AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿ ಸಿಎಂ ಆಗಿ ರಾಜ್ಯದ ಗೌರವವನ್ನು ಕಾಪಾಡಲಿ, ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ ಡಿ.ಕೆ.ಶಿವಕುಮಾರ್

ಬೊಮ್ಮಾಯಿ ಸಿಎಂ ಆಗಿ ರಾಜ್ಯದ ಗೌರವವನ್ನು ಕಾಪಾಡಲಿ ಎಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಡಿ.ಕೆ.ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಬೊಮ್ಮಾಯಿ ಸಿಎಂ ಆಗಿ ರಾಜ್ಯದ ಗೌರವವನ್ನು ಕಾಪಾಡಲಿ, ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
TV9 Web
| Edited By: ಆಯೇಷಾ ಬಾನು|

Updated on: Jul 28, 2021 | 2:37 PM

Share

ಮಂಡ್ಯ: ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಸಿಎಂ ಆಗಿ ರಾಜ್ಯದ ಗೌರವವನ್ನು ಕಾಪಾಡಲಿ ಎಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನೆರವು ಸಿಕ್ಕಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಹಲವು ಕೆಲಸಗಳು ಆಗಬೇಕಿದೆ. ಮೇಕೆದಾಟು ಅಟೆಕಟ್ಟು ನಿರ್ಮಾಣದ ವಿಚಾರದಲ್ಲಿ ಡ್ಯಾಂ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ ಸೇರಿದಂತೆ ಅನೇಕ ಕೆಲಸಗಳಾಗಬೇಕು. ಸಿಎಂ ಬೊಮ್ಮಾಯಿ ಎಲ್ಲ ಸಂಸದರನ್ನು ಕರೆದೊಯ್ಯಲಿ. ಬೊಮ್ಮಾಯಿ ರಾಜ್ಯದ ಹಿತ ಕಾಪಾಡುವ ವಿಶ್ವಾಸವಿದೆ. ಬಿಎಸ್‌ವೈ ಅವಧಿಯಲ್ಲಿ ಏನೇನೋ ಹೇಳಿಕೆ ನೀಡುತ್ತಿದ್ದರು. ಬಿಜೆಪಿಯಲ್ಲಿ ಶಿಸ್ತು ಕಾಣಿಸುತ್ತಿರಲಿಲ್ಲ, ಈಗ ನೋಡಬೇಕು. ರಾಜೀನಾಮೆ ಘೋಷಣೆ ದಿನ ಬಿಎಸ್‌ವೈ ಕಣ್ಣೀರಾಕಿದರು. ಆ ಕಣ್ಣೀರಿನ ಹಿನ್ನೆಲೆಯನ್ನು ಹೇಳಬೇಕು. ವಿದಾಯದ ಭಾಷಣದಲ್ಲಿ ಬಿಎಸ್‌ವೈ ನೋವು ಹೇಳಿಕೊಂಡಿದ್ದಾರೆ. ಅವರ ಭಾಷಣ ಬಹಳ ಸಂಶಯಕ್ಕೂ ಎಡೆ ಮಾಡಿಕೊಟ್ಟಿದೆ. ಆ ನೋವಿನ ಹಿನ್ನೆಲೆಯನ್ನು ಯಡಿಯೂರಪ್ಪ ಹೇಳಲಿ ಎಂದಿದ್ದಾರೆ.

ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿಯವರಿಗೆ ಪ್ರಮಾಣ ವಚನ ಭೋದಿಸಿದ್ದು ದೇವರ ಹೆಸರಿನಲ್ಲಿ ಬೊಮ್ಮಾಯಿ‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇವಲ ಮೂರೇ ನಿಮಿಷದಲ್ಲಿ ಕಾರ್ಯಕ್ರಮ ಮುಗಿದಿದೆ. ಈ ಸಮಾರಂಭಕ್ಕೆ ಬಸವರಾಜ ಬೊಮ್ಮಾಯಿ ಕುಟುಂಬಸ್ಥರಾದ ಪತ್ನಿ ಚನ್ನಮ್ಮ, ಪುತ್ರ ಭರತ್, ಪುತ್ರಿ ಆದಿತಿ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ: ಜನಪರ ಆಡಳಿತದ ಭರವಸೆ ನೀಡಿದ ಬಸವರಾಜ ಬೊಮ್ಮಾಯಿ; ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತ ಏರಿಕೆ

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ