AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಮೈತ್ರಿಯ ಟಿಕೆಟ್, ಮಹತ್ವದ ಸಭೆ

ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಸ್ಪರ್ಧೆ ನಿರಾಕರಿಸಿದ ಹಿನ್ನೆಲೆ ಇಂದು ದೊಡ್ಡಗೌಡರ ಮನೆಯಲ್ಲಿ ಮಂಡ್ಯ ಕ್ಷೇತ್ರದ ಸಂಬಂಧ ಮಹತ್ವದ ಸಭೆ ನಡೆಸಲಾಗುತ್ತಿದೆ. ನಿಖಿಲ್ ಅವರನ್ನು ಮನವೊಲಿಸಿ ಸ್ಪರ್ಧಿಸುಂತೆ ತಿಳಿಸಿ. ಇಲ್ಲ ಕುಮಾರಸ್ವಾಮಿ ಅವರನ್ನು ನಿಲ್ಲಲು ಸೂಚನೆ ನೀಡಿ. ಇಬ್ಬರಲ್ಲಿ ಒಬ್ಬರು ಮಂಡ್ಯ ಅಭ್ಯರ್ಥಿಯಾಗಬೇಕು ಎಂದು ಹೆಚ್‌ಡಿಡಿ ಅವರಿಗ ಮನವಿ ಮಾಡಲಿದ್ದಾರೆ.

ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಮೈತ್ರಿಯ ಟಿಕೆಟ್, ಮಹತ್ವದ ಸಭೆ
ನಿಖಿಲ್‌ ಕುಮಾರಸ್ವಾಮಿ, ಹೆಚ್​ಡಿ ಕುಮಾರಸ್ವಾಮಿ
ಪ್ರಶಾಂತ್​ ಬಿ.
| Edited By: |

Updated on:Feb 13, 2024 | 10:04 AM

Share

ಮಂಡ್ಯ, ಫೆ.13: ನಾನು ಮಂಡ್ಯ ಲೋಕಸಭಾ ಕ್ಷೇತ್ರದ (Mandya Loksabha Election) ಟಿಕೆಟ್‌ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಮಂಡ್ಯ ಲೋಕಸಭಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಹಾಗಿದ್ರೆ ಮಂಡ್ಯ ಕ್ಷೇತ್ರದಿಂದ ಮೈತ್ರಿಯ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಆಯ್ಕೆ ಮತ್ತೆ ದಳಪತಿಗಳಿಗೆ ಗೊಂದಲವಾಗಿದೆ.

ಮಂಡ್ಯ ಲೋಕಸಭಾ ಅಖಾಡದಿಂದ ನಿಖಿಲ್ ಹಿಂದೆ ಸರಿದ ಹಿನ್ನಲೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಅವರ ಬಳಿಗೆ ನಾಯಕರು ಹೋಗಲಿದ್ದಾರೆ. ಕುಮಾರಸ್ವಾಮಿ ಅವರೇ ಅಭ್ಯರ್ಥಿ ಆಗಬೇಕೆಂದು ದಳಪತಿಗಳು ಒತ್ತಡ ಹಾಕಲಿದ್ದಾರೆ. ನೀವು ಬನ್ನಿ ಇಲ್ಲ ನಿಖಿಲ್ ಮನವೊಲಿಸಿ ಎಂದು ಕುಮಾರಸ್ವಾಮಿಗೆ ಮನವಿ ಮಾಡಲಿದ್ದಾರೆ. ಮಂಡ್ಯದಿಂದ ಮಾಜಿ ಸಚಿವರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ ಟಿಕೆಟ್ ಆಕಾಂಕ್ಷಿತರು. ಮೂವರಲ್ಲಿ ಒಬ್ಬರು ಸ್ಪರ್ಧೆ ಮಾಡಿ ನಾವು ಇರ್ತೀವಿ ಎಂದು ಕುಮಾರಸ್ವಾಮಿ ಅವರು ಹೇಳುವ ಸಾಧ್ಯತೆ ಇದೆ. ಇಲ್ಲ ನಿಖಿಲ್ ಮನವೊಲಿಸಲು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಅಥವಾ ತಾವೇ ಮಂಡ್ಯ ಅಖಾಡಕ್ಕೆ ಪ್ರವೇಶ ಮಾಡ್ತಾರಾ ಎಂಬುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಚರ್ಚೆಗೆ ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ

ಕ್ಷೇತ್ರ ಹಂಚಿಕೆಗೂ ಮುನ್ನವೇ ಮಂಡ್ಯ ಜೆಡಿಎಸ್ ಗೆ ಬಿಗ್ ಶಾಕ್

ಲೋಕಸಭೆಗೆ ಸ್ಪರ್ಧಿಸದಿರಲು ನಿಖಿಲ್ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧೆಗೆ ನಿರಾಕರಿಸಿದ್ದಾರೆ. ಯಾವುದೇ ಒತ್ತಡ ಬಂದರೂ ನಾನೂ ಸ್ಪರ್ಧಿಸಲ್ಲ ಎಂಬ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ನಿಖಿಲ್ ಸ್ಪರ್ಧೆ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಮಂಡ್ಯದಿಂದಲೇ ನಿಖಿಲ್ ಸ್ಪರ್ಧೆಗೆ ಪದೇ ಪದೇ ಒತ್ತಾಯಿಸುತ್ತಿದ್ದರು. ನಿಖಿಲ್ ಸ್ಪರ್ಧೆಗೆ ಒಪ್ಪದಿರಲು ಕಾರಣಗಳೇನು? ನಿಖಿಲ್ ನಿರ್ಧಾರದ ಹಿಂದೆ ರಾಜಕೀಯ ಭವಿಷ್ಯದ ಲೆಕ್ಕಾಚಾರ ಇದಿಯಾ? ಎನ್ನಲಾಗುತ್ತಿದೆ. ಈಗಾಗಲೇ ಎರಡು ಸೋಲು ಕಂಡಿರುವ ನಿಖಿಲ್‌ಗೆ ಮತ್ತೆ ಸೋಲಾದ್ರೆ ರಾಜಕೀಯ ಭವಿಷ್ಯ ಕಮರುವ ಚಿಂತೆ ಇದೆ. ನಿಖಿಲ್ ಸ್ಪರ್ಧೆಯೇ ವಿರೋಧಿಗಳಿಗೆ ಚುನಾವಣಾ ಅಸ್ತ್ರವಾಗುವ ಸಾಧ್ಯತೆ ಇದೆ. ಅವಕಾಶವಾದಿ ರಾಜಕಾರಣಿ ಎಂದು ಹಣೆಪಟ್ಟಿ ಕಟ್ಟುವ ಭೀತಿ ಇದೆ. ಮಂಡ್ಯ ಸೋಲಿನ ಬಳಿಕ ರಾಮನಗರ ಸೋಲಿನಿಂದ ಮತ್ತೆ ಮಂಡ್ಯಕ್ಕೆ ಬಂದ್ರು ಎಂದು ಅಪಪ್ರಚಾರ ಅಲ್ಲದೇ ಹೊರಗಡೆಯಿಂದ ಅಭ್ಯರ್ಥಿ ಕರೆತಂದರು ಎಂದು ಮತ್ತೆ ಕಳೆದ ಬಾರಿಯಂತೆ ಸ್ವಾಭಿಮಾನದ ಕಿಚ್ಚು ಹಚ್ಚುವ ಆತಂಕ ವಿದೆ.

ದೊಡ್ಡಗೌಡರ ಮನೆಯಲ್ಲಿ ಸಭೆ

ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಸ್ಪರ್ಧೆ ನಿರಾಕರಿಸಿದ ಹಿನ್ನೆಲೆ ಇಂದು ದೊಡ್ಡಗೌಡರ ಮನೆಯಲ್ಲಿ ಮಂಡ್ಯ ಕ್ಷೇತ್ರದ ಸಂಬಂಧ ಮಹತ್ವದ ಸಭೆ ನಡೆಸಲಾಗುತ್ತಿದೆ. ಹೆಚ್.ಡಿ.ದೇವೇಗೌಡರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್‌ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಿಖಿಲ್ ಅಥವಾ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸುವಂತೆ ಒತ್ತಾಯ ಮಾಡಲಿದ್ದಾರೆ. ಸದ್ಯ ಮಂಡ್ಯ ಸ್ಪರ್ಧೆಯನ್ನು ನಿಖಿಲ್ ನಿರಾಕರಿಸಿದ್ದು ಇಂದಿನ ಸಭೆಯಲ್ಲಿ ಜೆಡಿಎಸ್‌ ನಾಯಕರು ಈ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ನಿಖಿಲ್ ಅವರನ್ನು ಮನವೊಲಿಸಿ ಸ್ಪರ್ಧಿಸುಂತೆ ತಿಳಿಸಿ. ಇಲ್ಲ ಕುಮಾರಸ್ವಾಮಿ ಅವರನ್ನು ನಿಲ್ಲಲು ಸೂಚನೆ ನೀಡಿ. ಇಬ್ಬರಲ್ಲಿ ಒಬ್ಬರು ಮಂಡ್ಯ ಅಭ್ಯರ್ಥಿಯಾಗಬೇಕು ಎಂದು ಹೆಚ್‌ಡಿಡಿ ಅವರಿಗ ಮನವಿ ಮಾಡಲಿದ್ದಾರೆ. ಹೀಗಾಘಿ ಇಂದಿನ ಸಭೆ ಸಾಕಷ್ಟು ಮಹತ್ವ ಪಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:59 am, Tue, 13 February 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?