AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ, ಆಕ್ರೋಶ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಸಾಹಿತ್ಯ ಪರಿಷತ್ತು ಮತ್ತು ಸಾಹಿತಿಗಳ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ, ಆಕ್ರೋಶ
ಸಚಿವ ಸಮ್ಮುಖದಲ್ಲಿ ಅಸಮಾಧಾನ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Nov 21, 2024 | 8:31 AM

Share

ಮಂಡ್ಯ, ನವೆಂಬರ್​ 20: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Akhil Bharath Sahity Sammelana) ದಿನ ಎಣಿಕೆ ಆರಂಭವಾಗಿದೆ. ಡಿಸೆಂಬರ್​ 20, 21 ಮತ್ತು 22 ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೆಳನ ನಡೆಯಲಿದೆ. ಶುಭ ಕಾರ್ಯಕ್ಕೆ ನೂರೆಂಟು ವಿಘ್ನ ಎಂಬಂತೆ ಅಖಿಲ ಭಾರತ ಕನ್ನಡ‌ ಸಾಹಿತ್ಯ ಸಮ್ಮೇಳನ ಮುನ್ನವೇ ಸಾಲು‌ ಸಾಲು ವಿವಾದ ಸೃಷ್ಟಿಯಾಗಿದೆ. ಹೌದು, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ನಡೆಗೆ ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವರ ಅಧ್ಯಕ್ಷತೆಯ ಸಭೆಯಲ್ಲೇ ಸಾಹಿತಿಗಳು ಗದ್ದಲ ಎಬ್ಬಿಸಿದ್ದಾರೆ. ಸಾಹಿತ್ಯ ಪರಿಷತ್ ಹಾಗೂ ಸಾಹಿತಿಗಳ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ.

ಮತ್ತೊಂದೆಡೆ ಸುದ್ದಿಗೋಷ್ಠಿಯಲ್ಲೂ‌ ಸಾಹಿತಿಗಳ ನಡುವೆ ‌ಹೈಡ್ರಾಮಾ ಸೃಷ್ಟಿಯಾಗಿದೆ. ಸುದ್ದಿಗೋಷ್ಠಿಯಲ್ಲಿ ಮೊದಲು ಮಾತನಾಡಲು ಕಸಾಪ ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ ಹಾಗೂ ಹಿರಿಯ ಸಾಹಿತಿ ಪ್ರೊ.ಮುದ್ದೇಗೌಡ ನಡುವೆ ಜಟಾಪಟಿ ಏರ್ಪಟ್ಟಿದೆ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಮಂಡ್ಯ: ಭರ್ಜರಿ ತಯಾರಿ

ಇನ್ನು, ತಮ್ಮನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಗ್ರಾಮ ಪಂಚಾಯತಿ ಸದಸ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿಧ ಸಮಿತಿಗಳಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಿಕೊಳ್ಳದಿದ್ದದಕ್ಕೆ ಬೇಸರ ಹೊರಹಾಕಿದ್ದಾರೆ. ಸಾಹಿತ್ಯ ಸಮ್ಮೇಳನ ನಡೆಯುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ. ಜಾಗದ ಕಸ ವಿಲೇವಾರಿ ಮಾಡುವುದು ಗ್ರಾಮ ಪಂಚಾಯಿತಿ ವತಿಯಿಂದ. ಹೀಗಿದ್ದರೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಸಮ್ಮೇಳನದಲ್ಲಿ ಮನ್ನಣೆ ನೀಡಿಲ್ಲ.

ಸಮ್ಮೇಳನದಲ್ಲಿ ಟಿಪ್ಪು ವಿಚಾರಗೋಷ್ಠಿ ಆಯೋಜನೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹಾಗೇ, ಕನ್ನಡ ಶಾಲೆಗೆ ಅನುದಾನ ಬಿಡುಗಡೆ ಮಾಡದಿದ್ದಕ್ಕೆ ಅನುದಾನರಹಿತ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:48 pm, Wed, 20 November 24

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ