AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಪತ್ರ ಬರೆದವರನ್ನು ಪತ್ತೆ ಮಾಡಿದ ಸಿಐಡಿ, ಇಬ್ಬರು ವಶಕ್ಕೆ

ರಾಜ್ಯಪಾಲರಿಗೆ ಬರೆಯಲಾಗಿದ್ದ ಸಚಿವ ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪತ್ರ ಯಾರು ಬರೆದಿದ್ದು ಎನ್ನುವುದನ್ನು ಸಿಐಡಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಕೃಷಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಪತ್ರ ಬರೆದವರನ್ನು ಪತ್ತೆ ಮಾಡಿದ ಸಿಐಡಿ, ಇಬ್ಬರು ವಶಕ್ಕೆ
ಕೃಷಿ ಸಚಿವ ಚಲುವರಾಯಸ್ವಾಮಿ
ಪ್ರಶಾಂತ್​ ಬಿ.
| Edited By: |

Updated on:Aug 20, 2023 | 1:29 PM

Share

ಮಂಡ್ಯ, (ಆಗಸ್ಟ್ 20): ಕೃಷಿ ಸಚಿವ ಚಲುವರಾಯಸ್ವಾಮಿ(Chaluvaraya Swamy) ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪ ಪತ್ರದ(bribe letter)ಪ್ರಕರಣಕ್ಕೆ ಸಂಬಂಧಿಸಿದಂತೆ ​​ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್‌.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್​, ಗುರುದತ್ ಎನ್ನುವರನ್ನು​​ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಅರೋಪ ಪತ್ರವನ್ನು ಬರೆದಿರುವುದು ಇವರೇ ಎನ್ನುವುದು ತಿಳಿದುಬಂದಿದೆ. ಇನ್ನು ಪತ್ರ ಬರೆಯಲು ಹೇಳಿದ್ಯಾರು? ಲಂಚ ಕೇಳಿದ್ದಕ್ಕೆ ರಾಜ್ಯಪಾಲರಿಗೆ ಪತ್ರ ಬರೆಯಲಾಯಿತೇ? ಈ ಪತ್ರ ಬರೆದಿರುವ ಹಿಂದಿನ ಉದ್ದೇಶವೇನು? ಹೀಗೆ ಹಲವು ಆಯಾಮಗಳಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಇನ್ನು ಈ ಬಗ್ಗೆ ಮಂಡ್ಯದಲ್ಲಿ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈವರೆಗೂ ಸಿಐಡಿ ಅಧಿಕಾರಿಗಳ ಯಾವುದೇ ವರದಿ ನನಗೆ ತಲುಪಿಲ್ಲ. ಸಿಐಡಿ ತಂಡ ವರದಿ ನೀಡಿದ ಬಳಿಕ ಗೊತ್ತಾಗಲಿದೆ. ಮೇಲ್ನೋಟಕ್ಕೆ ಮಂಡ್ಯದ ಅಧಿಕಾರಿಗಳಲ್ಲ ಎಂದು ಖಚಿತವಾಗಿ ಗೊತ್ತಾಗಿದೆ. ಆ ಇಬ್ಬರೇ ಎಲ್ಲರ ಸಹಿ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಮಾಹಿತಿ ಪಡೆಯುತ್ತೇನೆ, ಸುಮ್ಮನೆ ಊಹಾಪೋಹದಿಂದ ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆ, ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ: ರಾಜ್ಯಪಾಲರಿಗೆ ದೂರು

ನಮಗೆ ಜನಪರ ಕೆಲಸ ಮಾಡುವುದು ಮುಖ್ಯ. ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಹೇಳಲು ಹೋಗುವುದಿಲ್ಲ. ಸಿಐಡಿಗೆ ಜವಾಬ್ದಾರಿ ಕೊಟ್ಟಿದ್ದಾರೆ, ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸರ್ಕಾರಕ್ಕೆ ವರದಿ ಬರುವ ಮೊದಲೇ ಮಾತನಾಡುವುದು ಸೂಕ್ತವಲ್ಲ. ನಾನೇ ಮೊದಲೇ ನಿರಾಳವಾಗಿದ್ದೆ ಎಂದರು.

ಇನ್ನಷ್ಟು ಮಂಡ್ಯ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:14 pm, Sun, 20 August 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?