AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು

ಮಂಡ್ಯದಲ್ಲಿ ದಿನೇ ದಿನೇ ಪುಡಿ ರೌಡಿಗಳ ಹಾವಳಿ ಹೆಚ್ಚಾಗ್ತಿದೆ. ಕರ್ತವ್ಯನಿರತ ಪೊಲೀಸರ‌ ಮೇಲೆಯೇ ಪುಂಡರು ಹಲ್ಲೆಗೆ ಮುಂದಾಗ್ತಿದ್ದಾರೆ. ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇವೆ.

ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು
ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು
TV9 Web
| Edited By: |

Updated on:Feb 06, 2022 | 8:27 AM

Share

ಮಂಡ್ಯ: ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜತೆ ಕಿರಿಕ್ ಮಾಡಿಕೊಂಡು ಕರ್ತವ್ಯನಿರತ ಎಎಸ್‌ಐ ಮೇಲೆ ಹಲ್ಲೆಗೆ ವ್ಯಕ್ತಿ ಮುಂದಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಪಾಂಡವಪುರ ಠಾಣೆ ASI ಮಹೇಶ್ ಪ್ರಭು ಮೇಲೆ ಶಾಂತಿನಗರ ನಿವಾಸಿ ನಾಗೇಶ್‌ ಹಲ್ಲೆಗೆ ಯತ್ನಿಸಿದ್ದಾರೆ. ಮಾಸ್ಕ್ ಧರಿಸದ್ದಕ್ಕೆ ದಂಡ ಪಾವತಿಸಲು ಹೇಳಿದ ಹಿನ್ನೆಲೆಯಲ್ಲಿ ಎಎಸ್‌ಐ ಕಾಲರ್ ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ಪಾಂಡವಪುರ ಪಟ್ಟಣ ಠಾಣೆಯಲ್ಲಿ ನಾಗೇಶ್ ವಿರುದ್ಧ ಕೇಸ್ ದಾಖಲಾಗಿದೆ.

ಮಂಡ್ಯದಲ್ಲಿ ದಿನೇ ದಿನೇ ಪುಡಿ ರೌಡಿಗಳ ಹಾವಳಿ ಹೆಚ್ಚಾಗ್ತಿದೆ. ಕರ್ತವ್ಯನಿರತ ಪೊಲೀಸರ‌ ಮೇಲೆಯೇ ಪುಂಡರು ಹಲ್ಲೆಗೆ ಮುಂದಾಗ್ತಿದ್ದಾರೆ. ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇವೆ. ASI ಮಹೇಶ್ ಪ್ರಭು ಮೇಲೆ ಸಾರ್ವಜನಿಕ ಸ್ಥಳದಲ್ಲಿ ನಾಗೇಶ್‌ ಹಲ್ಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಧರಿಸದ ಜನರಿಂದ ದಂಡ ವಸೂಲಿ ಮಾಡ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಪೊಲೀಸರು ಪಟ್ಟಣದ ರಾಜಾ ಮೆಡಿಕಲ್‌ ಬಳಿ ಮಾಸ್ಕ್ ಕಾರ್ಯಚರಣೆ ನಡೆಸ್ತಿದ್ದರು. ಈ ವೇಳೆ ನಾಗೇಶ್ ಎಂಬಾತ ಮಾಸ್ಕ್ ಧರಿಸದೆ ಬಂದಿದ್ದರಿಂದ ದಂಡ ಕಟ್ಟುವಂತೆ ಪೊಲೀಸರು ಸೂಚಿಸಿದ್ದರು. ಆಗ ದಂಡ ವಿಧಿಸಲು ಮುಂದಾದ ASI ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾಲರ್ ಹಿಡಿದು ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾನೆ. ಸದ್ಯ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಂಡವಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕಾರಿ ಮೇಲೆಯೇ ಹಲ್ಲೆಗೆ ಮುಂದಾದ ರೈತ ಸಂಘದ ತಾಲೂಕು ಅಧ್ಯಕ್ಷ ಇನ್ನು ಮತ್ತೊಂದು ಕಡೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆಯೇ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ಅಫಜಲಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸುಲ್ಪಿ ಮೇಲೆ ಅಫಜಲಪುರ ರೈತ ಸಂಘದ ತಾಲೂಕು ಅಧ್ಯಕ್ಷ ಮಹಾಂತೇಶ್ ಜಮಾದಾರ್ ಹಲ್ಲೆಗೆ ಯತ್ನಿಸಿದ್ದಾರೆ. ಮಹಾಂತೇಶ್ ಜಮಾದಾರ್, ಪಿಡಿಓ ವಿರುದ್ಧ ಕೆಲ ತಿಂಗಳ ಹಿಂದೆ ದೂರು ನೀಡಿದ್ದರು. ಈ ವಿಚಾರವಾಗಿ ರಮೇಶ್ ಸುಲ್ಪಿ ಮತ್ತು ಮಹಾಂತೇಶ್ ಜಮಾದಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗ ಮಹಾಂತೇಂಶ, ತಾನು ಕುಳಿತಿದ್ದ ಕುರ್ಚಿ ಎತ್ತಿ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ದೂರು ನೀಡಲು ಅಧಿಕಾರಿ ರಮೇಶ್ ಸುಲ್ಪಿ ಮುಂದಾಗಿದ್ದು ರೈತ ಸಂಘದ ಅಧ್ಯಕ್ಷ ಮಹಾಂತೇಶ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

Published On - 8:24 am, Sun, 6 February 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್