AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು, 1.10 ಕೋಟಿ ರೂ ದೋಚಿ ಪರಾರಿಯಾದ ವ್ಯಕ್ತಿ

ಸೂರ್ಯ ಎಂಬ ಅಪರಿಚಿತ ವ್ಯಕ್ತಿ ಶ್ಯಾಲೋಮ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಮೇರಿ ಎಂಬುವವರಿಗೆ ಟ್ರಸ್ಟ್ ಗೆ 25 ಕೋಟಿ ರೂ. ದೇಣಿಗೆ ಕೊಡುತ್ತೇನೆ. ಬದಲಿಗೆ ತೆರಿಗೆ ಕಟ್ಟಲು ನಗದು ರೂಪದಲ್ಲಿ 1.10 ಕೋಟಿ ನಗದು ಕೊಡುವಂತೆ ಆಮಿಷವೊಡ್ಡಿ ಹಣ ದೋಚಿ ಪರಾರಿಯಾಗಿದ್ದಾನೆ.

25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು, 1.10 ಕೋಟಿ ರೂ ದೋಚಿ ಪರಾರಿಯಾದ ವ್ಯಕ್ತಿ
ಬೆಳಕವಾಡಿ ಪೊಲೀಸ್ ಠಾಣೆ
ಪ್ರಶಾಂತ್​ ಬಿ.
| Edited By: |

Updated on: Jan 23, 2024 | 11:33 AM

Share

ಮಂಡ್ಯ, ಜ.23: 25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು, 1.10 ಕೋಟಿ ರೂ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾಪುರ ಗ್ರಾಮದಲ್ಲಿ ನಡೆದಿದೆ. ಸೂರ್ಯ ಎಂಬ ಅಪರಿಚಿತ ವ್ಯಕ್ತಿ ಆಮಿಷವೊಡ್ಡಿ ಶಿಂಷಾಪುರದ ಮೇರಿ ಎಂಬುವವರಿಗೆ ವಂಚನೆ (Cheating) ಮಾಡಿದ್ದಾನೆ. ಈ ಘಟನೆ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ (Belakavadi Police Station) ಪ್ರಕರಣ ದಾಖಲಾಗಿದೆ.

ಶ್ಯಾಲೋಮ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಮೇರಿ ಎಂಬುವವರಿಗೆ ಕರೆ ಮಾಡಿ ಶಿಕ್ಷಣ ಸಂಸ್ಥೆಗೆ ದೇಣಿಗೆ ಕೊಡುವ ಆಮಿಷವೊಡ್ಡಿ ಸೂರ್ಯ ಎಂಬಾತ ಪರಿಚಯವಾಗಿದ್ದ. ಟ್ರಸ್ಟ್ ಗೆ 25 ಕೋಟಿ ರೂ. ದೇಣಿಗೆ ಕೊಡುತ್ತೇನೆ. ಬದಲಿಗೆ ತೆರಿಗೆ ಕಟ್ಟಲು ನಗದು ರೂಪದಲ್ಲಿ 1.10 ಕೋಟಿ ನಗದು ಕೊಡುವಂತೆ ಸೂರ್ಯ ಡಿಮ್ಯಾಂಡ್ ಮಾಡಿದ್ದ. ಸೂರ್ಯನ ಮಾತು ನಂಬಿ ಮೇರಿ ಅವರು ಕಷ್ಟಪಟ್ಟು 1.10 ಕೋಟಿ ನಗದು ಹಣ ಹೊಂದಿಸಿದ್ದರು. ಬಳಿಕ ಕಾರೊಂದರಲ್ಲಿ ನಕಲಿ ನೋಟು ತುಂಬಿಕೊಂಡು ಮೇರಿ ಮನೆಗೆ ಬಂದಿದ್ದ ವಂಚಕ ಸೂರ್ಯ ಔಪಚಾರಿಕ ಮಾತುಗಳನ್ನಾಡುತ್ತಾ ಮನೆಯವರಿಗೆಲ್ಲ ತಾನೇ ತಂದಿದ್ದ ಜ್ಯೂಸ್ ಕುಡಿಸಿದ್ದಾನೆ. ನಂತರ ಕುಟುಂಬದವರೆಲ್ಲ ಪ್ರಜ್ಞೆ ತಪ್ಪುತ್ತಿದ್ದಂತೆ ಮೇರಿಯವರು ಕಷ್ಟಪಟ್ಟ ಅರೆಂಜ್ ಮಾಡಿದ್ದ ಹಣದೊಂದಿಗೆ ಪರಾರಿಯಾಗಿದ್ದಾನೆ.

ಪ್ರಜ್ಞೆ ಬಂದ ನಂತರ ಸೂರ್ಯನ ವಂಚನೆ ಬೆಳಕಿಗೆ ಬಂದಿದೆ. ತಕ್ಷಣ ಮೇರಿಯವರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಂಚಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಳವಳ್ಳಿ ಡಿವೈಎಸ್ಪಿ ಪಿ.ಕೃಷ್ಣಪ್ಪ ನೇತೃತ್ವದಲ್ಲಿ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ದಿಢೀರ್ ಸ್ಥಗಿತ, ಸದ್ದಿಲ್ಲದೆ ಸಾಕಾನೆಗಳ ವಾಪಸ್ ಕಳುಹಿಸಿರುವ ಅರಣ್ಯಾಧಿಕಾರಿಗಳು

ಮನೆಗೆ ಕನ್ನ ಹಾಕಿದ ಕಳ್ಳರು; ಚಿನ್ನಾಭರಣ ನಾಪತ್ತೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್​ನಲ್ಲಿ ಘಟನೆ ನಡೆದಿದ್ದು, ಕಾವೇರಿನಗರದ ಮಂಜುನಾಥ್ ಎಂಬುವವರ ಮನೆಗೆ ಕನ್ನ ಹಾಕಿದ್ದು, ಬೀರುವಿನಲ್ಲಿದ್ದ 50 ಗ್ರಾಂ ಚಿನ್ನಾಭರಣ, 1 ಕೆ.ಜಿ.ಗೂ ಹೆಚ್ಚು ಬೆಳ್ಳಿ ಆಭರಣ ಕದ್ದೊಯ್ದಿದ್ದಾರೆ. ಕೆಲಸಕ್ಕೆ ತೆರಳಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!