ್ಯ: ಜಿಲ್ಲೆಯ‌ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವೂ ಒಂದು. ಗ್ರಾಮದಲ್ಲಿ ನೆಲೆಸಿರುವ ಜನ ಸಮುದಾಯದ ನಟ್ಟನಡುವೆ ಹಲವಾರು ದೇಶಿಯ ಮತ್ತು ವಿದೇಶಿ ಪ್ರಜಾತಿಯ ಹಕ್ಕಿಗಳು ತಮ್ಮ ಗೂಡುಗಳನ್ನು ಕಟ್ಟಿ ಸ್ವಚ್ಛಂದವಾಗಿ ಹಾರುವ ಏಕೈಕ ಸ್ಥಳ ಎಂಬ ಖ್ಯಾತಿಯನ್ನು ಪಡೆದಿತ್ತು. ಇದೀಗ ಈ ಮುಕ್ತ ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ. ಪ್ರತಿಷ್ಠಿತ ಅರ್ಥ್ ಡೇ ನೆಟ್ವರ್ಕ್​ನಿಂದ ಸಿಕ್ತು ‘ಸ್ಟಾರ್ ವಿಲೇಜ್​​’ ಗೌರವ ಹೌದು. ಜನ ಸಮುದಾಯದ ನಡುವೆ ದೇಶ ವಿದೇಶಗಳಿಂದ ಬರುವ […]

ಕೊಕ್ಕರೆ ಬೆಳ್ಳೂರು ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ‘ಗರಿ’
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:31 PM

Share

ಮಂಡ್ಯ: ಜಿಲ್ಲೆಯ‌ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವೂ ಒಂದು. ಗ್ರಾಮದಲ್ಲಿ ನೆಲೆಸಿರುವ ಜನ ಸಮುದಾಯದ ನಟ್ಟನಡುವೆ ಹಲವಾರು ದೇಶಿಯ ಮತ್ತು ವಿದೇಶಿ ಪ್ರಜಾತಿಯ ಹಕ್ಕಿಗಳು ತಮ್ಮ ಗೂಡುಗಳನ್ನು ಕಟ್ಟಿ ಸ್ವಚ್ಛಂದವಾಗಿ ಹಾರುವ ಏಕೈಕ ಸ್ಥಳ ಎಂಬ ಖ್ಯಾತಿಯನ್ನು ಪಡೆದಿತ್ತು. ಇದೀಗ ಈ ಮುಕ್ತ ಪಕ್ಷಿಧಾಮದ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ.

ಪ್ರತಿಷ್ಠಿತ ಅರ್ಥ್ ಡೇ ನೆಟ್ವರ್ಕ್​ನಿಂದ ಸಿಕ್ತು ‘ಸ್ಟಾರ್ ವಿಲೇಜ್​​’ ಗೌರವ ಹೌದು. ಜನ ಸಮುದಾಯದ ನಡುವೆ ದೇಶ ವಿದೇಶಗಳಿಂದ ಬರುವ ಪೆಲಿಕಾನ್, ಹೆಜ್ಜಾರ್ಲೆ ಹಾಗೂ ಇನ್ನಿತರ ಜಾತಿಯ ಕೊಕ್ಕರೆಗಳು ವಾಸವಾಗಿರೋ ಕಾರಣದಿಂದ ಈ ಗ್ರಾಮಕ್ಕೆ ‘ಸ್ಟಾರ್ ವಿಲೇಜ್’ ಎಂಬ ಬಿರುದು ದೊರೆತಿದೆ. ಈ ಗೌರವವನ್ನು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪರಿಸರ ಸಂಸ್ಥೆ ಅರ್ಥ್ ಡೇ ನೆಟ್ವರ್ಕ್​ ನೀಡಿದೆ.

ಇತ್ತೀಚೇಗಷ್ಟೆ ಈ ಸಂಸ್ಥೆಯು ಕೊಕ್ಕರೆ ಬೆಳ್ಳೂರು ಗ್ರಾಮಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಚಿತ್ರವೊಂದನ್ನು ತಯಾರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಗ್ರಾಮವನ್ನು ಪರಿಚಯಿಸಿತ್ತು. ಇಲ್ಲಿನ ಜನರಿಗೆ ಹಕ್ಕಿಗಳ ಮೇಲಿರೋ ಪ್ರೀತಿ, ತಮ್ಮ ಜಮೀನಿನಲ್ಲಿ ಹಕ್ಕಿಗಳ ಅನುಕೂಲಕ್ಕಾಗಿ ಮರಗಳನ್ನು ಬೆಳೆಸಿರುವ ರೈತರಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ‌ ನೀಡುತ್ತಿರುವ ಬಗ್ಗೆಯೂ ಕೂಡ ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿತ್ತು. ಇದರಿಂದ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಂಸೆ ಪಡೆದಿರುವ ಗ್ರಾಮಕ್ಕೆ ಇದೀಗ ಈ ಗೌರವ ಸಂದಿದೆ. ಈ ಮಾಹಿತಿಯನ್ನು ಅರ್ಥ್ ಡೇ ನೆಟ್ವರ್ಕ್ ತನ್ನ ವೆಬ್​ಸೈಟ್​ನಲ್ಲೂ ಪ್ರಕಟಿಸಿದೆ. -ರವಿ ಲಾಲಿಪಾಳ್ಯ

Published On - 1:51 am, Tue, 16 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!