AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಹವಾ ಕ್ರಿಯೇಟ್​ ಮಾಡಲು ಯುವಕನ ಮೇಲೆ ಮಚ್ಚು ಬೀಸಿದ ಪುಡಿ ರೌಡಿಗಳು; ಕೇಸ್​ ಬುಕ್

ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ಪುಡಿ ರೌಡಿಗಳ ಅಟ್ಟಹಾಸ‌ ಜೋರಾಗಿದೆ. ತಮ್ಮ ಹವಾ‌ ಸೃಷ್ಟಿಸಿಕೊಳ್ಳಲು ಹಾಡು ಹಗಲಲ್ಲೇ ನಡು ರಸ್ತೆಯಲ್ಲಿ ನಿಂತಿದ್ದ ಯುವಕನ ಮೇಲೆ ಲಾಂಗ್​ನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.

ಮಂಡ್ಯದಲ್ಲಿ ಹವಾ ಕ್ರಿಯೇಟ್​ ಮಾಡಲು ಯುವಕನ ಮೇಲೆ ಮಚ್ಚು ಬೀಸಿದ ಪುಡಿ ರೌಡಿಗಳು; ಕೇಸ್​ ಬುಕ್
ಹಲ್ಲೆಗೊಳಗಾದ ಯುವಕ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 04, 2023 | 11:41 AM

Share

ಮಂಡ್ಯ, ಆ.4: ತಮ್ಮ ಹವಾ‌ ಸೃಷ್ಟಿಸಿಕೊಳ್ಳಲು ಹಾಡು ಹಗಲಲ್ಲೇ ನಡು ರಸ್ತೆಯಲ್ಲಿ ನಿಂತಿದ್ದ ಯುವಕನ ಮೇಲೆ ಲಾಂಗ್​ನಿಂದ ಹಲ್ಲೆ ಮಾಡಿದ ಘಟನೆ ಮಂಡ್ಯ(Mandya) ತಾಲೂಕಿನ ಹೊಳಲು ಗ್ರಾಮದಲ್ಲಿ ನಡೆದಿದೆ. ಮೂಲಕ ಪುಡಿ ರೌಡಿಗಳ ಅಟ್ಟಹಾಸ‌ ಜೋರಾಗಿದೆ. ಶಾರಂತ್ (29) ಪುಡಿ ರೌಡಿಗಳ ಅಟ್ಟಹಾಸದಲ್ಲಿ ಲಾಂಗ್ ಏಟು ತಿಂದ ಯುವಕ. ಹೊಳಲು ಗ್ರಾಮದ ಮಾದ ಅಲಿಯಾಸ್ ಮಾದಪ್ಪ ಆಂಡ್ ಗ್ಯಾಂಗ್​ನಿಂದ ಈ ಕೃತ್ಯ ಎಸಗಲಾಗಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಹಲ್ಲೆ ಮಾಡಿದ ಮಾದಪ್ಪ, ಚಿಂಟು, ತರುಣ್, ಸುಶಾಂತ್, ಚಂದನ್ ಅವರ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

ಬೈಕ್​ನಲ್ಲಿ ಬಂದ ಐವರಿಂದ ಹಲ್ಲೆ

ಇನ್ನು ಬರ್ತಡೇ‌ ಹಿನ್ನಲೆ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟೂರಿಗೆ ಬಂದಿದ್ದ ಶಾರಂತ್. ಗ್ರಾಮದ ಸರ್ಕಲ್ ಒಂದರಲ್ಲಿ ಸ್ನೇಹಿತರ ಜೊತೆ ಮಾತನಾಡುತ್ತಿದ್ದ. ಈ ವೇಳೆ ಎರಡು ಬೈಕ್​ನಲ್ಲಿ ಬಂದ ಐವರು ಕ್ಯಾತೆ ತೆಗೆದಿದ್ದಾರೆ. ಏಕಾಏಕಿ ಶಾರಂತ್ ಮೇಲೆ ಮಾದ ಅಂಡ್ ಗ್ಯಾಂಗ್ ಲಾಂಗು, ಡ್ರ್ಯಾಗರ್​ನಿಂದ ಹಲ್ಲೆ ನಡೆಸಿದ್ದಾರೆ. ಲಾಂಗ್ ಬೀಸಿದ್ದರಿಂದ ಯುವಕನಿಗೆ ಕಣ್ಣಿನ ಉಬ್ಬು, ಬಾಯಿಗೆ ಗಂಭೀರ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಹಾಡಹಗಲೇ ಕಾಲೇಜು ವಿದ್ಯಾರ್ಥಿ ಮೇಲೆ ಲಾಂಗ್​ನಿಂದ ಹಲ್ಲೆ! ಘಟನೆಗೆ ಕಾರಣವಾಯ್ತಾ ಹುಡುಗಿ ವಿಚಾರ?

ಗಾಯಾಳು ಶಾರಂತ್​ಗೆ 16 ಸ್ಟಿಚ್

ಇನ್ನು ಲಾಂಗ್​ ದಾಳಿ ತೀವ್ರ ಗಾಯಗೊಂಡ ಗಾಯಾಳು ಶಾರಂತ್​ಗೆ ಮಂಡ್ಯದ ಮಿಮ್ಸ್ ವೈದ್ಯರು 16 ಸ್ಟಿಚ್ ಹಾಕಿದ್ದಾರೆ. ಇನ್ನು ಅಷ್ಟೇ ಅಲ್ಲ, ಈ‌ ಹಿಂದೆ ಮಾದಪ್ಪನಿಗೆ ಬಾಸ್ ಎನ್ನುವಂತೆ ಮಾದನ ಸ್ನೇಹಿತರು ಅವಾಜ್ ಹಾಕಿದ್ದರಂತೆ. ಆ ವೇಳೆ ಅವನ್ಯಾವನೋ ಬಾಸ್ ಎಂದು ಶಾರಂತ್ ಟಾಂಗ್ ಕೊಟ್ಟಿದ್ದ. ಅಂದು ಗಲಾಟೆ ನಡೆದು ತಣ್ಣಗಾಗಿತ್ತು. ಅದೇ ದ್ವೇಷ ಇಟ್ಟುಕೊಂಡು ಬರ್ತ್ ಡೇ ದಿನವೇ ಶಾರಂತ್ ಮೇಲೆ ಕ್ಯಾತೆ ತೆಗೆದು ಮಾದಪ್ಪ ಅಂಡ್ ಟೀಂ‌ ಲಾಂಗ್​ನಿಂದ ಗಂಭೀರ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಕಿರಾತಕರು ಎಸ್ಕೇಪ್ ಆಗಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ