Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ -ಮಾಜಿ ಸಿಎಂ ಬೊಮ್ಮಾಯಿ

ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ಮೊದಲಿಂದಲೂ ಎಡವಿದೆ. ಸಿಎಂ, ಡಿಸಿಎಂ ನಡುವೆ ವ್ಯತ್ಯಾಸ ಇದೆ. ಅದರಿಂದ ಜನರಿಗೆ ಅನ್ಯಾಯವಾಗುತ್ತಿದೆ. ಸುಪ್ರಿಂ ಕೋರ್ಟ್ ಗೆ ಇನ್ನು ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡಲು ವಿಫಲವಾಗಿದ್ದಾರೆ ಎಂದರು.

ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ -ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on:Oct 02, 2023 | 3:16 PM

ಮಂಡ್ಯ, ಅ.02: ಕಾವೇರಿ ವಿಚಾರದಲ್ಲಿ (Cauvery Water Dispute) ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಬಹಳ ವ್ಯತ್ಯಾಸ ಇದೆ. ಆದ್ದರಿಂದ ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾವೇರಿ ವಿಚಾರವಾಗಿ ಇನ್ನೂ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ವಿಫಲವಾಗಿದೆ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದರು.

ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ಮೊದಲಿಂದಲೂ ಎಡವಿದೆ. ಸಿಎಂ, ಡಿಸಿಎಂ ನಡುವೆ ವ್ಯತ್ಯಾಸ ಇದೆ. ಅದರಿಂದ ಜನರಿಗೆ ಅನ್ಯಾಯವಾಗುತ್ತಿದೆ. ಸುಪ್ರಿಂ ಕೋರ್ಟ್ ಗೆ ಇನ್ನು ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡಲು ವಿಫಲವಾಗಿದ್ದಾರೆ. ಡಿಕೆ ಶಿವಕುಮಾರ್ ನೀರು ಬಿಡುತ್ತಿಲ್ಲ ಎನ್ನುತ್ತಾರೆ. ಆದರೆ ಅಧಿಕಾರಿ ಬಳಿ ಮಾಹಿತಿ ಕೇಳಿದ್ರೆ ಎರಡು ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ ಎನ್ನುತ್ತಿದ್ದಾರೆ. ಯಾಕೆ ಈ ರೀತಿ ಸುಳ್ಳು ಹೇಳುತ್ತಿದ್ದೀರಿ. ಜನರನ್ನ ಯಾಕೆ ದಾರಿ ತಪ್ಪಿಸುತ್ರಿದ್ದೀರಿ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ. ನಾವು ಸಹಕಾರ ಕೊಡುತ್ತೇವೆ. ಏನು ಮಾಡಬೇಕು ಎಂದು ನಿಲುವು ತೆಗೆದುಕೊಳ್ಳಿ ಎಂದರು.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಹೇಳಿದ್ದಿಷ್ಟು

ನಮ್ಮ ಸರ್ಕಾರ ಇದ್ದಾಗ ಮೇಕೆದಾಟು ಯೋಜನೆ ಡಿಪಿಆರ್​ಗೆ ಅನುಮತಿ ಕೊಟ್ಟಿದ್ದೇವು. ಜಲಶಕ್ತಿ ಇಲಾಖೆಯಿಂದ ಏನು ಸಹಕಾರ ಬೇಕೋ ಅದನ್ನ ನಾವು ಮಾಡುತ್ತೇವೆ. ಬೆಂಗಳೂರು ನೀರಿಗೆ ಪ್ಲಾನ್ ಮಾಡಬೇಕು. ಬ್ರಾಂಡ್ ಬೆಂಗಳೂರು ಅಂದರೇ ಸಾಲದು. ನೀರಿಗೆ ತೊಂದರೆ ಆಗಲಿದೆ. 2018ರಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚೆ ಮಾಡಿದ್ದೇವು. ಸಭೆಯಲ್ಲಿ ನೀರು ಬಿಡಲ್ಲ ಎಂದು ನೀರು ಬಿಟ್ಟಿದ್ದಾರೆ. ತಮಿಳುನಾಡು ಸರ್ಕಾರವನ್ನ ಒಪ್ಪಿಸಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಲಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಎಲ್ಲ ತಾಲೂಕುಗಳನ್ನ ಬರಗಾಲ ಎಂದು ಘೋಷಣೆ ಮಾಡಿದೆ. ಒಂದು ಎಕರೆಗೆ 25 ಸಾವಿರ ಪರಿಹಾರ ಕೊಡುಬೇಕು ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:16 pm, Mon, 2 October 23

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ