AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್​ ಹಳೇ ಗೇಟ್​ಗಳು​ ಕೇವಲ ಕೆಜಿ 6 ರೂ.ಗೆ ಮಾರಾಟ?, ರೈತ ಸಂಘ ಆಕ್ರೋಶ

ಕೆಆರ್‌ಎಸ್‌ ಅಣೆಕಟ್ಟಿನ 90 ವರ್ಷದ ಹಳೆಯ 150 ಕ್ರೆಸ್ಟ್‌ ಗೇಟ್‌ಗಳನ್ನು ಕರ್ನಾಟಕ ಸರ್ಕಾರ ಕಡಿಮೆ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಯತ್ನ ರೈತ ಸಂಘಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗೇಟ್‌ಗಳನ್ನು ಮ್ಯೂಸಿಯಂನಲ್ಲಿ ಇಡಬೇಕು ಎಂದು ಒತ್ತಾಯಿಸುತ್ತಿವೆ.

ಕೆಆರ್​ಎಸ್​ ಹಳೇ ಗೇಟ್​ಗಳು​ ಕೇವಲ ಕೆಜಿ 6 ರೂ.ಗೆ ಮಾರಾಟ?, ರೈತ ಸಂಘ ಆಕ್ರೋಶ
ಕೆಆರ್​ಎಸ್​ ಡ್ಯಾಂ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: Nov 02, 2024 | 10:59 AM

ಮಂಡ್ಯ, ನವೆಂಬರ್​ 02: ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar)​ ಕಾಲದಲ್ಲಿ ಕೆಆರ್​ಎಸ್​​ ಅಣೆಕಟ್ಟು (KRS Dam) ನಿರ್ಮಾಣವಾಗಿದೆ. ಕೆಆರ್​ಎಸ್​ ಅಣೆಕಟ್ಟು ನಿರ್ಮಾಣವಾದಾಗ ಅಳವಡಿಸಿದ್ದ 150 ಕ್ರೆಸ್ಟ್ ​ಗೇಟ್​ಗಳನ್ನು ಇತ್ತೀಚಿಗೆ ಬದಲಾವಣೆ ಮಾಡಲಾಗಿದೆ. ಹಳೆಯ ಕ್ರೆಸ್ಟ್​​ ಗೇಟ್​ಗಳನ್ನು ಕರ್ನಾಟಕ ಸರ್ಕಾರ (Karnataka Government) ಮಾರಾಟ ಮಾಡಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅದು ಕೂಡ ಕಡಿಮೆ ಬೆಲೆಗೆ. ಹೌದು, ಗೇಟ್​​ಗಳನ್ನು ಕೇಜಿಗೆ 6 ರೂ.ನಂತೆ ಮಾರಾಟ ಮಾಡಲು ಸರ್ಕಾರ ಸದ್ದಿಲ್ಲದೆ ತಯಾರಿ ನಡೆಸಿದೆ ಎನ್ನಲಾಗಿದೆ.

90 ವರ್ಷದ ಹಳೇಯದಾದ ಸುಮಾರು 650 ಟನ್ ತೂಕದ 150 ಕ್ರಸ್ಟ್ ಗೇಟ್​ಗಳು 3 ಕೋಟಿ ರೂ. ಬೆಲೆ ಬಾಳುತ್ತವೆ. ಆದರೆ, ಗೇಟ್​ಗಳನ್ನ ಕೇವಲ 36 ಲಕ್ಷ ರೂ.ಗೆ ಮಾರಾಟ ಮಾಡಲು ಜಲಸಂಪನ್ಮೂಲ ಇಲಾಖೆ ತಯಾರಿ ನಡೆಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಹಳೇ ಗೇಟ್ ಬದಲಿಸಿ ಹೊಸ ಗೇಟ್ ಅಳವಡಿಸಲಾಗಿದೆ. ಈ ಹಳೇ ಗೇಟ್​ಗಳನ್ನು ಜಲಸಂಪನ್ಮೂಲ ಇಲಾಖೆ ಮಾರಾಟಕ್ಕೆ ಮುಂದಾಗಿದೆ. ಇಲಾಖೆ ಅಧಿಕಾರಿಗಳು ಪ್ರಭಾವಿಗಳೊಂದಿಗೆ ಶಾಮೀಲಾಗಿ ಕೆಜಿಗೆ 6 ರೂ.ನಂತೆ ಮಾರಾಟ ಮಾಡಲು ಪ್ಲಾನ್ ಮಾಡಿದ್ದಾರೆ. ಗುಜರಿಯಲ್ಲಿ ಕೆಜಿಗೆ 40 ರೂ.ನಂತೆ ಹಳೇ ಕಬ್ಬಿಣ ಖರೀದಿ ಮಾಡುತ್ತಾರೆ. ಹೀಗಿರುವಾಗ ಕೆಜಿಗೆ 6 ರೂ.ಗೆ ಯಾಕೆ ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಕೆಂಪೂಗೌಡ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 5ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ; ಬೆಂಗಳೂರಿನ ಈ ನಗರಗಳಿಗೆ ಭಾರಿ ಅನುಕೂಲ

ಹಳೇ ಗೇಟ್​ಗಳನ್ನು ಮಾರಾಟ ಮಾಡುವ ಬದಲು ಮ್ಯೂಸಿಯಂನಲ್ಲಿ ಇಡಿ. ಮ್ಯೂಸಿಯಂ ಮೂಲಕ ಅಣೆಕಟ್ಟು ಇತಿಹಾಸ ಹಾಗೂ ಮಹಾರಾಜರ ಕೊಡುಗೆ ಬಗ್ಗೆ ಮಾಹಿತಿ ನೀಡಿ. ಒಂದು ವೇಳೆ ವಿರೋಧದ ನಡುವೆಯೂ ಗೇಟ್ ಮಾರಾಟಕ್ಕೆ ಮುಂದಾದರೇ ರೈತ ಸಂಘದಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಆರ್‌ಎಸ್‌ ಎಂದು ಸಂಕ್ಷಿಪ್ತವಾಗಿ ಕರೆಯಲ್ಪಡುವ ಕೃಷ್ಣರಾಜ ಸಾಗರ ಜಲಾಶಯ ಕರ್ನಾಟಕದ ಅತ್ಯಂತ ಪ್ರಸಿದ್ಧ ಮತ್ತು ಐತಿಹಾಸಿಕ ಅಣೆಕಟ್ಟುಗಳಲ್ಲಿ ಒಂದಾಗಿದೆ. ಮೈಸೂರಿನ ಪಕ್ಕದಲ್ಲೇ ಇರುವ ಈ ಜಲಾಶಯ ಮಂಡ್ಯ ಜಿಲ್ಲೆಯಲ್ಲಿದೆ. ಕರ್ನಾಟಕದ ಜೀವನದಿ ಕಾವೇರಿ ನದಿಗೆ ಅಡ್ಡಲಾಗಿ ಈ ಅಣೆಕಟ್ಟನ್ನು ಕಟ್ಟಲಾಗಿದ್ದು, ರಾಜ್ಯದ ಜೀವನಾಡಿ ಎಂದೇ ಪ್ರಸಿದ್ಧವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ನಿರ್ಮಾಣವಾಗಿದೆ. ಅಣೆಕಟ್ಟಿನ ಮುಖ್ಯ ಎಂಜಿನಿಯರ್ ಮೈಸೂರಿನ ಸರ್​​ ಎಂ ವಿಶ್ವೇಶ್ವರಯ್ಯನವರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ