AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ: ಪಟ್ಟಣದಾದ್ಯಂತ ಪೊಲೀಸ್​ ಸರ್ಪಗಾವಲು

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕಳೆದ ವರ್ಷದ ಕಲ್ಲು ತೂರಾಟ ಘಟನೆ ನಡೆದಿದ್ದ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಗಣೇಶೋತ್ಸವದ ನೆಪದಲ್ಲಿ ಮಂಡ್ಯ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಂದಾಗಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ಸಜ್ಜಾಗಿರುವುದರಿಂದ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ: ಪಟ್ಟಣದಾದ್ಯಂತ ಪೊಲೀಸ್​ ಸರ್ಪಗಾವಲು
ದೋಸ್ತಿಗಳ ನೇತೃತ್ವದಲ್ಲಿಂದು ಮದ್ದೂರಲ್ಲಿ ಗಣೇಶ ವಿಸರ್ಜನೆ: ಬಿಗಿ ಭದ್ರತೆ Image Credit source: Tv9 Kannada
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 16, 2026 | 11:28 AM

Share

ಮಂಡ್ಯ, ಸೆಪ್ಟೆಂಬರ್​​ 16: ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಪಟ್ಟಣ ಕೇಸರಿಮಯವಾಗಿ ಮಾರ್ಪಟ್ಟಿದೆ. ಮದ್ದೂರಿನ ಪ್ರಮುಖ ರಸ್ತೆ, ಸರ್ಕಲ್​ಗಳಲ್ಲಿ ಕೇಸರಿ ಬಂಟಿಂಗ್ಸ್, ರಸ್ತೆಯುದ್ದಕ್ಕೂ ಬ್ಯಾನರ್, ಬಾವುಟ ಅಳವಡಿಕೆ ಮಾಡಲಾಗಿದೆ.ಮಳವಳ್ಳಿ ರಸ್ತೆಯ ಈಶ್ವರನ ದೇಗುಲದಿಂದ ಆರಂಭವಾಗುವ ಮೆರವಣಿಗೆ ಪೇಟೆಬೀದಿ ಮಾರ್ಗವಾಗಿ ಕೊಲ್ಲಿ ಸರ್ಕಲ್​ವರೆಗೂ ಸಾಗಲಿದೆ. ಪೇಟೆ ಬೀದಿಯ ಮಸೀದಿ ಪಕ್ಕದಲ್ಲೇ ಗಣೇಶ ಮೆರವಣಿಗೆ ಸಾಗಲಿದ್ದು, ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, MLC ಸಿ.ಟಿ.ರವಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಕಳೆದ ವರ್ಷದ ಕಲ್ಲೂ ತೂರಾಟ ಕೇಸ್​​ ಸವಾಲಾಗಿ ಸ್ವೀಕರಿಸಿರುವ ದೋಸ್ತಿಗಳು

ಕಳೆದ ವರ್ಷ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು, ಈ ಬಾರಿ ಅತ್ಯಂತ ಅದ್ದೂರಿಯಾಗಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮಾಡಲು ಬೃಹತ್ ಯೋಜನೆ ರೂಪಿಸಿದ್ದಾರೆ. ಗಣೇಶೋತ್ಸವದ ನೆಪದಲ್ಲಿ ಮಂಡ್ಯ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಂದಾಗಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ಸಜ್ಜಾಗಿರುವುದರಿಂದ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಡಿಜೆಗೆ ಪೊಲೀಸರಿಂದ ಅನುಮತಿ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ

ಮುಂಜಾಗ್ರತಾ ಕ್ರಮವಾಗಿ ಮದ್ದೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಮದ್ದೂರಿನಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗೆ ಓರ್ವ ಎಸ್​ಪಿ, ನಾಲ್ವರು DySP, 10 ಇನ್ಸ್​ಪೆಕ್ಟರ್​ಗಳು, 14 ಸಬ್​ ಇನ್ಸ್​ಪೆಕ್ಟರ್​, 35 ಎಎಸ್​ಐ, 2 ಕೆಎಸ್ಆರ್​ಪಿ ತುಕಡಿ, 1 CRPF ತುಕಡಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ‌ ಮಾಡಲಾಗಿದೆ. ಮೆರವಣಿಗೆ ತೆರಳುವ ಮಾರ್ಗಗಳಲ್ಲಿ 30 ಸಿಸಿಕ್ಯಾಮರಾಗಳ ಅಳವಡಿಕೆ‌ ಮಾಡಲಾಗಿದ್ದು, ಮಳವಳ್ಳಿ ರಸ್ತೆಯ ಈಶ್ವರ ದೇವಾಲಯದಿಂದ ಆರಂಭವಾಗುವ ಮೆರವಣಿಗೆ ಪೇಟೆಬೀದಿ ಮಾರ್ಗವಾಗಿ ತೆರಳಿ ಶಿಂಷಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಅನುಮತಿ ಪಡೆದ ಮಾರ್ಗದಲ್ಲಿ ಮೆರವಣಿಗೆ ತೆರಳಲು ನಿರ್ಬಂಧ ಇಲ್ಲ. ಆದರೆ ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಡಿಜೆಗೆ ಅನುಮತಿ ನಿರಾಕರಿಸಲಾಗಿದೆ. ಆದರೆ ಧ್ವನಿವರ್ಧಕ ಅನುಮತಿ ಪಡೆದು ಸ್ಪೀಕರ್ ಬಳಸಲು ಅವಕಾಶ ಇದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ
ರವಿ ಸಿಂಹ ರಾಶಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಸಿಂಹ ರಾಶಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ
ಚೆನ್ನೈನಲ್ಲಿ 12,000 ಶಂಖಗಳಿಂದ ಸಿದ್ಧವಾಯ್ತು ಗಣೇಶನ ಮೂರ್ತಿ!
ಚೆನ್ನೈನಲ್ಲಿ 12,000 ಶಂಖಗಳಿಂದ ಸಿದ್ಧವಾಯ್ತು ಗಣೇಶನ ಮೂರ್ತಿ!
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ