AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ ಮೂರು ಚಿರತೆಗಳು ಬೋನಿಗೆ ಬಿದ್ದಿವೆ. ಡಿ.12, ಡಿ.27ರಂದು ಎರಡು ಚಿರತೆಗಳು ಸೇರಿ ಇದೀಗ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.

ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೋನಿಗೆ ಬಿದ್ದ ಚಿರತೆಗಳು
TV9 Web
| Edited By: |

Updated on: Jan 06, 2023 | 12:31 PM

Share

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲಿನಲ್ಲಿ ಗ್ರಾಮಸ್ಥರ ಕೋರಿಕೆ ಮೇರೆಗೆ ಅರಣ್ಯಾಧಿಕಾರಿಗಳು ಶಿವರಾಮ್ ಎಂಬುವವರ ತೋಟದಲ್ಲಿ ಇರಿಸಿದ್ದ ಬೋನಿಗೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಮತ್ತೊಂದು ಚಿರತೆ ಬಿದ್ದಿದೆ. ಪದೇ ಪದೇ ತೋಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನ ಕಂಡು ಭಯ ಭೀತರಾಗಿದ್ದ ಗ್ರಾಮಸ್ಥರು ಇದೀಗ ನಿರಾಳರಾಗಿದ್ದಾರೆ.

ಕಳೆದ 30 ದಿನಗಳಲ್ಲಿ ಬೋನಿಗೆ ಬಿದ್ದ ಮೂರನೇ ಚಿರತೆ ಇದಾಗಿದ್ದು, ಡಿಸೆಂಬರ್ 12 ಹಾಗೂ ಡಿಸೆಂಬರ್ 27 ರಂದು ಎರಡು ಚಿರತೆಗಳನ್ನ ಸೆರೆ ಹಿಡಿಯಲಾಗಿತ್ತು. ಇದೀಗ ಮತ್ತೊಂದು ಚಿರತೆ ಬಲೆಗೆ ಬಿದ್ದಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ, ಚಿರತೆಯನ್ನ ಸುರಕ್ಷಿತ ಮೀಸಲು ಅರಣ್ಯ ಪ್ರದೇಶಕ್ಕೆ ಕೊಂಡ್ಯೊಯಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ:ಮೈಸೂರು: ಕೇಂದ್ರ ಆಹಾರ ಸಂಶೋಧ‌ನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಶಾಲೆಗೆ ರಜೆ ಘೋಷಣೆ

ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ

ರಾಮನಗರ: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರವಾಗಿ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಪತ್ರ ನೀಡಲಾಗಿದೆ.

ದೇವಸ್ಥಾನ ನಿರ್ಮಿಸಲು ಪ್ರಸ್ತಾಪಿಸಿರುವ 19 ಎಕರೆ ಜಾಗದ ಸಂಪೂರ್ಣ ‌ಭೂದಾಖಲೆಗಳ ‌ಮಾಹಿತಿಯೊಂದಿಗೆ ತಮ್ಮ ಸ್ಪಷ್ಟ ಅಭಿಪ್ರಾಯದ ಮೂಲಕ ಅಗತ್ಯ ಪ್ರಸ್ತಾವನೆಯನ್ನು ತ್ವರಿತವಾಗಿ ಕಳುಹಿಸಲು ರಾಮನಗರ ಡಿಸಿಗೆ ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!