AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ…ಬೈಕ್ ಮೇಲೆ ಬಿದ್ದ ಮರ, ಮಗನ ಬರ್ತ್​ಡೇಗೆ ಕೇಕ್ ತರಲು ಹೋದ ತಂದೆ ದುರಂತ ಸಾವು

ಮಗನ ಬರ್ತ್​ಡೇಗೆ ಕೇಕ್ ತರಲು ಹೋದ ತಂದೆ ದುರಂತ ಅಂತ್ಯಕಂಡಿದ್ದಾರೆ. ಪತ್ನಿ ಹಾಗೂ ಪುತ್ರನ ಕಣ್ಣೆದುರೇ ಅಸುನೀಗಿದ್ದಾರೆ.

ಅಯ್ಯೋ ವಿಧಿಯೇ...ಬೈಕ್ ಮೇಲೆ ಬಿದ್ದ ಮರ, ಮಗನ ಬರ್ತ್​ಡೇಗೆ ಕೇಕ್ ತರಲು ಹೋದ ತಂದೆ ದುರಂತ ಸಾವು
TV9 Web
| Edited By: |

Updated on:Feb 10, 2023 | 9:24 PM

Share

ಮಂಡ್ಯ: ಈ ಸಾವು ಅನ್ನುವುದು ಯಾರ ಜೀವನದಲ್ಲಿ ಯಾವಾಗ ಹೇಗೆ ಬರುತ್ತದೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಅಲ್ಲದೇ  ಸಾವು ಹೇಗೆ ಎಲ್ಲಿ ಬರುತ್ತೆ ಅಂತೆಲ್ಲಾ ಊಹೆ ಮಾಡೋಕು ಆಗಲ್ಲ. ನಿಜ…ವ್ಯಕ್ತಿಯೋರ್ವ ತನ್ನ ಮಗನ ಬರ್ತ್​ ಡೇ ಕೇಕ್​ ತರಲು ಹೋಗುತ್ತಿದ್ದಾಗ ರಸ್ತೆ ಪಕ್ಕದ ಮರ (Tree) ತಲೆ ಮೇಲೆ ಬಿದ್ದು ದುರಂತ ಅಂತ್ಯಕಂಡಿದ್ದಾರೆ. ಹೌದು..ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಮಾಡಲು ಕೇಕ್​ ತರಲು ಹೋದ ವ್ಯಕ್ತಿ ತಲೆ ಮೇಲೆ ಮರ ಬಿದ್ದು ದುರಂತ ಸಾವನ್ನಪ್ಪಿದ್ದಾರೆ. ಈ ಘಟನೆ ಇಂದು(ಫೆಬ್ರವರಿ 10) ಮಂಡ್ಯ(Mandya) ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಉದಯ್ ಕುಮಾರ್ ಮೃತ ದುರ್ವೈವಿ.

ಇದನ್ನೂ ಓದಿ: ಲಾರಿ ಡಿಕ್ಕಿ, ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವು: ಮದುವೆ ಮನೆಯಲ್ಲಿ ನೀರವಮೌನ

ಇಂದು ಪುತ್ರ ದಿಕ್ಷಿತ್ ನ 7ನೇ ವರ್ಷದ ಹುಟ್ಟು ಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ಉದಯ್ ಕುಮಾರ್, ಬೈಕ್​ನಲ್ಲಿ ಪತ್ನಿ ಧನಲಕ್ಷ್ಮೀ ಜೊತೆ ಕೇಕ್​ ತರಲು ಹೋಗಿದ್ದಾರೆ. ಆದ್ರೆ, ಮಾರ್ಗ ಮಧ್ಯ ಚಲುವಯ್ಯ ಪಾರ್ಕ್ ಬಳಿ ಬರುತ್ತಿದ್ದಂತೆ ಮರ ಉದಯ್ ಕುಮಾರ್ ಬೈಕ್​ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಘಟನೆಯಲ್ಲಿ ಪೌರ ಕಾರ್ಮಿಕನಾಗಿದ್ದ ಉದಯ್​ ಕುಮಾರ್ ಮೃತಪಟ್ಟಿದ್ದಾರೆ. ಇನ್ನು ಪತ್ನಿ ಧನಲಕ್ಷ್ಮೀ ಹಾಗೂ ಪುತ್ರ ದಿಕ್ಷಿತ್​ಗೆ ಗಾಯಗಳಾಗಿವೆ.

ಮರ ನೇರವಾಗಿ ತಲೆ ಮೇಲೆ ಬಿದ್ದಿದ್ದರಿಂದ ಉದಯ್ ಕುಮಾರ್ ಸ್ಥಳದಲ್ಲೇ ಅಸುನೀಗಿದ್ದಾರೆ. ಬೈಕ್ ಸವಾರನ ಮೇಲೆ ಮರ ಉರಳಿ ಬೀಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರ ಆರೋಪಿಸಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ದಲಿತ ಸಂಘಟನೆಗಳು ಆಗ್ರಹಿಸಿವೆ.

Published On - 9:18 pm, Fri, 10 February 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್