AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಅಂಬುಲೆನ್ಸ್ ಅಡ್ಡಗಟ್ಟಿದ ವಿಡಿಯೋ ಬಹಿರಂಗ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರವ ಕೆಎಸ್​​​ಆರ್​​ಟಿ‌ಸಿ ಬಸ್ ಚಾಲಕ ಕಂ ನಿರ್ವಾಹಕ ಜಗದೀಶ್​​ರನ್ನು ಜು.6 ರಂದು ಬಿಜಿಎಸ್ ಆಸ್ಪತ್ರೆಯಿಂದ ಹೆಚ್ಚುವರಿ ಚಿಕಿತ್ಸೆಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ತಡೆದಿರುವ ವಿಡಿಯೋ ಬಹಿರಂಗವಾಗಿದೆ.

Vimal Kumar
| Edited By: ವಿವೇಕ ಬಿರಾದಾರ|

Updated on:Jul 11, 2023 | 11:16 AM

Share

ಮಂಡ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರವ ಕೆಎಸ್​​​ಆರ್​​ಟಿ‌ಸಿ (KSRTC) ಬಸ್ ಚಾಲಕ ಕಂ ನಿರ್ವಾಹಕ ಜಗದೀಶ್​​ರನ್ನು ಜು.6 ರಂದು ಬಿಜಿಎಸ್ ಆಸ್ಪತ್ರೆಯಿಂದ (BGS Hospital) ಹೆಚ್ಚುವರಿ ಚಿಕಿತ್ಸೆಗೆ ಮೈಸೂರಿನ (Mysore) ಕೊಲಂಬಿಯಾ ಆಸ್ಪತ್ರೆಗೆ (Hospital) ಕರೆದೊಯ್ಯಲಾಗುತ್ತಿತ್ತು. ಈ ವೇಳೆ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ತಡೆದಿದ್ದರು ಎಂದು ಸಚಿವ ಚೆಲುವರಾಯಸ್ವಾಮಿ ಆರೋಪಿಸಿದ್ದರು. ಇದೀಗ ಮಾಜಿ‌ ಶಾಸಕ ಸುರೇಶ್ ಗೌಡ ಆಂಬುಲೆನ್ಸ್​​ ತಡೆದಿರುವ ವಿಡಿಯೋ ಲಭ್ಯವಾಗಿದೆ.

ಮಾಜಿ ಶಾಸಕ ಸುರೇಶ್ ಗೌಡ ಹಾಗೂ ಅವರ ಬೆಂಬಲಿಗರು ನಾಗಮಂಗಲ ಪಟ್ಟಣದ ಟಿ.ಬಿ. ಬಡಾವಣೆ ಸರ್ಕಲ್ ಬಳಿ ಕೆಲವು ಕ್ಷಣ ಆಂಬುಲೆನ್ಸ್​ ನಿಲ್ಲಿಸಿ ಜಗದೀಶ್​​ ಅವರಿಗೆ ಇಲ್ಲೇ ಚಿಕಿತ್ಸೆ ಕೊಡಿಸಲು ಆಗುವುದಿಲ್ಲವೇ ಎಂದು ವೈದ್ಯರಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಗದ್ದಲ ಎಬ್ಬಿಸಿದ KSRTC ಬಸ್ ಚಾಲಕ ಆತ್ಮಹತ್ಯೆ ಯತ್ನ ಕೇಸ್: ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷಗಳು

ಜುಲೈ 6 ರ ಮಧ್ಯರಾತ್ರಿ 1.6 ನಿಮಿಷದಲ್ಲಿ ಕೆಲವು ಸಕೆಂಡ್ ವಾಹನ ನಿಲ್ಲಿಸಿ ಡ್ರೈವರ್ ಮುಖ ನೋಡಿದ್ದು ನಿಜಾ ಎಂದು ಮಾಜಿ ಶಾಸಕ ಸುರೇಶ್ ಗೌಡ ಒಪ್ಪಿಕೊಂಡಿದ್ದರು. ಆತ ನಮ್ಮ ಪಕ್ಷದ ಪರವಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡಿದ್ದಾನೆ. ಆತನ ಚಿಕಿತ್ಸೆಗೆ ನಾನು ಅಡ್ಡಿ ಪಡೆಸುತ್ತೇನಾ ಎಂದಿದ್ದರು. ಇದನ್ನೇ ಸಚಿವ ಚೆಲುವರಾಯಸ್ವಾಮಿ ಅವರು ವಾಹನ ತಡೆದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 am, Tue, 11 July 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?