AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಆಡಿಯೋ: ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು ನನ್ನದೇ ಎಂದ ಶಿವರಾಮೇಗೌಡ -ಶಿಸ್ತುಕ್ರಮಕ್ಕೆ ಜೆಡಿಎಸ್ ತೀರ್ಮಾನ?

ನಾನು ಈ ವಿಚಾರವನ್ನ ಇಲ್ಲಿಗೆ ನಿಲ್ಲಿಸುತ್ತೇನೆ. ನಾನು ಮಾದೇಗೌಡರ ಬಗ್ಗೆ ಈಗಲೂ ಗೌರವ ಇಟ್ಟುಕೊಂಡಿದ್ದೇನೆ. ಆದ್ರೆ ಹಳೆಯ ಸಂಧರ್ಭವನ್ನ ಹೇಳಿದೆ ಅಷ್ಟೆ ಎಂದು ವೀಡಿಯೋ ಬಿಡುಗಡೆ ಮಾಡಿ ಮಧು ಮಾದೇಗೌಡರ ಹೇಳಿಕೆಗೆ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ.

ವೈರಲ್ ಆಡಿಯೋ: ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು ನನ್ನದೇ ಎಂದ ಶಿವರಾಮೇಗೌಡ -ಶಿಸ್ತುಕ್ರಮಕ್ಕೆ ಜೆಡಿಎಸ್ ತೀರ್ಮಾನ?
ಮಂಡ್ಯ ಮಅಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹಾಗೂ ದಿವಂಗತ ಸಂಸದ ಜಿ ಮಾದೇಗೌಡ
TV9 Web
| Updated By: ಸಾಧು ಶ್ರೀನಾಥ್​|

Updated on:Jan 31, 2022 | 11:56 AM

Share

ಬೆಂಗಳೂರು/ಮಂಡ್ಯ: ಜೆಡಿಎಸ್ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡರ (lr shivarame gowda) ಆಡಿಯೋ ವೈರಲ್ (Viral audio) ವಿಚಾರದಲ್ಲಿ ಶಿವರಾಮೇಗೌಡ ಮೇಲೆ ಶಿಸ್ತು ಕ್ರಮಕ್ಕೆ ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆಡಿಯೋದಲ್ಲಿ ದಿವಂಗತ ಸಂಸದ, ಹಿರಿಯ ನಾಯಕ ಜಿ ಮಾದೇಗೌಡರಿಗೆ (g madegowda) ಎಕ್ಕಡದಲ್ಲಿ ಹೊಡೆದಿದ್ದೆ ಎಂದು ಶಿವರಾಮೇಗೌಡ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಶಿವರಾಮೇಗೌಡರ ವರ್ತನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದು, ಅವರ ಮೇಲೆ ಶಿಸ್ತು ಕ್ರಮ ಜರುಗಿಸಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ. ತಕ್ಷಣ ಅವರ ಮೇಲೆ ಕ್ರಮ ತೆಗೆಕೊಳ್ಳವಂತೆ ಮಂಡ್ಯ ಜೆಡಿಎಸ್ ನಾಯಕರು ಒತ್ತಡ ಹಾಕಿದ್ದಾರೆ.

ಹಳೆಯ ಸಂಧರ್ಭವನ್ನ ಹೇಳಿದ್ದೆ ಅಷ್ಟೆ ಎಂದು ವೀಡಿಯೋ ಬಿಡುಗಡೆ ಮಾಡಿದ ಎಲ್ ಆರ್ ಶಿವರಾಮೇಗೌಡ: ಈ ಮಧ್ಯೆ, ವೈರಲ್ ಆದ ಆಡಿಯೋ ನನ್ನದೇ ಎಂದು ಜೆಡಿಎಸ್ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದ್ದಾರೆ. ಆಡಿಯೋದಲ್ಲಿ ದಿ. ಮಾದೇಗೌಡರ ಬಗ್ಗೆ ಶಿವರಾಮೇಗೌಡ ಹೇಳಿಕೆ ವಿರುದ್ಧ ಮಾದೇಗೌಡ ಪುತ್ರ ವಾಗ್ದಾಳಿ ಹಿನ್ನೆಲೆ ಮಾತನಾಡಿರುವ ಎಲ್ ಆರ್ ಶಿವರಾಮೇಗೌಡ, ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿಲ್ಲ. ನಾನು ಮಾದೇಗೌಡರಿಗೆ ಹೆದರಿಕೊಂಡು ನಮ್ಮೂರಲ್ಲಿ ಕೂತಿಲ್ಲ.

ನಾನು 420 ಕೆಲಸ ಮಾಡಿದ್ರೆ ದಾಖಲೆ ಸಮೇತ ಬನ್ನಿ. ನನ್ನ ವಿರುದ್ಧ ಆರೋಪ ಸುಳ್ಳಾದ್ರೆ ನಿಮ್ಮನ್ನ 840 ಅಂತಾರೆ. ಮಧು ಮಾದೇಗೌಡರೇ ನಿಮ್ಮನ್ನ ಟೋಕನ್‌ ಗಿರಾಕಿ ಅಂತಾರೆ. ಅಪ್ಪನ ಹೆಸರಲ್ಲಿ ಟೋಕನ್ ಹಾಕ್ತಾರೆ ಎಂದು ಜನರು ಹೇಳ್ತಾರೆ. ನಾಲಿಗೆ ಹರಿಬಿಡಬೇಡಿ, ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ. ರಾಜಕಾರಣದಲ್ಲಿ ಇದೆಲ್ಲ ಬರುತ್ತೆ, ಇದನ್ನ ಇಲ್ಲಿಗೆ ನಿಲ್ಲಿಸೋಣ. ಇದನ್ನೆಲ್ಲಾ ಬೆಳೆಸಬೇಕು ಅಂದ್ರೆ ನಾನು ಎಲ್ಲದಕ್ಕೂ ರೆಡಿ. ಸತ್ತವರ ಬಗ್ಗೆ ಇಷ್ಟೊಂದು ಮಾತನಾಡುವುದು ಸರಿಯಲ್ಲ. ನಾನು ಈ ವಿಚಾರ ಇಲ್ಲಿಗೇ ನಿಲ್ಲಿಸುತ್ತೇನೆ ಎಂದು ಶಿವರಾಮೇಗೌಡ ಹೇಳಿದ್ದಾರೆ.

ನಾನು ಈ ವಿಚಾರವನ್ನ ಇಲ್ಲಿಗೆ ನಿಲ್ಲಿಸುತ್ತೇನೆ. ನಾನು ಮಾದೇಗೌಡರ ಬಗ್ಗೆ ಈಗಲೂ ಗೌರವ ಇಟ್ಟುಕೊಂಡಿದ್ದೇನೆ. ಆದ್ರೆ ಹಳೆಯ ಸಂಧರ್ಭವನ್ನ ಹೇಳಿದೆ ಅಷ್ಟೆ ಎಂದು ವೀಡಿಯೋ ಬಿಡುಗಡೆ ಮಾಡಿ ಮಧು ಮಾದೇಗೌಡರ ಹೇಳಿಕೆಗೆ ಎಲ್.ಆರ್. ಶಿವರಾಮೇಗೌಡ ತಿರುಗೇಟು‌ ಕೊಟ್ಟಿದ್ದಾರೆ.

’ನಿಮ್ಮಪ್ಪ ಅವಕಾಶ ಕೊಟ್ಟಿದ್ರೆ ಇಷ್ಟೊತ್ತಿಗೆ ಎರಡು ಬಾರಿ ಮಂತ್ರಿ ಆಗುತ್ತಿದ್ದೆ. ನನ್ನ ತೆಗೆದವನು ನಿಮ್ಮಪ್ಪ’: ನಾನು ಮಾದೇಗೌಡರ ವಿರುದ್ಧ ಅವಹೇಳನವಾಗಿ ಏನು ಹೇಳಿಲ್ಲ. ಈ ಹಿಂದೆ ನನಗೆ ಮಾದೇಗೌಡರ ನಡುವೆ ಹೋರಾಟ ಘಟನಾವಳಿಯನ್ನು ಹೇಳಿದ್ದೇನೆ. ನಾನು ಮಾದೇಗೌಡರಿಗೆ ಹೆದರಿಕೊಂಡು ನಮ್ಮೂರಲ್ಲಿ ಕೂತಿಲ್ಲ. ಮಾದೇಗೌಡರ ವಿರುದ್ಧ ಗೆದ್ದು ಹೋರಾಟ ಮಾಡಿದ್ದೇನೆ. ನನ್ನ ಜೀವನದಲ್ಲಿ 9 ಚುನಾವಣೆಗಳನ್ನು ಎದುರಿಸಿದ್ದೇನೆ. ಮಧುಮಾದೇಗೌಡ ರೀತಿ ದೊಡ್ಡ ವ್ಯಕ್ತಿತ್ವ ಇದ್ದವರ ಮಗ ನಾನಲ್ಲ. ಮಧುಮಾದೇಗೌಡ ಹೀಗಿದ್ರು ಮದ್ದೂರು ತಾಲೂಕಿನಲ್ಲಿ ಮೇಲಕ್ಕೆ ಎದ್ದಿಲ್ಲ. ನಾನು ಅರ್ಧ ಚುನಾವಣೆಯಲ್ಲಿ ಗೆದ್ದಿದ್ದೇನೆ ಅರ್ಧದಲ್ಲಿ ಸೋತಿದ್ದೇನೆ. ನಿಮ್ಮ ಸಾಧನೆ ಏನು? ಎಂಎಲ್‌ಸಿ ಚುನಾವಣೆ ಒಂದರಲ್ಲಿ ನಾಮಿನೇಷನ್ ಆಗಿರೋದು ಬಿಟ್ಟರೇ ಎಲ್ಲೂ‌ ಹೊರಗಡೆ ಬಂದಿಲ್ಲ.

ನನ್ನ ಹೆಸರು ಶಿವರಾಮೇಗೌಡ ಅಷ್ಟೇ. ನೀವು ನಿಮ್ಮ ಅಪ್ಪನ ಹೆಸರು ಇಟ್ಟುಕೊಂಡಿದ್ದೀರಾ. ಹೀಗಿರುವಾಗ ನೀವು 4 ಬಾರಿ ಎಂಎಲ್‌ಎ ಆಗಬೇಕಿತ್ತು. ನಾಲಿಗೆ ಹರಿಬಿಡಬೇಡಿ. ಈ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ. ರಾಜಕಾರಣದಲ್ಲಿ ಇದೆಲ್ಲ ಬರುತ್ತದೇ ಇಲ್ಲಿಗೆ ನಿಲ್ಲಿಸೋಣಾ ಇದನ್ನು. ಬೆಳಸಬೇಕು ಅಂದ್ರೆ ನಾನು ಅಡ್ಡಿ ಇಲ್ಲ, ಎಲ್ಲಾದಕ್ಕೂ ರೆಡಿ ಇದ್ದೇನೆ. 1999 ರಲ್ಲಿ ಕಾಂಗ್ರೆಸ್‌ನಲ್ಲಿ ನಿಲ್ಲೋಕೆ ನಿಮ್ಮಪ್ಪ ಅವಕಾಶ ಕೊಟ್ಟಿದ್ರೆ ಇಷ್ಟೊತ್ತಿಗೆ ಎರಡು ಬಾರಿ ಮಂತ್ರಿ ಆಗುತ್ತಿದ್ದೆ. ನನ್ನ ತೆಗೆದವನು ನಿಮ್ಮಪ್ಪ, ಇತಿಹಾಸ ಬೇಡಾ. ಸತ್ತವರ ಬಗ್ಗೆ ಇಷ್ಟೊಂದು ಮಾತನಾಡದುವುದು ಸರಿಯಲ್ಲ ಎಂದು ಮಧುಮಾದೇಗೌಡರ ಹೇಳಿಕೆಗೆ ಎಲ್.ಆರ್.ಶಿವರಾಮೇಗೌಡ ತಿರುಗೇಟು‌ ಕೊಟ್ಟಿದ್ದಾರೆ.

ಇದನ್ನೂ ಓದಿ: ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

Published On - 11:43 am, Mon, 31 January 22

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್