AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು

ಮಂಡ್ಯದಲ್ಲಿ ದಿನೇ ದಿನೇ ಪುಡಿ ರೌಡಿಗಳ ಹಾವಳಿ ಹೆಚ್ಚಾಗ್ತಿದೆ. ಕರ್ತವ್ಯನಿರತ ಪೊಲೀಸರ‌ ಮೇಲೆಯೇ ಪುಂಡರು ಹಲ್ಲೆಗೆ ಮುಂದಾಗ್ತಿದ್ದಾರೆ. ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇವೆ.

ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು
ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು
TV9 Web
| Updated By: ಆಯೇಷಾ ಬಾನು|

Updated on:Feb 06, 2022 | 8:27 AM

Share

ಮಂಡ್ಯ: ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜತೆ ಕಿರಿಕ್ ಮಾಡಿಕೊಂಡು ಕರ್ತವ್ಯನಿರತ ಎಎಸ್‌ಐ ಮೇಲೆ ಹಲ್ಲೆಗೆ ವ್ಯಕ್ತಿ ಮುಂದಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಪಾಂಡವಪುರ ಠಾಣೆ ASI ಮಹೇಶ್ ಪ್ರಭು ಮೇಲೆ ಶಾಂತಿನಗರ ನಿವಾಸಿ ನಾಗೇಶ್‌ ಹಲ್ಲೆಗೆ ಯತ್ನಿಸಿದ್ದಾರೆ. ಮಾಸ್ಕ್ ಧರಿಸದ್ದಕ್ಕೆ ದಂಡ ಪಾವತಿಸಲು ಹೇಳಿದ ಹಿನ್ನೆಲೆಯಲ್ಲಿ ಎಎಸ್‌ಐ ಕಾಲರ್ ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ಪಾಂಡವಪುರ ಪಟ್ಟಣ ಠಾಣೆಯಲ್ಲಿ ನಾಗೇಶ್ ವಿರುದ್ಧ ಕೇಸ್ ದಾಖಲಾಗಿದೆ.

ಮಂಡ್ಯದಲ್ಲಿ ದಿನೇ ದಿನೇ ಪುಡಿ ರೌಡಿಗಳ ಹಾವಳಿ ಹೆಚ್ಚಾಗ್ತಿದೆ. ಕರ್ತವ್ಯನಿರತ ಪೊಲೀಸರ‌ ಮೇಲೆಯೇ ಪುಂಡರು ಹಲ್ಲೆಗೆ ಮುಂದಾಗ್ತಿದ್ದಾರೆ. ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇವೆ. ASI ಮಹೇಶ್ ಪ್ರಭು ಮೇಲೆ ಸಾರ್ವಜನಿಕ ಸ್ಥಳದಲ್ಲಿ ನಾಗೇಶ್‌ ಹಲ್ಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಧರಿಸದ ಜನರಿಂದ ದಂಡ ವಸೂಲಿ ಮಾಡ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಪೊಲೀಸರು ಪಟ್ಟಣದ ರಾಜಾ ಮೆಡಿಕಲ್‌ ಬಳಿ ಮಾಸ್ಕ್ ಕಾರ್ಯಚರಣೆ ನಡೆಸ್ತಿದ್ದರು. ಈ ವೇಳೆ ನಾಗೇಶ್ ಎಂಬಾತ ಮಾಸ್ಕ್ ಧರಿಸದೆ ಬಂದಿದ್ದರಿಂದ ದಂಡ ಕಟ್ಟುವಂತೆ ಪೊಲೀಸರು ಸೂಚಿಸಿದ್ದರು. ಆಗ ದಂಡ ವಿಧಿಸಲು ಮುಂದಾದ ASI ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾಲರ್ ಹಿಡಿದು ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾನೆ. ಸದ್ಯ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಂಡವಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕಾರಿ ಮೇಲೆಯೇ ಹಲ್ಲೆಗೆ ಮುಂದಾದ ರೈತ ಸಂಘದ ತಾಲೂಕು ಅಧ್ಯಕ್ಷ ಇನ್ನು ಮತ್ತೊಂದು ಕಡೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆಯೇ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ಅಫಜಲಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸುಲ್ಪಿ ಮೇಲೆ ಅಫಜಲಪುರ ರೈತ ಸಂಘದ ತಾಲೂಕು ಅಧ್ಯಕ್ಷ ಮಹಾಂತೇಶ್ ಜಮಾದಾರ್ ಹಲ್ಲೆಗೆ ಯತ್ನಿಸಿದ್ದಾರೆ. ಮಹಾಂತೇಶ್ ಜಮಾದಾರ್, ಪಿಡಿಓ ವಿರುದ್ಧ ಕೆಲ ತಿಂಗಳ ಹಿಂದೆ ದೂರು ನೀಡಿದ್ದರು. ಈ ವಿಚಾರವಾಗಿ ರಮೇಶ್ ಸುಲ್ಪಿ ಮತ್ತು ಮಹಾಂತೇಶ್ ಜಮಾದಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗ ಮಹಾಂತೇಂಶ, ತಾನು ಕುಳಿತಿದ್ದ ಕುರ್ಚಿ ಎತ್ತಿ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ದೂರು ನೀಡಲು ಅಧಿಕಾರಿ ರಮೇಶ್ ಸುಲ್ಪಿ ಮುಂದಾಗಿದ್ದು ರೈತ ಸಂಘದ ಅಧ್ಯಕ್ಷ ಮಹಾಂತೇಶ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

Published On - 8:24 am, Sun, 6 February 22

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ