AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ…ಬೈಕ್ ಮೇಲೆ ಬಿದ್ದ ಮರ, ಮಗನ ಬರ್ತ್​ಡೇಗೆ ಕೇಕ್ ತರಲು ಹೋದ ತಂದೆ ದುರಂತ ಸಾವು

ಮಗನ ಬರ್ತ್​ಡೇಗೆ ಕೇಕ್ ತರಲು ಹೋದ ತಂದೆ ದುರಂತ ಅಂತ್ಯಕಂಡಿದ್ದಾರೆ. ಪತ್ನಿ ಹಾಗೂ ಪುತ್ರನ ಕಣ್ಣೆದುರೇ ಅಸುನೀಗಿದ್ದಾರೆ.

ಅಯ್ಯೋ ವಿಧಿಯೇ...ಬೈಕ್ ಮೇಲೆ ಬಿದ್ದ ಮರ, ಮಗನ ಬರ್ತ್​ಡೇಗೆ ಕೇಕ್ ತರಲು ಹೋದ ತಂದೆ ದುರಂತ ಸಾವು
TV9 Web
| Edited By: |

Updated on:Feb 10, 2023 | 9:24 PM

Share

ಮಂಡ್ಯ: ಈ ಸಾವು ಅನ್ನುವುದು ಯಾರ ಜೀವನದಲ್ಲಿ ಯಾವಾಗ ಹೇಗೆ ಬರುತ್ತದೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಅಲ್ಲದೇ  ಸಾವು ಹೇಗೆ ಎಲ್ಲಿ ಬರುತ್ತೆ ಅಂತೆಲ್ಲಾ ಊಹೆ ಮಾಡೋಕು ಆಗಲ್ಲ. ನಿಜ…ವ್ಯಕ್ತಿಯೋರ್ವ ತನ್ನ ಮಗನ ಬರ್ತ್​ ಡೇ ಕೇಕ್​ ತರಲು ಹೋಗುತ್ತಿದ್ದಾಗ ರಸ್ತೆ ಪಕ್ಕದ ಮರ (Tree) ತಲೆ ಮೇಲೆ ಬಿದ್ದು ದುರಂತ ಅಂತ್ಯಕಂಡಿದ್ದಾರೆ. ಹೌದು..ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಮಾಡಲು ಕೇಕ್​ ತರಲು ಹೋದ ವ್ಯಕ್ತಿ ತಲೆ ಮೇಲೆ ಮರ ಬಿದ್ದು ದುರಂತ ಸಾವನ್ನಪ್ಪಿದ್ದಾರೆ. ಈ ಘಟನೆ ಇಂದು(ಫೆಬ್ರವರಿ 10) ಮಂಡ್ಯ(Mandya) ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಉದಯ್ ಕುಮಾರ್ ಮೃತ ದುರ್ವೈವಿ.

ಇದನ್ನೂ ಓದಿ: ಲಾರಿ ಡಿಕ್ಕಿ, ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವು: ಮದುವೆ ಮನೆಯಲ್ಲಿ ನೀರವಮೌನ

ಇಂದು ಪುತ್ರ ದಿಕ್ಷಿತ್ ನ 7ನೇ ವರ್ಷದ ಹುಟ್ಟು ಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ಉದಯ್ ಕುಮಾರ್, ಬೈಕ್​ನಲ್ಲಿ ಪತ್ನಿ ಧನಲಕ್ಷ್ಮೀ ಜೊತೆ ಕೇಕ್​ ತರಲು ಹೋಗಿದ್ದಾರೆ. ಆದ್ರೆ, ಮಾರ್ಗ ಮಧ್ಯ ಚಲುವಯ್ಯ ಪಾರ್ಕ್ ಬಳಿ ಬರುತ್ತಿದ್ದಂತೆ ಮರ ಉದಯ್ ಕುಮಾರ್ ಬೈಕ್​ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಘಟನೆಯಲ್ಲಿ ಪೌರ ಕಾರ್ಮಿಕನಾಗಿದ್ದ ಉದಯ್​ ಕುಮಾರ್ ಮೃತಪಟ್ಟಿದ್ದಾರೆ. ಇನ್ನು ಪತ್ನಿ ಧನಲಕ್ಷ್ಮೀ ಹಾಗೂ ಪುತ್ರ ದಿಕ್ಷಿತ್​ಗೆ ಗಾಯಗಳಾಗಿವೆ.

ಮರ ನೇರವಾಗಿ ತಲೆ ಮೇಲೆ ಬಿದ್ದಿದ್ದರಿಂದ ಉದಯ್ ಕುಮಾರ್ ಸ್ಥಳದಲ್ಲೇ ಅಸುನೀಗಿದ್ದಾರೆ. ಬೈಕ್ ಸವಾರನ ಮೇಲೆ ಮರ ಉರಳಿ ಬೀಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರ ಆರೋಪಿಸಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ದಲಿತ ಸಂಘಟನೆಗಳು ಆಗ್ರಹಿಸಿವೆ.

Published On - 9:18 pm, Fri, 10 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?