AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ

ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಕೌಟುಂಬಿಕ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೆಲಸ ಬಿಟ್ಟು ವಾಪಾಸ್ ಗ್ರಾಮಕ್ಕೆ ಬಂದು ಸೇರಿಕೊಂಡಿದ್ದ. ಅವತ್ತು ಪಾರ್ಟಿ ಮಾಡುವುದಕ್ಕೆ ಎಂದು ಸ್ನೇಹಿತರ ಜೊತೆ ಬಾರ್ ಅಂಡ್ ರೆಸ್ಟೋರೆಂಟ್​ಗೆ ಬಂದಿದ್ದ. ಸ್ನೇಹಿತರ ಜೊತೆ ಸೇರಿ ಕಂಠಪೂರ್ತಿಯಾಗಿ ಕುಡಿದಿದ್ದ. ಈ ವೇಳೆ ರೆಸ್ಟೋರೆಂಟ್​ನಲ್ಲಿ ಸ್ನೇಹಿತರ ಜೊತೆ ಗಲಾಟೆ ಕೂಡ ನಡೆದಿತ್ತು. ಆನಂತರ ಬಾರ್​ನಿಂದ ಸಿಗರೇಟ್ ತರುವುದಕ್ಕೆ ಎಂದು ಹೊರಗೆ ಬಂದಿದ್ದವನನ್ನ ಸ್ನೇಹಿತರೇ ಕೊಲೆ ಮಾಡಿದ್ದರು.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ಮೃತ ವ್ಯಕ್ತಿ, ಬಂಧಿತ ಆರೋಪಿಗಳು
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 21, 2023 | 7:48 PM

Share

ಮಂಡ್ಯ, ಡಿ.21: ಇದೇ ಡಿಸೆಂಬರ್ 14 ರ ರಾತ್ರಿ ಮಂಡ್ಯ(Mandya)ದ ಫ್ಯಾಕ್ಟರಿ ಸರ್ಕಲ್ ಬಳಿ ಸಿದ್ದಾರ್ಥ ಕೋಸ್ಟಲ್ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಮದ್ದೂರು(Maddur) ತಾಲೂಕಿನ ಕಡಿಲುವಾಗಿಲು ಗ್ರಾಮದ ಗುರುವಿಲಾಸ್(31) ಎಂಬಾತನನ್ನ ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದೀಗ ಕೊಲೆ ಸಂಬಂಧ ಮಂಡ್ಯದ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ನೇಹಿತರ ಜೊತೆ ಜಗಳ

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿದ್ದ ಮೃತ ಗುರುವಿಲಾಸ್, ಪತ್ನಿಯ ಜೊತೆ ಕಲಹ ಉಂಟಾಗಿ ಬೆಂಗಳೂರು ತೊರೆದು ಗ್ರಾಮಕ್ಕೆ ವಾಪಾಸ್ ಬಂದು, ಮಂಡ್ಯದ ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಡಿಸೆಂಬರ್ 14 ರಂದು ಎಣ್ಣೆ ಕುಡಿಯುವುದಕ್ಕೆ ಎಂದು ಬಾರ್​ಗೆ ಬಂದಿದ್ದ ಆತ ಕಂಠಪೂರ್ತಿ ಕುಡಿದಿದ್ದ. ನಂತರ ಕಡಿಲುವಾಗಿಲು ಗ್ರಾಮದ ಶಿವಕುಮಾರ್ ಇರುವುದನ್ನ ಗಮನಿಸಿ ಆತನ ಜೊತೆಗೂ ಕೂಡ ಎಣ್ಣೆ ಹೊಡೆದಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಆರಂಭಗೊಂಡಿತ್ತು. ಗುರುವಿಲಾಸ್, ಸ್ನೇಹಿತ ಶಿವಕುಮಾರ್ ಮೇಲೆ ಹಲ್ಲೆ ಮಾಡಿದ್ದ. ಅಲ್ಲಿದ್ದವರು ಗಲಾಟೆ ಬಿಡಿಸಿ ಕಳುಹಿಸಿದ್ದರು. ಎಲ್ಲರ ಮುಂದೆ ಹಲ್ಲೆ ಮಾಡಿದ ಎಂದು ಅಲ್ಲಿಂದ ಶಿವಕುಮಾರ್ ನೇರವಾಗಿ ಹೊರ ಬಂದು ಅಂಗಡಿಯೊಂದಕ್ಕೆ ಹೋಗಿ ಚಾಕು ತೆಗೆದುಕೊಂಡು ಬಂದಿದ್ದ.

ಇದನ್ನೂ ಓದಿ:ಕಾನೂನಿನ ಸುವ್ಯವಸ್ಥೆ ನಮ್ಮ ಬದ್ಧತೆ: ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು ಬಗ್ಗೆ ಮೌನ ಮುರಿದ ಮೋದಿ

ಇನ್ನು ಸಿಗರೇಟ್ ತರುವುದಕ್ಕೆ ಎಂದು ಗುರುವಿಲಾಸ್ ಸಹ ಬಾರ್​ನಿಂದ ಹೊರಕ್ಕೆ ಬಂದಿದ್ದ. ಕಾರಿನಿಂದ ಇಳಿದು ಬಂದವನೇ ನೇರವಾಗಿ ಗುರುವಿಲಾಸ್ ಕಡೆ ಹೋಗಿ ಚಾಕುವಿನಿಂದ ಚುಚ್ಚಿ ಗುರುವಿಲಾಸ್​ನನ್ನು ಕೊಲೆ ಮಾಡಿ, ನಂತರ ಕಾರಿನಲ್ಲಿ ಪರಾರಿಯಾಗಿದ್ದರು. ಈ ಪ್ರಕರಣ ದಾಖಲಿಸಿಕೊಂಡಿದ್ದ ಮಂಡ್ಯ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನು ಭೀಕರ ಕೊಲೆಯ ದೃಶ್ಯ ಪಕ್ಕದಲ್ಲೇ  ಅಳವಡಿಸಿದ್ದ ಸಿಸಿ ಕ್ಯಾಮಾರದಲ್ಲೂ ಕೂಡ ಸೆರೆಯಾಗಿದೆ. ಒಟ್ಟಾರೆ ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ ಆರಂಭಗೊಂಡು ಅದು ಕೊಲೆಯಲ್ಲಿ ಅಂತ್ಯವಾಗಿದ್ದು, ಸ್ನೇಹಿತನನ್ನ ಕೊಂದ ಆರೋಪಿಗಳು ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ