ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯದ ಹಿನ್ನೆಲೆ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯದ ಹಿನ್ನೆಲೆ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ.

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯದ ಹಿನ್ನೆಲೆ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರImage Credit source: India Today
Follow us
| Updated By: ವಿವೇಕ ಬಿರಾದಾರ

Updated on:Jul 27, 2022 | 3:27 PM

ಮಂಡ್ಯ:  ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯದ ಹಿನ್ನೆಲೆ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯದ ಹಿನ್ನೆಲೆ ಕೂಲಿ ಕಾರ್ಮಿ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಜುನಾಥ್ ಗಣಿಗಾರಿಕೆಯನ್ನ ನಂಬಿಕೊಂಡು ಬದುಕುತ್ತಿದ್ಧರು.

ಹಿನ್ನೆಲೆ

ಹೈಕೋರ್ಟ್​ ನಿರ್ದೇಶನದಂತೆ ಟ್ರಯಲ್ ಬ್ಲಾಸ್ಟ್​ ಮಾಡಲಾಗುತ್ತಿದೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತರ ಜೊತೆ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಹೇಳಿದ್ದಾರೆ.  2018ರಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿದ್ದೇವೆ. ಹೈಕೋರ್ಟ್ ನಿಂದ ನಿರ್ದೇಶನ ಬಂದಿದೆ. ಆ ಹಿನ್ನಲೆ ಟ್ರಯಲ್ ಬ್ಲಾಸ್ಟ್ ಮಾಡಲಾಗುತ್ತಿದೆ ಎಂದು ರೈತರಿಗೆ ತಿಳಿಸಿದ್ದಾರೆ.

ಟ್ರಯಲ್ ಬ್ಲಾಸ್ಟ್ ನ ವರದಿ ಬಂದ ಬಳಿಕ ಮತ್ತೆ ಚರ್ಚಿಸೋಣ. ಎಲ್ಲರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ಟ್ರಯಲ್ ಬ್ಲಾಸ್ಟ್ ಪ್ರಕ್ರಿಯೆ ನಡೆಸುವುದು ಅನಿವಾರ್ಯವಾಗಿದೆ. ವರದಿ ಬಂದ ಬಳಿಕ ಪರಿಶೀಲಿಸಿ ತೀರ್ಮಾನ ಕೈಗೊಳುತ್ತೇವೆ. ಶಾಶ್ವತವಾಗಿ ನಿಲ್ಲಿಸೋದು ನಿಮ್ಮ ಅಭಿಪ್ರಾಯ. ಅದಕ್ಕೂ ಕೂಡ ಒಂದು ವರದಿ ಬೇಕಿದೆ.  ಸೈಂಟಿಫಿಕ್ ರಿಪೋರ್ಟ್ ಬಂದ ಬಳಿಕ ತೀರ್ಮಾನ ಕೈಗೊಳ್ಳೋಣ ಎಂದು ಹೇಳಿದರು.

ಬೇಬಿ ಬೆಟ್ಟದಲ್ಲಿ ವಿಜ್ಞಾನಿ ಸಿಸೋಮ್ ಟಿವಿ9 ಜೊತೆ ಮಾತನಾಡಿ ಗಣಿಗಾರಿಕೆಯಿಂದ ಆಗುವ ಪರಿಣಾಮದ ಬಗ್ಗೆ ತಿಳಿಯಲು ಬಂದಿದ್ದೇವೆ. ಟ್ರಯಲ್ ಬ್ಲಾಸ್ಟ್​ನಿಂದ ಎಲ್ಲವೂ ಗೊತ್ತಾಗಲಿದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿದರೆ ಗ್ರೌಂಡ್​ ವೈಬ್ರೇಷನ್​ ​ಕೆಆರ್​ಎಸ್​ ಮೇಲೆ ಪರಿಣಾಮ ಬೀರುತ್ತಾ ನೋಡಬೇಕು. ಟ್ರಯಲ್​ ಬ್ಲಾಸ್ಟ್​ ನಡೆಸದ ಹೊರತಾಗಿ ಪರಿಣಾಮ ಗೊತ್ತಾಗಲ್ಲ ಎಂದು ಹೇಳಿದರು.

ಇಂದಿನಿಂದಲೇ ಟ್ರಯಲ್ ಬ್ಲಾಸ್ಟ್​ ಪ್ರಕ್ರಿಯೆ ಆರಂಭವಾಗಲಿದೆ. ಬೇಬಿ ಬೆಟ್ಟದಲ್ಲಿ ಆದಷ್ಟು ಬೇಗ ಟ್ರಯಲ್ ಬ್ಲಾಸ್ಟ್​ ಮಾಡಲಿದ್ದೇವೆ. ಆಧುನಿಕ ತಂತ್ರಜ್ಞಾನ ಬಳಸಿ ಟ್ರಯಲ್ ಬ್ಲಾಸ್ಟ್​ ಮಾಡುತ್ತಿದ್ದೇವೆ. ಕೆಆರ್​ಎಸ್​ ಡ್ಯಾಂ ಡೈರೆಕ್ಷನ್​ಗೆ 8 ಸಿಸ್ಮೋಗ್ರಾಫ್​ ಅಳವಡಿಸುತ್ತೇವೆ. ಎಷ್ಟು ವೈಬ್ರರೇಟ್ ಜನರೇಟ್ ಆಗುತ್ತೆ ಅನ್ನೋದನ್ನ ಪರಿಶೀಲಿಸುತ್ತೇವೆ ಎಂದರು.

ನ್ಯಾಯಾಲಯದ ಆದೇಶದಂತೆ ಟ್ರಯಲ್ ಬ್ಲಾಸ್ಟ್‌ಗೆ ಸಿದ್ದತೆ ಮಾಡಿಕೊಂಡಿದ್ದೇವೆ. ಇವತ್ತು ಸ್ಥಳ ಪರಿಶೀಲನೆ ಮಾಡಲಾಗಿದೆ. ಆಳವಾದ ಸ್ಥಳಗಳಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುತ್ತಾರೆ. ಒಂದು ವರ್ಗ ಟ್ರಯಲ್ ಬ್ಲಾಸ್ಟ್ ಮಾಡಕೂಡದು ಎಂದು ಪ್ರತಿಭಟಿಸುತ್ತಿದ್ದಾರೆ. ಅವರಿಗೆ ಟ್ರಯಲ್ ಬ್ಲಾಸ್ಟ್ ಅಗತ್ಯದ ಬಗ್ಗೆ ಮನವರಿಕೆ ಮಾಡಿದ್ದೇನೆ. ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ಸಾಧ್ಯ ಇಲ್ಲ ಎಂದಿದ್ದಾರೆ. ಪರಿಸ್ಥಿತಿಯನ್ನು ಮೇಲಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಶ್ರೀರಂಗಪಟ್ಟಣ ಉಪ ವಿಭಾಗಧಿಕಾರಿ ಶಿವಾನಂದಮೂರ್ತಿ ಮಾತನಾಡಿದರು.

Published On - 2:59 pm, Wed, 27 July 22