AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ

ಮಂಡ್ಯದ ಚಂದೂಪುರದಲ್ಲಿ ಬಾರ್ ಪರವಾನಗಿಗಾಗಿ ಲಂಚ ಪಡೆದ ಆರೋಪದಲ್ಲಿ ಲೋಕಾಯುಕ್ತ ಎಫ್​ಐಆರ್ ದಾಖಲಿಸದೆಯೇ ತನಿಖೆ ಆರಂಭಿಸಿದೆ. ದೂರುದಾರರು ಸಲ್ಲಿಸಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಕೂಡ ಉಲ್ಲೇಖವಾಗಿರುವುದೇ ಲೋಕಾಯುಕ್ತದ ಈ ನಡೆಗೆ ಕಾರಣ. ಒಂದು ವೇಳೆ ಎಫ್​ಐಆರ್ ದಾಖಲಾದರೆ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟವಾಗುವ ಸಾಧ್ಯತೆ ಇದೆ.

ಮಂಡ್ಯ: ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ
ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ
ಪ್ರಶಾಂತ್​ ಬಿ.
| Edited By: |

Updated on:Nov 29, 2024 | 9:55 AM

Share

ಮಂಡ್ಯ, ನವೆಂಬರ್ 29: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಮುಂದಾಗಿದೆ. ಎಫ್​ಐಆರ್​ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್​ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ. ಯಾಕೆಂದರೆ, ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ.

ದೂರುದಾರ ಸಲ್ಲಿಸಿರುವ ಅಧಿಕಾರಿ ಮತ್ತು ದೂರುದಾರನ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಸಚಿವರ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಚಾರ ಇಟ್ಟುಕೊಂಡು ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಲಂಚದಲ್ಲಿ ಸಚಿವರಿಗೂ ಪಾಲು: ಜೆಡಿಎಸ್ ವಾಗ್ದಾಳಿ

ಬಾರ್ ಲೈಸೆನ್ಸ್​ನಲ್ಲಿಯೂ ಲಂಚ ವಸೂಲಿ ನಡೆಯುತ್ತಿದೆ. ಸಚಿವರ ಮುಂದಾಳತ್ವದಲ್ಲೇ ಅಧಿಕಾರಿಗಳು ರೇಟ್ ಫಿಕ್ಸ್ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ರಾಜ್ಯ ಅಬಕಾರಿ ಇಲಾಖೆಯಲ್ಲಿ “ಮಂಥ್ಲಿ ಮನಿ” ಹೆಸರಲ್ಲಿ ವಸೂಲಿ ದಂಧೆ ಎಗ್ಗಿಲ್ಲದೆ ಜೋರಾಗಿ ನಡೆಯುತ್ತಿದೆ. ಅಂದು ಪ್ರಧಾನಿ ಮೋದಿಯವರು ಆಡಿದ್ದ ಮಾತು ಇಂದು ಸತ್ಯವಾಗಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ಗೆ ಲಂಚ ವಸೂಲಿ ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವ ಚಲುವರಾಯಸ್ವಾಮಿ ಮುಂದಾಳತ್ವದಲ್ಲೇ ಅಧಿಕಾರಿಗಳು ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತಿರುವುದು ಆಡಿಯೋ ಸಂಭಾಷಣೆಯಲ್ಲಿ ಜಗಜ್ಜಾಹೀರಾಗಿದೆ ಎಂದು ಎಕ್ಸ್​​ ಸಂದೇಶದ ಮೂಲಕ ಜೆಡಿಎಸ್ ಆರೋಪಿಸಿದೆ.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ದೂರಿನ ವಾಸ್ತವತೆ ಅರಿಯಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ದೂರುದಾರ ಪುನೀತ್ ನೀಡಿರುವ ಸಾಕ್ಷ್ಯಗಳ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎರಡ್ಮೂರು ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸಿ ಡಿಐಜಿಗೆ ವರದಿ ಸಲ್ಲಿಸಲಿದ್ದಾರೆ. ಒಂದು ವೇಳೆ, ಲೋಕಾಯುಕ್ತ ಡಿಐಜಿ ಆದೇಶ ನೀಡಿದರೆ ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಮಂಡ್ಯ ಲೋಕಾಯುಕ್ತ ಎಸ್​​ಪಿ ಸುರೇಶಬಾಬು ಮಾಹಿತಿ‌ ನೀಡಿದ್ದಾರೆ.

ಈಗಾಗಲೇ ಆರೋಪ ಹೊತ್ತ ಅಬಕಾರಿ ಅಧಿಕಾರಿಗಳ ತಲೆದಂಡಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಬಕಾರಿ ಇನ್ಸ್​​ಪೆಕ್ಟರ್ ಶಿವಶಂಕರ್ ಅಮಾನತುಗೊಳಿಸಲಾಗಿದೆ. ಮತ್ತೊಂದೆಡೆ, ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದರೆ ಭ್ರಷ್ಟ ಅಧಿಕಾರಿಗಳಿಗೆ ಮತ್ತಷ್ಟು ಸಂಕಷ್ಟ ಖಚಿತವಾಗಿದೆ.

ಏನಿದು ಅಬಕಾರಿ ಲಂಚ ಪ್ರಕರಣ?

ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಅನುಮತಿ ಪಡೆಯಲು ಲಕ್ಷ್ಮಮ್ಮ ಎಂಬುವವರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಲಕ್ಷ್ಮಮ್ಮ ಪುತ್ರ ಪುನೀತ್ ಎಂಬವರು ಸಲ್ಲಿಸಿದ್ದರು. ಆರಂಭದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು, ಮತ್ತು ನಂತರ ಅವರು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದ್ದರು. ಬಳಿಕ, ಅಬಕಾರಿ ಇಲಾಖೆ ಅಧಿಕಾರಿಗಳು 40 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. ನಂತರ ಈ ಮೊತ್ತವನ್ನು 20 ಲಕ್ಷ ರೂ.ಗೆ ಇಳಿಕೆ ಮಾಡಲಾಗಿತ್ತು ಎಂದು ಪುನೀತ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಪರವಾನಗಿ ಕೊಡಿಸಲು ಲಂಚಕ್ಕೆ ಬೇಡಿಕೆ ಆರೋಪ

ಲಂಚ ಕೇಳಿದ ಆರೋಪ ಸಂಬಂಧ ಅಬಕಾರಿ ಡಿಸಿ ರವಿಶಂಕರ್ ಹಾಗೂ ಇನ್ಸ್​ಪೆಕ್ಟರ್ ಶಿವಶಂಕರ್ ವಿರುದ್ಧ ಪುನೀತ್ ಲೋಕಾಯುಕ್ತಕ್ಕೆ ಗುರುವಾರ ದೂರು ನೀಡಿದ್ದರು. ಜತೆಗೆ, ಆಡಿಯೋ ಸಾಕ್ಷ್ಯವನ್ನೂ ಸಲ್ಲಿಸಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:12 am, Fri, 29 November 24

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ