AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ

ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಕೌಟುಂಬಿಕ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೆಲಸ ಬಿಟ್ಟು ವಾಪಾಸ್ ಗ್ರಾಮಕ್ಕೆ ಬಂದು ಸೇರಿಕೊಂಡಿದ್ದ. ಅವತ್ತು ಪಾರ್ಟಿ ಮಾಡುವುದಕ್ಕೆ ಎಂದು ಸ್ನೇಹಿತರ ಜೊತೆ ಬಾರ್ ಅಂಡ್ ರೆಸ್ಟೋರೆಂಟ್​ಗೆ ಬಂದಿದ್ದ. ಸ್ನೇಹಿತರ ಜೊತೆ ಸೇರಿ ಕಂಠಪೂರ್ತಿಯಾಗಿ ಕುಡಿದಿದ್ದ. ಈ ವೇಳೆ ರೆಸ್ಟೋರೆಂಟ್​ನಲ್ಲಿ ಸ್ನೇಹಿತರ ಜೊತೆ ಗಲಾಟೆ ಕೂಡ ನಡೆದಿತ್ತು. ಆನಂತರ ಬಾರ್​ನಿಂದ ಸಿಗರೇಟ್ ತರುವುದಕ್ಕೆ ಎಂದು ಹೊರಗೆ ಬಂದಿದ್ದವನನ್ನ ಸ್ನೇಹಿತರೇ ಕೊಲೆ ಮಾಡಿದ್ದರು.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ಮೃತ ವ್ಯಕ್ತಿ, ಬಂಧಿತ ಆರೋಪಿಗಳು
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 21, 2023 | 7:48 PM

Share

ಮಂಡ್ಯ, ಡಿ.21: ಇದೇ ಡಿಸೆಂಬರ್ 14 ರ ರಾತ್ರಿ ಮಂಡ್ಯ(Mandya)ದ ಫ್ಯಾಕ್ಟರಿ ಸರ್ಕಲ್ ಬಳಿ ಸಿದ್ದಾರ್ಥ ಕೋಸ್ಟಲ್ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಮದ್ದೂರು(Maddur) ತಾಲೂಕಿನ ಕಡಿಲುವಾಗಿಲು ಗ್ರಾಮದ ಗುರುವಿಲಾಸ್(31) ಎಂಬಾತನನ್ನ ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದೀಗ ಕೊಲೆ ಸಂಬಂಧ ಮಂಡ್ಯದ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ನೇಹಿತರ ಜೊತೆ ಜಗಳ

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿದ್ದ ಮೃತ ಗುರುವಿಲಾಸ್, ಪತ್ನಿಯ ಜೊತೆ ಕಲಹ ಉಂಟಾಗಿ ಬೆಂಗಳೂರು ತೊರೆದು ಗ್ರಾಮಕ್ಕೆ ವಾಪಾಸ್ ಬಂದು, ಮಂಡ್ಯದ ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಡಿಸೆಂಬರ್ 14 ರಂದು ಎಣ್ಣೆ ಕುಡಿಯುವುದಕ್ಕೆ ಎಂದು ಬಾರ್​ಗೆ ಬಂದಿದ್ದ ಆತ ಕಂಠಪೂರ್ತಿ ಕುಡಿದಿದ್ದ. ನಂತರ ಕಡಿಲುವಾಗಿಲು ಗ್ರಾಮದ ಶಿವಕುಮಾರ್ ಇರುವುದನ್ನ ಗಮನಿಸಿ ಆತನ ಜೊತೆಗೂ ಕೂಡ ಎಣ್ಣೆ ಹೊಡೆದಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಆರಂಭಗೊಂಡಿತ್ತು. ಗುರುವಿಲಾಸ್, ಸ್ನೇಹಿತ ಶಿವಕುಮಾರ್ ಮೇಲೆ ಹಲ್ಲೆ ಮಾಡಿದ್ದ. ಅಲ್ಲಿದ್ದವರು ಗಲಾಟೆ ಬಿಡಿಸಿ ಕಳುಹಿಸಿದ್ದರು. ಎಲ್ಲರ ಮುಂದೆ ಹಲ್ಲೆ ಮಾಡಿದ ಎಂದು ಅಲ್ಲಿಂದ ಶಿವಕುಮಾರ್ ನೇರವಾಗಿ ಹೊರ ಬಂದು ಅಂಗಡಿಯೊಂದಕ್ಕೆ ಹೋಗಿ ಚಾಕು ತೆಗೆದುಕೊಂಡು ಬಂದಿದ್ದ.

ಇದನ್ನೂ ಓದಿ:ಕಾನೂನಿನ ಸುವ್ಯವಸ್ಥೆ ನಮ್ಮ ಬದ್ಧತೆ: ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು ಬಗ್ಗೆ ಮೌನ ಮುರಿದ ಮೋದಿ

ಇನ್ನು ಸಿಗರೇಟ್ ತರುವುದಕ್ಕೆ ಎಂದು ಗುರುವಿಲಾಸ್ ಸಹ ಬಾರ್​ನಿಂದ ಹೊರಕ್ಕೆ ಬಂದಿದ್ದ. ಕಾರಿನಿಂದ ಇಳಿದು ಬಂದವನೇ ನೇರವಾಗಿ ಗುರುವಿಲಾಸ್ ಕಡೆ ಹೋಗಿ ಚಾಕುವಿನಿಂದ ಚುಚ್ಚಿ ಗುರುವಿಲಾಸ್​ನನ್ನು ಕೊಲೆ ಮಾಡಿ, ನಂತರ ಕಾರಿನಲ್ಲಿ ಪರಾರಿಯಾಗಿದ್ದರು. ಈ ಪ್ರಕರಣ ದಾಖಲಿಸಿಕೊಂಡಿದ್ದ ಮಂಡ್ಯ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನು ಭೀಕರ ಕೊಲೆಯ ದೃಶ್ಯ ಪಕ್ಕದಲ್ಲೇ  ಅಳವಡಿಸಿದ್ದ ಸಿಸಿ ಕ್ಯಾಮಾರದಲ್ಲೂ ಕೂಡ ಸೆರೆಯಾಗಿದೆ. ಒಟ್ಟಾರೆ ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ ಆರಂಭಗೊಂಡು ಅದು ಕೊಲೆಯಲ್ಲಿ ಅಂತ್ಯವಾಗಿದ್ದು, ಸ್ನೇಹಿತನನ್ನ ಕೊಂದ ಆರೋಪಿಗಳು ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ