AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಬಿಡುಗಡೆ; ಒಳಹರಿವಿಗಿಂತ ಹೊರಹರಿವು ದುಪ್ಪಟ್ಟು

Cauvery Water Release: ರೈತರ ಹಾಗೂ ಕನ್ನಡಿಗರ ತೀವ್ರ ಆಕ್ರೋಶದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಪ್ರಕ್ರಿಯೆ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಕೆಆರ್ಎಸ್ ಡ್ಯಾಂನಿಂದಲೂ ನೀರು ಬಿಡಲಾಗುತ್ತಿದ್ದು, 8,544 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದು ರಾಜ್ಯದ ಜನತೆಯ ಆತಂಕಕ್ಕೆ ಕಾರಣವಾಗಿದೆ.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಬಿಡುಗಡೆ; ಒಳಹರಿವಿಗಿಂತ ಹೊರಹರಿವು ದುಪ್ಪಟ್ಟು
ಕೆಆರ್​ಎಸ್ ಡ್ಯಾಂImage Credit source: tv9
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 02, 2026 | 9:57 AM

Share

ಮುಖ್ಯಾಂಶಗಳು

  • ಕೆಆರ್‌ಎಸ್‌ನಿಂದ 8,544 ಕ್ಯೂಸೆಕ್ ನೀರು ಬಿಡುಗಡೆ
  • ಒಳಹರಿವು 3,864 ಕ್ಯೂಸೆಕ್‌ಗೆ ಭಾರಿ ಕುಸಿತ
  • ನಿರಂತರ ನೀರು ಹರಿವಿನಿಂದ ಸಂಕಷ್ಟದ ಆತಂಕ

ಮಂಡ್ಯ, ಸೆಪ್ಟೆಂಬರ್ 2: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿಯಿರುವ ಕೆಆರ್‌ಎಸ್‌ ಡ್ಯಾಂನಿಂದ ನಿರಂತರವಾಗಿ ನೀರು ಹೊರಬಿಡಲಾಗುತ್ತಿದೆ. ಸದ್ಯ ಕೆಆರ್‌ಎಸ್‌ನಿಂದ 8,544 ಕ್ಯೂಸೆಕ್ ನೀರು ಹೊರಹರಿಯುತ್ತಿದ್ದು, ದಿನದಿಂದ ದಿನಕ್ಕೆ ಹೊರಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.

ಭಾರಿ ಪ್ರಮಾಣದಲ್ಲಿ ಕುಸಿದ ಕೆಆರ್‌ಎಸ್‌ ಡ್ಯಾಂ ಒಳಹರಿವು

ಕೆಆರ್‌ಎಸ್‌ ಡ್ಯಾಂನ ಒಳಹರಿವು ಇದೀಗ 3,864 ಕ್ಯೂಸೆಕ್‌ಗೆ ಕುಸಿದಿದೆ. ಆದರೆ ಒಳಹರಿವಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದರೂ, ಡ್ಯಾಂನಿಂದ ನಿರಂತರವಾಗಿ ನೀರು ಹರಿಯುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿವೆ.

ಕೆಆರ್‌ಎಸ್‌ ಡ್ಯಾಂನಲ್ಲಿ 109.32 ಅಡಿ ನೀರಿನ ಮಟ್ಟ

ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 109.32 ಅಡಿ ನೀರಿನ ಮಟ್ಟವಿದ್ದು, ಒಟ್ಟು 31.044 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದ್ದು, ಗರಿಷ್ಠ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿಯಾಗಿದೆ. ಪ್ರಸ್ತುತ ಡ್ಯಾಂಗೆ 3,864 ಕ್ಯೂಸೆಕ್ ಒಳಹರಿವು ಇದ್ದರೆ, 8,544 ಕ್ಯೂಸೆಕ್ ಹೊರಹರಿವು ಇದೆ. ಅಂದರೆ, ಡ್ಯಾಂಗೆ ಬರುತ್ತಿರುವ ನೀರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.

ಇದೇ ಪ್ರಮಾಣದಲ್ಲಿ ನಿರಂತರವಾಗಿ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ಸಂಗ್ರಹದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮಳೆ ಪ್ರಮಾಣ ಹಾಗೂ ಒಳಹರಿವು ಕಡಿಮೆಯಾದ ಸಂದರ್ಭದಲ್ಲಿ ನೀರಿನ ನಿರ್ವಹಣೆ ಸವಾಲಾಗಬಹುದು. ಹೀಗಾಗಿ, ತಮಿಳುನಾಡಿಗೆ ನೀರು ಹರಿಸುವ ವಿಚಾರ ಮತ್ತೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟದ ವಿವರ

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 109.32 ಅಡಿ
  • ಒಳಹರಿವು: 3,864 ಕ್ಯೂಸೆಕ್
  • ಹೊರಹರಿವು: 8,544 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 31.044 ಟಿಎಂಸಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್