AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಪ್ರತಿಷ್ಠೆಯ ಕಣವಾದ ಲೋಕಲ್ ಎಲೆಕ್ಷನ್; ಸ್ವಾಮಿ ವರ್ಸಸ್ ಸ್ವಾಮಿ ನಡುವೆ ಬಿಗ್ ಫೈಟ್

ಸಕ್ಕರೆ ನಗರಿ ಮಂಡ್ಯದಲ್ಲಿ ಯಾವುದೇ ಚುನಾವಣೆಗಳು ನಡೆದರೂ ಸಾಕಷ್ಟು ಜಿದ್ದಾಜಿದ್ದಿಯಲ್ಲಿ ನಡೆಯುತ್ತವೆ. ಅದು ಲೋಕಲ್ ಚುನಾವಣೆ ಆಗಿರಬಹುದು ಅಥವಾ ಲೋಕಸಭಾ ಚುನಾವಣೆ ಆಗಿರಬಹುದು. ಯಾವುದೇ ಎಲೆಕ್ಷನ್ ಇದ್ದರು ಅಲ್ಲಿ ಸಾಕಷ್ಟು ಪೈಪೋಟಿ ಇರುತ್ತದೆ. ಅದೇ ರೀತಿ ಇದೀಗ ನಡೆಯುತ್ತಿರುವ ಲೋಕಲ್ ಬಾಡಿ ಎಲೆಕ್ಷನ್ ಕೂಡ ಸಾಕಷ್ಟು ಜಿದ್ದಾಜಿದ್ದಿ ಏರ್ಪಟ್ಟಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ರಾಜ್ಯ ಸಚಿವ ಚಲುವರಾಯಸ್ವಾಮಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಮಂಡ್ಯದಲ್ಲಿ ಪ್ರತಿಷ್ಠೆಯ ಕಣವಾದ ಲೋಕಲ್ ಎಲೆಕ್ಷನ್; ಸ್ವಾಮಿ ವರ್ಸಸ್ ಸ್ವಾಮಿ ನಡುವೆ ಬಿಗ್ ಫೈಟ್
ಕುಮಾರಸ್ವಾಮಿ, ಚಲುವರಾಯಸ್ವಾಮಿ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2024 | 8:47 PM

Share

ಮಂಡ್ಯ, ಆ.23: ಸಕ್ಕರೆ ನಗರಿ ಮಂಡ್ಯ(Mandya) ಜಿಲ್ಲೆ ಅಂದರೇ ಸಾಕು ಚುನಾವಣೆಗಳಿಗೆ ಸಾಕಷ್ಟು ಫೇಮಸ್. ಇಲ್ಲಿ ಯಾವುದೇ ಚುನಾವಣೆ ನಡೆದರೂ ಕೂಡ ಜಿದ್ದಾಜಿದ್ದಿ ಏರ್ಪಡುತ್ತದೆ. ಅದು ಲೋಕಲ್ ಚುನಾವಣೆ(Election) ಅಥವಾ ಲೋಕಸಭಾ ಚುನಾವಣೆ ಇರಬಹುದು. ಯಾವುದೇ ಎಲೆಕ್ಷನ್ ಇದ್ದರೂ ಜಿದ್ದಾಜಿದ್ದಿ ಅಂತೂ ತಪ್ಪಲ್ಲ. ಅದರಲ್ಲೂ ಇತ್ತಿಚೇಗೆ ಲೋಕಸಭಾ ಚುನಾವಣೆ ಮುಗಿದು, ಇದೀಗ ಜಿಲ್ಲೆಯಲ್ಲಿ ಲೋಕಲ್ ಸಮರ ಕೂಡ ಏರ್ಪಟ್ಟಿದೆ. ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ ಸ್ಥಾನದ ಚುನಾವನೆ ನಡೆಯುತ್ತಿದೆ.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡ್ಯದಿಂದ ಗೆಲುವು ಸಾಧಿಸಿ ಇದೀಗ ಕೇಂದ್ರದ ಸಚಿವರು ಕೂಡ ಆಗಿದ್ದಾರೆ. ಹೀಗಾಗಿ ಎಲ್ಲಾ ಚುನಾವಣೆಗಳನ್ನ ಕೂಡ ಗಮನಹರಿಸಬೇಕಿದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಲೋಕಲ್ ಫೈಟ್​ ಸಾಕಷ್ಟು ಕೂತುಹಲ ಮೂಡಿಸಿದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ: ಮಂಡ್ಯದಲ್ಲಾದ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಕಾಂಗ್ರೆಸ್

ಮಂಡ್ಯ ನಗರಸಭೆ ಚುನಾವಣೆ

ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇದೇ ತಿಂಗಳು 28ರಂದು ನಡೆಯುತ್ತಿದ್ದು, ಒಟ್ಟು 35 ಸದಸ್ಯರ ಬಲವೊಂದಿದ್ದು, ಅದರಲ್ಲಿ ಕಾಂಗ್ರೆಸ್ 10, ಜೆಡಿಎಸ್​ 18, ಬಿಜೆಪಿ 2 ಹಾಗೂ ಪಕ್ಷೇತರ 5 ಸದಸ್ಯರು ಇದ್ದಾರೆ. ಇದರ ಜೊತೆಗೆ ಜೆಡಿಎಸ್ ಎಂಪಿ ಹಾಗೂ ಕಾಂಗ್ರೆಸ್ ಎಮ್​ಎಲ್​ಎಗೆ ಮತದಾನದ ಹಕ್ಕಿದೆ. ಮ್ಯಾಜಿಕ್ ನಂಬರ್ 19 ಇದ್ದು, ಹೀಗಾಗಿ ಜೆಡಿಎಸ್ ಶತಾಯ ಗತಾಯ ಅಧಿಕಾರಕ್ಕೆ ಏರಲು ತಯಾರಿ ಮಾಡುತ್ತಿದೆ. ಆದರೆ, ಜೆಡಿಎಸ್​ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಕೂಡ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಜೆಡಿಎಸ್ ಬಿಜೆಪಿ ಹಾಗೂ ಪಕ್ಷೇತರರನ್ನ ಸೆಳೆದು ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದೆ.

ಹೀಗಾಗಿ ಕುದುರೆ ವ್ಯಾಪಾರ ಕೂಡ ಜೋರಾಗಿದ್ದು, ಕೆಲವಷ್ಟು ಸದಸ್ಯರಿಗೆ ಪ್ರವಾಸದ ಭಾಗ್ಯ ಕೂಡ ಕಲ್ಪಿಸಲಾಗಿದೆ. ಒಟ್ಟಾರೆ ಮಂಡ್ಯ ಜಿಲ್ಲೆಯಲ್ಲಿ ಲೋಕಲ್ ಸಮರದ ಕಾವು ಜೋರಾಗಿದೆ. ಯಾರಿಗೆ ಗದ್ದುಗೆ ಎನ್ನುವುದನ್ನ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ