AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ; ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ.ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ; ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ
ಎಚ್.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Jul 22, 2021 | 2:46 PM

Share

ಮಂಡ್ಯ: ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸುಳಿವು ವಿಚಾರಕ್ಕೆ ಸಂಬಂಧಿಸಿ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ನನಗೆ ಸಂಬಂಧಿಸಿದ ವಿಷಯ ಅಲ್ಲ, ಬಿಜೆಪಿ ಆಂತರಿಕ ವಿಚಾರ. ಬಿಜೆಪಿ ನಿರ್ಧಾರದಲ್ಲಿ ಮೂಗು ತೂರಿಸುವುದು ಶೋಭೆ ತರಲ್ಲ. ಸಿಎಂ ಬದಲಾವಣೆ ವಿಚಾರ 2 ವರ್ಷಗಳಿಂದ ನಡೆಯುತ್ತಿದೆ. ಸದ್ಯ ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ.ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬಿಎಸ್‌ವೈಗೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಲ್ಲಿ ಒಂದೊಂದು ಭಾವನೆ ಇದೆ, ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅವರ ಭಾವನೆ ಸರಿಯೋ ತಪ್ಪೋ ನಿರ್ಧಾರ ಜನರದ್ದು. ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ 2ವರ್ಷಗಳಿಂದ ನಡೆಯುತ್ತಿದೆ ಎಂದರು.

ನಾಳಿದ್ದು ರಾಜಿನಾಮೆ ನೀಡ್ತಾರಂತೆ ಆದ್ರೆ ಸಿಎಂ ಯಡಿಯೂರಪ್ಪ ತರಾತುರಿಯಲ್ಲಿ ಸಾವಿರಾರು ಕೋಟಿ ಯೋಜನೆಗೆ ಅನುಮತಿ ನೀಡ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ನಾಳಿದ್ದು ರಾಜಿನಾಮೆ ನೀಡ್ತಾರೆ ಎನ್ನುತ್ತಿದ್ದಾರೆ, ಅದೇನೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನಿರಾವರಿ ಇಲಾಖೆಯ 4 ನಿಗಮಗಳಲ್ಲಿ 12 ಸಾವಿರ ಕೋಟಿ ಯೋಜನೆಗೆ ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಅನುಮತಿ ನೀಡ್ತಿದ್ದಾರೆ. 12ಸಾವಿರ ಕೋಟಿ ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ. ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ. ಇಲ್ಲಿನ ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ? ಈ ಭಾಗಕ್ಕೆ 1ಸಾವಿರ ಕೋಟಿ ಆ ಭಾಗಕ್ಕೆ 11ಸಾವಿರ ಕೋಟಿ ಯೋಜನೆ.

ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ? ದುಡ್ಡು ಹೊಡೆಯುವ ಯೋಜನೆ ನಿಮ್ಮದು. 2 ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ? ಅವರಿಗೆ ಅಂತಹ ದರದ್ ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ? ಎಂದು ಸಿಎಂ ಬಿಎಸ್‌ವೈ‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: 5G Smartphones: 5G ಸ್ಮಾರ್ಟ್​ಫೋನ್ ಬೇಕೆಂಬವರು ಒಮ್ಮೆ ಇಲ್ಲಿನೋಡಿ: ಕಡಿಮೆ ಬೆಲೆಗೆ ಲಭ್ಯವಿರುವ ಬೆಸ್ಟ್​ 5G ಫೋನ್ ಇವು

Published On - 1:40 pm, Thu, 22 July 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ