ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ

ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದರೆ, ಕೌಟುಂಬಿಕ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೆಲಸ ಬಿಟ್ಟು ವಾಪಾಸ್ ಗ್ರಾಮಕ್ಕೆ ಬಂದು ಸೇರಿಕೊಂಡಿದ್ದ. ಅವತ್ತು ಪಾರ್ಟಿ ಮಾಡುವುದಕ್ಕೆ ಎಂದು ಸ್ನೇಹಿತರ ಜೊತೆ ಬಾರ್ ಅಂಡ್ ರೆಸ್ಟೋರೆಂಟ್​ಗೆ ಬಂದಿದ್ದ. ಸ್ನೇಹಿತರ ಜೊತೆ ಸೇರಿ ಕಂಠಪೂರ್ತಿಯಾಗಿ ಕುಡಿದಿದ್ದ. ಈ ವೇಳೆ ರೆಸ್ಟೋರೆಂಟ್​ನಲ್ಲಿ ಸ್ನೇಹಿತರ ಜೊತೆ ಗಲಾಟೆ ಕೂಡ ನಡೆದಿತ್ತು. ಆನಂತರ ಬಾರ್​ನಿಂದ ಸಿಗರೇಟ್ ತರುವುದಕ್ಕೆ ಎಂದು ಹೊರಗೆ ಬಂದಿದ್ದವನನ್ನ ಸ್ನೇಹಿತರೇ ಕೊಲೆ ಮಾಡಿದ್ದರು.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ಮೃತ ವ್ಯಕ್ತಿ, ಬಂಧಿತ ಆರೋಪಿಗಳು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 21, 2023 | 7:48 PM

ಮಂಡ್ಯ, ಡಿ.21: ಇದೇ ಡಿಸೆಂಬರ್ 14 ರ ರಾತ್ರಿ ಮಂಡ್ಯ(Mandya)ದ ಫ್ಯಾಕ್ಟರಿ ಸರ್ಕಲ್ ಬಳಿ ಸಿದ್ದಾರ್ಥ ಕೋಸ್ಟಲ್ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಮದ್ದೂರು(Maddur) ತಾಲೂಕಿನ ಕಡಿಲುವಾಗಿಲು ಗ್ರಾಮದ ಗುರುವಿಲಾಸ್(31) ಎಂಬಾತನನ್ನ ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದೀಗ ಕೊಲೆ ಸಂಬಂಧ ಮಂಡ್ಯದ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ನೇಹಿತರ ಜೊತೆ ಜಗಳ

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿದ್ದ ಮೃತ ಗುರುವಿಲಾಸ್, ಪತ್ನಿಯ ಜೊತೆ ಕಲಹ ಉಂಟಾಗಿ ಬೆಂಗಳೂರು ತೊರೆದು ಗ್ರಾಮಕ್ಕೆ ವಾಪಾಸ್ ಬಂದು, ಮಂಡ್ಯದ ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಡಿಸೆಂಬರ್ 14 ರಂದು ಎಣ್ಣೆ ಕುಡಿಯುವುದಕ್ಕೆ ಎಂದು ಬಾರ್​ಗೆ ಬಂದಿದ್ದ ಆತ ಕಂಠಪೂರ್ತಿ ಕುಡಿದಿದ್ದ. ನಂತರ ಕಡಿಲುವಾಗಿಲು ಗ್ರಾಮದ ಶಿವಕುಮಾರ್ ಇರುವುದನ್ನ ಗಮನಿಸಿ ಆತನ ಜೊತೆಗೂ ಕೂಡ ಎಣ್ಣೆ ಹೊಡೆದಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಆರಂಭಗೊಂಡಿತ್ತು. ಗುರುವಿಲಾಸ್, ಸ್ನೇಹಿತ ಶಿವಕುಮಾರ್ ಮೇಲೆ ಹಲ್ಲೆ ಮಾಡಿದ್ದ. ಅಲ್ಲಿದ್ದವರು ಗಲಾಟೆ ಬಿಡಿಸಿ ಕಳುಹಿಸಿದ್ದರು. ಎಲ್ಲರ ಮುಂದೆ ಹಲ್ಲೆ ಮಾಡಿದ ಎಂದು ಅಲ್ಲಿಂದ ಶಿವಕುಮಾರ್ ನೇರವಾಗಿ ಹೊರ ಬಂದು ಅಂಗಡಿಯೊಂದಕ್ಕೆ ಹೋಗಿ ಚಾಕು ತೆಗೆದುಕೊಂಡು ಬಂದಿದ್ದ.

ಇದನ್ನೂ ಓದಿ:ಕಾನೂನಿನ ಸುವ್ಯವಸ್ಥೆ ನಮ್ಮ ಬದ್ಧತೆ: ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು ಬಗ್ಗೆ ಮೌನ ಮುರಿದ ಮೋದಿ

ಇನ್ನು ಸಿಗರೇಟ್ ತರುವುದಕ್ಕೆ ಎಂದು ಗುರುವಿಲಾಸ್ ಸಹ ಬಾರ್​ನಿಂದ ಹೊರಕ್ಕೆ ಬಂದಿದ್ದ. ಕಾರಿನಿಂದ ಇಳಿದು ಬಂದವನೇ ನೇರವಾಗಿ ಗುರುವಿಲಾಸ್ ಕಡೆ ಹೋಗಿ ಚಾಕುವಿನಿಂದ ಚುಚ್ಚಿ ಗುರುವಿಲಾಸ್​ನನ್ನು ಕೊಲೆ ಮಾಡಿ, ನಂತರ ಕಾರಿನಲ್ಲಿ ಪರಾರಿಯಾಗಿದ್ದರು. ಈ ಪ್ರಕರಣ ದಾಖಲಿಸಿಕೊಂಡಿದ್ದ ಮಂಡ್ಯ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನು ಭೀಕರ ಕೊಲೆಯ ದೃಶ್ಯ ಪಕ್ಕದಲ್ಲೇ  ಅಳವಡಿಸಿದ್ದ ಸಿಸಿ ಕ್ಯಾಮಾರದಲ್ಲೂ ಕೂಡ ಸೆರೆಯಾಗಿದೆ. ಒಟ್ಟಾರೆ ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ ಆರಂಭಗೊಂಡು ಅದು ಕೊಲೆಯಲ್ಲಿ ಅಂತ್ಯವಾಗಿದ್ದು, ಸ್ನೇಹಿತನನ್ನ ಕೊಂದ ಆರೋಪಿಗಳು ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ