AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಪರವಾನಗಿ ಕೊಡಿಸಲು ಲಂಚಕ್ಕೆ ಬೇಡಿಕೆ ಆರೋಪ

ಅಬಕಾರಿ ಇಲಾಖೆ ಭ್ರಷ್ಟಾಚಾರದ ಕೂಗು ತಣ್ಣಗಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ಲಂಚದ ಆರೋಪ ಕೇಳಿಬಂದಿದೆ. ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವ್ಯಕ್ತಿಯೊಬ್ಬರು ಸಾಕ್ಷ್ಯ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮಂಡ್ಯ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಪರವಾನಗಿ ಕೊಡಿಸಲು ಲಂಚಕ್ಕೆ ಬೇಡಿಕೆ ಆರೋಪ
ಸಾಂದರ್ಭಿಕ ಚಿತ್ರ
ಪ್ರಶಾಂತ್​ ಬಿ.
| Edited By: |

Updated on:Nov 28, 2024 | 11:52 AM

Share

ಮಂಡ್ಯ, ನವೆಂಬರ್ 28: ಮಂಡ್ಯ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳು ಇದೀಗ ಬೆಳಕಿಗೆ ಬಂದಿವೆ. ಸಿಎಲ್-7 ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಗಳು ಕೇಳಿಬಂದಿವೆ. ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಅನುಮತಿ ಪಡೆಯಲು ಲಕ್ಷ್ಮಮ್ಮ ಎಂಬುವವರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಲಕ್ಷ್ಮಮ್ಮ ಪುತ್ರ ಪುನೀತ್ ಎಂಬವರು ಸಲ್ಲಿಸಿದ್ದರು. ಆರಂಭದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು, ಮತ್ತು ನಂತರ ಅವರು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದ್ದರು.

ಬಳಿಕ, ಅಬಕಾರಿ ಇಲಾಖೆ ಅಧಿಕಾರಿಗಳು 40 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ಪುನೀತ್ ಆರೋಪಿಸಿದ್ದಾರೆ. ನಂತರ ಈ ಮೊತ್ತವನ್ನು 20 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ. ಮೊಬೈಲ್ ಸ್ವಿಚ್​ಆಫ್ ಮಾಡಿಸಿ, ಅಬಕಾರಿ ಡಿಸಿ ರವಿಶಂಕರ್ ಅವರು ಲಂಚಕ್ಕೆ ಬೇಡಿಕೆ ಇಡುವಂತೆ ಮಾಡಿದ್ದಾರೆ ಎಂದು ಪುನೀತ್ ಆರೋಪಿಸಿದ್ದಾರೆ.

ಲೋಕಾಯುಕ್ತಕ್ಕೆ ದೂರು

ಈ ಸಂಬಂಧ, ಪುನೀತ್ ಅವರು ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಆಡಿಯೋ ಸಾಕ್ಷ್ಯಗಳನ್ನೂ ಸಲ್ಲಿಸಿದ್ದಾರೆ. ಈ ವಿಚಾರ ಸಂಬಂಧ ಲೋಕಾಯುಕ್ತ ಮತ್ತಷ್ಟು ತನಿಖೆ ನಡೆಸುವ ನಿರೀಕ್ಷೆಯಿದೆ ಮತ್ತು ಇನ್ಸ್​ಪೆಕ್ಟರ್ ಶಿವಶಂಕರ್ ಮತ್ತು ಡಿಸಿ ರವಿಶಂಕರ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ದೂರು ಬಂದರೆ ತನಿಖೆ ನಡೆಸುತ್ತೇವೆ: ಗೃಹ ಸಚಿವ ಪರಮೇಶ್ವರ

ಮಂಡ್ಯ ಅಬಕಾರಿ ಇಲಾಖೆ ಲಂಚದ ವಿರುದ್ಧ ಲೋಕಾಯುಕ್ತಗೆ ದೂರು ಸಲ್ಲಿಕೆಯಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರಿಂದ ಲೋಕಾಯುಕ್ತದವರೇ ಆ ಬಗ್ಗೆ ಗಮನಹರಿಸುತ್ತಾರೆ. ಪೊಲೀಸ್​ ಇಲಾಖೆಗೆ ದೂರು ಬಂದರೆ ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಇಲಾಖೆಗೆ ದೂರು ಬಂದಿಲ್ಲ, ದೂರು ಬಂದರೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕದಾದ್ಯಂತ ಅಬಕಾರಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ಕೂಗು ಕೇಳಿಬಂದಿತ್ತು. ಪರವಾನಗಿ ನೀಡಲು ಲಂಚ ಕೇಳಲಾಗುತ್ತಿದೆ ಎಂದು ಅನೇಕ ಮಂದಿ ಬಾರ್ ಮಾಲೀಕರು ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​​​ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದರೆ, ನಂತರ ಸಿಎಂ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದರು. ಹಿಗಾಗಿ ಬಂದ್ ಹಿಂಪಡೆಯಲಾಗಿತ್ತು.

ಇದನ್ನೂ ಓದಿ: ಎಣ್ಣೆ ಪ್ರಿಯರಿಗೆ ಗುಡ್​ನ್ಯೂಸ್: ನ. 20ರ ಮದ್ಯ ಮಾರಾಟ ಬಂದ್ ವಾಪಸ್

ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ​​ಆರೋಪಿಸಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Thu, 28 November 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ