AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್​ ಹಳೇ ಗೇಟ್​ಗಳು​ ಕೇವಲ ಕೆಜಿ 6 ರೂ.ಗೆ ಮಾರಾಟ?, ರೈತ ಸಂಘ ಆಕ್ರೋಶ

ಕೆಆರ್‌ಎಸ್‌ ಅಣೆಕಟ್ಟಿನ 90 ವರ್ಷದ ಹಳೆಯ 150 ಕ್ರೆಸ್ಟ್‌ ಗೇಟ್‌ಗಳನ್ನು ಕರ್ನಾಟಕ ಸರ್ಕಾರ ಕಡಿಮೆ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಯತ್ನ ರೈತ ಸಂಘಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗೇಟ್‌ಗಳನ್ನು ಮ್ಯೂಸಿಯಂನಲ್ಲಿ ಇಡಬೇಕು ಎಂದು ಒತ್ತಾಯಿಸುತ್ತಿವೆ.

ಕೆಆರ್​ಎಸ್​ ಹಳೇ ಗೇಟ್​ಗಳು​ ಕೇವಲ ಕೆಜಿ 6 ರೂ.ಗೆ ಮಾರಾಟ?, ರೈತ ಸಂಘ ಆಕ್ರೋಶ
ಕೆಆರ್​ಎಸ್​ ಡ್ಯಾಂ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: Nov 02, 2024 | 10:59 AM

ಮಂಡ್ಯ, ನವೆಂಬರ್​ 02: ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar)​ ಕಾಲದಲ್ಲಿ ಕೆಆರ್​ಎಸ್​​ ಅಣೆಕಟ್ಟು (KRS Dam) ನಿರ್ಮಾಣವಾಗಿದೆ. ಕೆಆರ್​ಎಸ್​ ಅಣೆಕಟ್ಟು ನಿರ್ಮಾಣವಾದಾಗ ಅಳವಡಿಸಿದ್ದ 150 ಕ್ರೆಸ್ಟ್ ​ಗೇಟ್​ಗಳನ್ನು ಇತ್ತೀಚಿಗೆ ಬದಲಾವಣೆ ಮಾಡಲಾಗಿದೆ. ಹಳೆಯ ಕ್ರೆಸ್ಟ್​​ ಗೇಟ್​ಗಳನ್ನು ಕರ್ನಾಟಕ ಸರ್ಕಾರ (Karnataka Government) ಮಾರಾಟ ಮಾಡಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅದು ಕೂಡ ಕಡಿಮೆ ಬೆಲೆಗೆ. ಹೌದು, ಗೇಟ್​​ಗಳನ್ನು ಕೇಜಿಗೆ 6 ರೂ.ನಂತೆ ಮಾರಾಟ ಮಾಡಲು ಸರ್ಕಾರ ಸದ್ದಿಲ್ಲದೆ ತಯಾರಿ ನಡೆಸಿದೆ ಎನ್ನಲಾಗಿದೆ.

90 ವರ್ಷದ ಹಳೇಯದಾದ ಸುಮಾರು 650 ಟನ್ ತೂಕದ 150 ಕ್ರಸ್ಟ್ ಗೇಟ್​ಗಳು 3 ಕೋಟಿ ರೂ. ಬೆಲೆ ಬಾಳುತ್ತವೆ. ಆದರೆ, ಗೇಟ್​ಗಳನ್ನ ಕೇವಲ 36 ಲಕ್ಷ ರೂ.ಗೆ ಮಾರಾಟ ಮಾಡಲು ಜಲಸಂಪನ್ಮೂಲ ಇಲಾಖೆ ತಯಾರಿ ನಡೆಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಹಳೇ ಗೇಟ್ ಬದಲಿಸಿ ಹೊಸ ಗೇಟ್ ಅಳವಡಿಸಲಾಗಿದೆ. ಈ ಹಳೇ ಗೇಟ್​ಗಳನ್ನು ಜಲಸಂಪನ್ಮೂಲ ಇಲಾಖೆ ಮಾರಾಟಕ್ಕೆ ಮುಂದಾಗಿದೆ. ಇಲಾಖೆ ಅಧಿಕಾರಿಗಳು ಪ್ರಭಾವಿಗಳೊಂದಿಗೆ ಶಾಮೀಲಾಗಿ ಕೆಜಿಗೆ 6 ರೂ.ನಂತೆ ಮಾರಾಟ ಮಾಡಲು ಪ್ಲಾನ್ ಮಾಡಿದ್ದಾರೆ. ಗುಜರಿಯಲ್ಲಿ ಕೆಜಿಗೆ 40 ರೂ.ನಂತೆ ಹಳೇ ಕಬ್ಬಿಣ ಖರೀದಿ ಮಾಡುತ್ತಾರೆ. ಹೀಗಿರುವಾಗ ಕೆಜಿಗೆ 6 ರೂ.ಗೆ ಯಾಕೆ ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಕೆಂಪೂಗೌಡ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 5ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ; ಬೆಂಗಳೂರಿನ ಈ ನಗರಗಳಿಗೆ ಭಾರಿ ಅನುಕೂಲ

ಹಳೇ ಗೇಟ್​ಗಳನ್ನು ಮಾರಾಟ ಮಾಡುವ ಬದಲು ಮ್ಯೂಸಿಯಂನಲ್ಲಿ ಇಡಿ. ಮ್ಯೂಸಿಯಂ ಮೂಲಕ ಅಣೆಕಟ್ಟು ಇತಿಹಾಸ ಹಾಗೂ ಮಹಾರಾಜರ ಕೊಡುಗೆ ಬಗ್ಗೆ ಮಾಹಿತಿ ನೀಡಿ. ಒಂದು ವೇಳೆ ವಿರೋಧದ ನಡುವೆಯೂ ಗೇಟ್ ಮಾರಾಟಕ್ಕೆ ಮುಂದಾದರೇ ರೈತ ಸಂಘದಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಆರ್‌ಎಸ್‌ ಎಂದು ಸಂಕ್ಷಿಪ್ತವಾಗಿ ಕರೆಯಲ್ಪಡುವ ಕೃಷ್ಣರಾಜ ಸಾಗರ ಜಲಾಶಯ ಕರ್ನಾಟಕದ ಅತ್ಯಂತ ಪ್ರಸಿದ್ಧ ಮತ್ತು ಐತಿಹಾಸಿಕ ಅಣೆಕಟ್ಟುಗಳಲ್ಲಿ ಒಂದಾಗಿದೆ. ಮೈಸೂರಿನ ಪಕ್ಕದಲ್ಲೇ ಇರುವ ಈ ಜಲಾಶಯ ಮಂಡ್ಯ ಜಿಲ್ಲೆಯಲ್ಲಿದೆ. ಕರ್ನಾಟಕದ ಜೀವನದಿ ಕಾವೇರಿ ನದಿಗೆ ಅಡ್ಡಲಾಗಿ ಈ ಅಣೆಕಟ್ಟನ್ನು ಕಟ್ಟಲಾಗಿದ್ದು, ರಾಜ್ಯದ ಜೀವನಾಡಿ ಎಂದೇ ಪ್ರಸಿದ್ಧವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ನಿರ್ಮಾಣವಾಗಿದೆ. ಅಣೆಕಟ್ಟಿನ ಮುಖ್ಯ ಎಂಜಿನಿಯರ್ ಮೈಸೂರಿನ ಸರ್​​ ಎಂ ವಿಶ್ವೇಶ್ವರಯ್ಯನವರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ