AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ: ಮಂಡ್ಯ ಜನತೆಗೆ ಪರಿ ಪರಿಯಾಗಿ ಬೇಡಿಕೊಂಡ ಕುಮಾರಸ್ವಾಮಿ

ಇಂದು(ಮಾ.01) ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಪ್ರಚಾರ ಕೈಗೊಂಡಿದ್ದು, ‘ನಾನು ಮಂಡ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ‌ ವಿಶ್ವಾವಿಡಿ ಎಂದು ಮಂಡ್ಯ ಜನಗಳಿಗೆ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ.

ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ: ಮಂಡ್ಯ ಜನತೆಗೆ ಪರಿ ಪರಿಯಾಗಿ ಬೇಡಿಕೊಂಡ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 01, 2024 | 5:45 PM

Share

ಮಂಡ್ಯ, ಏ.01: ಲೋಕಸಭಾ ಚುನಾವಣೆ(Lok sabha election) ಹತ್ತಿರವಾಗುತ್ತಿದ್ದಂತೆ ಪ್ರಚಾರಕ್ಕೆ ಇಳಿದ ಉಭಯ ಪಕ್ಷಗಳು, ಒಬ್ಬರ ಮೇಲೊಬ್ಬರು ಕಿಡಿಕಾರುತ್ತಿದ್ದಾರೆ. ಅದರಂತೆ ಇಂದು(ಮಾ.01) ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಪ್ರಚಾರ ಕೈಗೊಂಡಿದ್ದು, ‘ನಾನು ಮಂಡ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ‌ ವಿಶ್ವಾವಿಡಿ ಎಂದು ಮಂಡ್ಯ ಜನಗಳಿಗೆ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ. ಇನ್ನು ಈಗಾಗಲೇ ನನ್ನ ಮೇಲೆ ಮಂಡ್ಯ ಜನರು ವಿಶ್ವಾಸ ಇಟ್ಟಿದ್ದೀರಾ. ಯಾವ ರಾಜಕೀಯ ನಾಯಕರು ಮಂಡ್ಯ ಜಿಲ್ಲೆಯಲ್ಲಿ ನನ್ನಷ್ಟು ಮದುವೆ ಸಮಾರಂಭಗಳಿಗೆ ಹೋಗಿಲ್ಲ. ಹಲವು ಜಿಲ್ಲೆಗಳಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ನನ್ನನ್ನು ಪ್ರಚಾರಕ್ಕೆ ಕರೆಯುತ್ತಿದ್ದಾರೆ. ಸಾಕಷ್ಟು ಕಡೆ ನಾನು‌ ಹೋಗಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.

ಡಿಕೆಶಿಗೆ ಟಾಂಗ್​

ಜೆಡಿಎಸ್ ಈಗ ಮುಗಿದೇ ಹೋಯ್ತು ಎಂದು ಕೆಲವರು ಹೇಳುತ್ತಾರೆ. ನಮ್ಮ ಕಾರ್ಯಕರ್ತರು ನಮಗೆ ಯಾರು ಅನ್ಯಾಯ ಮಾಡಿಲ್ಲ. ಎಲ್ಲರಿಗೂ ನಮ್ಮ ಪಕ್ಷದ ಪರ ಒಲವು‌ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ 4 ಕ್ಷೇತ್ರಗಳನ್ನಾದರೂ ಗೆಲ್ಲುತ್ತಿದ್ದೋ. ನಮ್ಮ ಸ್ವಯಂ ಕೃತ ಅಪಾರಾಧಗಳಿಂದ ಸೋತಿದ್ದೇವೆ. ನನ್ನ ಕನಕಪುರ ಸ್ನೇಹಿತ ನನಗೆ ಅಮೃತ ಹಾಕಿದ್ದೇನೆ ಎಂದು ಹೇಳಿದ್ದಾರೆ. ಅದ್ಯಾವ ಅಮೃತ ಹಾಕಿದ್ದಾನೋ ಗೊತ್ತಿಲ್ಲ. ಇಂದು ಮಂಡ್ಯಗೆ ಬಂದು ಏನ್​ ಏನೋ ಹೇಳಿದ್ದಾರೆ. ಏನು ಹೇಳ್ತಾರೋ ಹೇಳಲಿ, ಜನರು ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಟಾಂಗ್​ ಕೊಟ್ಟಿದ್ದಾರೆ.

ಇದನ್ನೂ ಓದಿ:ವರುಣಾದಲ್ಲಿ ತಮ್ಮ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿಗೆ ಸಿದ್ದರಾಮಯ್ಯ ಗಾಳ; ಮಂಡ್ಯದಲ್ಲಿ ಎಚ್​ಡಿಕೆ ಅಲರ್ಟ್

ನೀರಾವರಿ ವಿಚಾರದಲ್ಲಿನ ಅನ್ಯಾಯ ಸರಿಪಡಿಸಲು ಮೈತ್ರಿ

ಮೇಕೆದಾಟು ಯೋಜನೆ ಏನ್ ಆಯ್ತು. ಕಾಂಗ್ರೆಸ್​ನವರು ಈಗ ಬಿಜೆಪಿ ಸಂಸದರ ಕಡೆ ಬೆಟ್ಟು ಮಾಡಿ ತೋರುತ್ತಾರೆ. ದೇವೇಗೌಡರು ಇನ್ನೂ ಸಹ ಬದುಕಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಎರಡು‌ ಮೂರು ಕ್ಷೇತ್ರ ಗೆಲ್ಲಲು ಅಲ್ಲ. ನಮ್ಮ ರಾಜ್ಯಕ್ಕೆ ಆಗಿರುವ ನೀರಾವರಿ ವಿಚಾರದಲ್ಲಿನ ಅನ್ಯಾಯವನ್ನು ಸರಿ ಪಡಿಸಲು. ನೀರಾವರಿ ವಿಚಾರದಲ್ಲಿ ಇನ್ನೂ ಅಭಿವೃದ್ಧಿ ಮಾಡುತ್ತೇವೆ. ಕನಕಪುರದ ನನ್ನ ಸ್ನೇಹಿತ ಜೆಡಿಎಸ್ ಮುಳುಗಿದೆ, ಕೊನೆ ಆಯ್ತು ಎನ್ನುತ್ತಾರೆ. ಜೆಡಿಎಸ್ ಮುಳುಗಿಲ್ಲ, ಈಗ ಎಳುತ್ತಾ ಇದೆ. ಜೆಡಿಎಸ್‌ನ ತೆನೆ ಹೊತ್ತ ಮಹಿಳೆ, ಹಸಿರಿನಿಂದ ಮೆರೆಯುತ್ತಾರೆ. ಆ ಸ್ನೇಹಿತನಿಗೆ ಜನರೇ ಉತ್ತರ ಕೊಡುತ್ತಾರೆ ಎಂದು ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್‌ಡಿಕೆ.

ಇನ್ನು ನಾವು ನುಡಿದಂತೆ ನಡೆದಿದ್ದೇವೆ ಅಂತಾರೆ. ಎರಡು ಸಾವಿರದಲ್ಲಿ ಏನು ಮಾಡ್ತೀರಾ. ಅದು ಯಾರ ದುಡ್ಡು, ಆ ದುಡ್ಡು ನಿಮ್ಮದೆ. ಈ ಉಚಿತ ಯೋಜನೆಯಿಂದ ಹೊಸ ಯೋಜನೆ ಮಾಡುವುದಕ್ಕೆ ಆಗುತ್ತಿಲ್ಲ. ಅದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ‌ ಗೂಬೆ ಕೂರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಎಲ್ಲದಕ್ಕೂ ಹಣ ಕೊಡಲು ರೆಡಿ ಇದೆ. ಇವರು ಯೋಜನೆಯನ್ನು ಸಿದ್ದಪಡಿಸಿಲ್ಲ, ಯೋಜನೆ‌ ಇಲ್ಲದೇ ಕೇಂದ್ರ ಹೇಗೆ ಹಣ ನೀಡುತ್ತೆ. ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ. ನಿಮಗಾಗಿ ದುಡಿಯಲು ಇನ್ನೊಮ್ಮೆ ಅವಕಾಶ ನೀಡಿ ಎನ್ನುವ ಮೂಲಕ ಮಂಡ್ಯ ಜನರ ಬಳಿ ಮತಯಾಚನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?