ಮಂಡ್ಯದಲ್ಲಿ ಹವಾ ಕ್ರಿಯೇಟ್​ ಮಾಡಲು ಯುವಕನ ಮೇಲೆ ಮಚ್ಚು ಬೀಸಿದ ಪುಡಿ ರೌಡಿಗಳು; ಕೇಸ್​ ಬುಕ್

ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ಪುಡಿ ರೌಡಿಗಳ ಅಟ್ಟಹಾಸ‌ ಜೋರಾಗಿದೆ. ತಮ್ಮ ಹವಾ‌ ಸೃಷ್ಟಿಸಿಕೊಳ್ಳಲು ಹಾಡು ಹಗಲಲ್ಲೇ ನಡು ರಸ್ತೆಯಲ್ಲಿ ನಿಂತಿದ್ದ ಯುವಕನ ಮೇಲೆ ಲಾಂಗ್​ನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.

ಮಂಡ್ಯದಲ್ಲಿ ಹವಾ ಕ್ರಿಯೇಟ್​ ಮಾಡಲು ಯುವಕನ ಮೇಲೆ ಮಚ್ಚು ಬೀಸಿದ ಪುಡಿ ರೌಡಿಗಳು; ಕೇಸ್​ ಬುಕ್
ಹಲ್ಲೆಗೊಳಗಾದ ಯುವಕ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 04, 2023 | 11:41 AM

ಮಂಡ್ಯ, ಆ.4: ತಮ್ಮ ಹವಾ‌ ಸೃಷ್ಟಿಸಿಕೊಳ್ಳಲು ಹಾಡು ಹಗಲಲ್ಲೇ ನಡು ರಸ್ತೆಯಲ್ಲಿ ನಿಂತಿದ್ದ ಯುವಕನ ಮೇಲೆ ಲಾಂಗ್​ನಿಂದ ಹಲ್ಲೆ ಮಾಡಿದ ಘಟನೆ ಮಂಡ್ಯ(Mandya) ತಾಲೂಕಿನ ಹೊಳಲು ಗ್ರಾಮದಲ್ಲಿ ನಡೆದಿದೆ. ಮೂಲಕ ಪುಡಿ ರೌಡಿಗಳ ಅಟ್ಟಹಾಸ‌ ಜೋರಾಗಿದೆ. ಶಾರಂತ್ (29) ಪುಡಿ ರೌಡಿಗಳ ಅಟ್ಟಹಾಸದಲ್ಲಿ ಲಾಂಗ್ ಏಟು ತಿಂದ ಯುವಕ. ಹೊಳಲು ಗ್ರಾಮದ ಮಾದ ಅಲಿಯಾಸ್ ಮಾದಪ್ಪ ಆಂಡ್ ಗ್ಯಾಂಗ್​ನಿಂದ ಈ ಕೃತ್ಯ ಎಸಗಲಾಗಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಹಲ್ಲೆ ಮಾಡಿದ ಮಾದಪ್ಪ, ಚಿಂಟು, ತರುಣ್, ಸುಶಾಂತ್, ಚಂದನ್ ಅವರ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

ಬೈಕ್​ನಲ್ಲಿ ಬಂದ ಐವರಿಂದ ಹಲ್ಲೆ

ಇನ್ನು ಬರ್ತಡೇ‌ ಹಿನ್ನಲೆ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟೂರಿಗೆ ಬಂದಿದ್ದ ಶಾರಂತ್. ಗ್ರಾಮದ ಸರ್ಕಲ್ ಒಂದರಲ್ಲಿ ಸ್ನೇಹಿತರ ಜೊತೆ ಮಾತನಾಡುತ್ತಿದ್ದ. ಈ ವೇಳೆ ಎರಡು ಬೈಕ್​ನಲ್ಲಿ ಬಂದ ಐವರು ಕ್ಯಾತೆ ತೆಗೆದಿದ್ದಾರೆ. ಏಕಾಏಕಿ ಶಾರಂತ್ ಮೇಲೆ ಮಾದ ಅಂಡ್ ಗ್ಯಾಂಗ್ ಲಾಂಗು, ಡ್ರ್ಯಾಗರ್​ನಿಂದ ಹಲ್ಲೆ ನಡೆಸಿದ್ದಾರೆ. ಲಾಂಗ್ ಬೀಸಿದ್ದರಿಂದ ಯುವಕನಿಗೆ ಕಣ್ಣಿನ ಉಬ್ಬು, ಬಾಯಿಗೆ ಗಂಭೀರ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಹಾಡಹಗಲೇ ಕಾಲೇಜು ವಿದ್ಯಾರ್ಥಿ ಮೇಲೆ ಲಾಂಗ್​ನಿಂದ ಹಲ್ಲೆ! ಘಟನೆಗೆ ಕಾರಣವಾಯ್ತಾ ಹುಡುಗಿ ವಿಚಾರ?

ಗಾಯಾಳು ಶಾರಂತ್​ಗೆ 16 ಸ್ಟಿಚ್

ಇನ್ನು ಲಾಂಗ್​ ದಾಳಿ ತೀವ್ರ ಗಾಯಗೊಂಡ ಗಾಯಾಳು ಶಾರಂತ್​ಗೆ ಮಂಡ್ಯದ ಮಿಮ್ಸ್ ವೈದ್ಯರು 16 ಸ್ಟಿಚ್ ಹಾಕಿದ್ದಾರೆ. ಇನ್ನು ಅಷ್ಟೇ ಅಲ್ಲ, ಈ‌ ಹಿಂದೆ ಮಾದಪ್ಪನಿಗೆ ಬಾಸ್ ಎನ್ನುವಂತೆ ಮಾದನ ಸ್ನೇಹಿತರು ಅವಾಜ್ ಹಾಕಿದ್ದರಂತೆ. ಆ ವೇಳೆ ಅವನ್ಯಾವನೋ ಬಾಸ್ ಎಂದು ಶಾರಂತ್ ಟಾಂಗ್ ಕೊಟ್ಟಿದ್ದ. ಅಂದು ಗಲಾಟೆ ನಡೆದು ತಣ್ಣಗಾಗಿತ್ತು. ಅದೇ ದ್ವೇಷ ಇಟ್ಟುಕೊಂಡು ಬರ್ತ್ ಡೇ ದಿನವೇ ಶಾರಂತ್ ಮೇಲೆ ಕ್ಯಾತೆ ತೆಗೆದು ಮಾದಪ್ಪ ಅಂಡ್ ಟೀಂ‌ ಲಾಂಗ್​ನಿಂದ ಗಂಭೀರ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಕಿರಾತಕರು ಎಸ್ಕೇಪ್ ಆಗಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us