AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ವಿದೇಶಕ್ಕೆ ತೆರಳಿದ ಮುಸ್ಕಾನ್; ಮದೀನಾದಿಂದ ಸೆಲ್ಫಿ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿನಿ ತಂದೆ

Muskan Khan: ಹಿಜಾಬ್ ಪ್ರಕರಣದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿ ಸಂಚಲನ ಸೃಷ್ಟಿಸಿದ್ದ ವಿದ್ಯಾರ್ಥಿನಿ ಬಿ.ಬಿ.ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ: ವಿದೇಶಕ್ಕೆ ತೆರಳಿದ ಮುಸ್ಕಾನ್; ಮದೀನಾದಿಂದ ಸೆಲ್ಫಿ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿನಿ ತಂದೆ
ವಿದ್ಯಾರ್ಥಿನಿ ಮುಸ್ಕಾನ್
TV9 Web
| Updated By: shivaprasad.hs|

Updated on:May 11, 2022 | 12:04 PM

Share

ಮಂಡ್ಯ: ಹಿಜಾಬ್ ಪ್ರಕರಣದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿ ಸಂಚಲನ ಸೃಷ್ಟಿಸಿದ್ದ ವಿದ್ಯಾರ್ಥಿನಿ ಬಿ.ಬಿ.ಮುಸ್ಕಾನ್ (Muskan Khan) ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ. ಶಾಲೆಯಲ್ಲಿ ಹಿಜಾಬ್ ಬ್ಯಾನ್​ಗೆ ಆಗ್ರಹಿಸಿ ನಡೀತಿದ್ದ ಪ್ರತಿಭಟನೆ ವೇಳೆ ಮಂಡ್ಯದಲ್ಲಿ ಅಲ್ಲಾಹು ಅಕ್ಬರ್​ ಘೋಷಣೆಯನ್ನು ಹಿಂದೂ ಕಾರ್ಯಕರ್ತರ ಮುಂಭಾಗದಲ್ಲಿ ಮುಸ್ಕಾನ್ ಕೂಗಿದ್ದರು. ಈ ಘಟನೆಯಿಂದ ಮುಸ್ಕಾನ್ ಅವರಿಗೆ ಅಪಾರ ಪ್ರಚಾರ ಸಿಕ್ಕಿತ್ತು. ಇತ್ತೀಚೆಗೆ ಪರೀಕ್ಷೆಗಳಿಗೆ ಮುಸ್ಕಾನ್ ಹಾಜರಾಗಿರಲಿಲ್ಲ. ಇದೀಗ ಮುಸ್ಕಾನ್ ವಿದೇಶಕ್ಕೆ ತೆರಳಿರುವ ಬಗ್ಗೆ ವರದಿಯಾಗಿದ್ದು, ಏಪ್ರಿಲ್ 25ರಂದೇ ಅವರು ಸೌದಿಯ ಮೆಕ್ಕಾಗೆ ತೆರಳಿದ್ದಾರೆ.

ಮದೀನಾದಿಂದ ಸೆಲ್ಫಿ ವಿಡಿಯೋ ಹಂಚಿಕೊಂಡಿರುವ ಮುಸ್ಕಾನ್ ತಂದೆ ಮಹಮ್ಮದ್ ಹುಸೇನ್, ‘‘ನಮ್ಮ ಮಂಡ್ಯದಲ್ಲಿರುವ ಎಲ್ಲಾ ಅಕ್ಕತಂಗಿ-ಅಣ್ಣ ತಮ್ಮಂದಿರಿಗೂ ನಮಸ್ಕಾರ. ನಾನು ಮದೀನಾದ ಒಳಗಡೆ ಇದ್ದೇನೆ. ಇನ್ ಷಾ ಅಲ್ಲಾ, ನಿಮಗೆಲ್ಲರಿಗೂ ಒಳ್ಳೆಯದಾಗಲಿ. ನಾನು ಎಲ್ಲರಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ಇನ್ನೂ ಹೆಚ್ಚು ಪ್ರಾರ್ಥನೆ ಮಾಡ್ತೇನೆ. ನಮ್ಮ ಮಂಡ್ಯ ಹಾಗೂ ಇಂಡಿಯಾದಲ್ಲಿ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಒಟ್ಟಾಗಿ ಸೌಹಾರ್ದತೆಯಿಂದ ಬಾಳೋಣ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಆ ದೇವರು ಆರೋಗ್ಯ ಕೊಟ್ಟು ಕಾಪಾಡಲಿ’’ ಎಂದು ನುಡಿದಿದ್ದಾರೆ.

ಈ ವರ್ಷ ಶಿಕ್ಷಣದಿಂದ ದೂರ ಉಳಿದ ಮುಸ್ಕಾನ್:

ಇದನ್ನೂ ಓದಿ
Image
ಯಾದಗಿರಿ: ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ನಂಬರ್​ಗೆ ಬೂಸ್ಟರ್ ಡೋಸ್ ನೀಡಿದ ಮೆಸೇಜ್; ಬೆಳಕಿಗೆ ಬಂದ ಆರೋಗ್ಯ ಇಲಾಖೆಯ ಯಡವಟ್ಟು
Image
ತುಮಕೂರು: ವಿದ್ಯುತ್ ಸ್ಪರ್ಶ; ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಸಾವು
Image
ಅಲ್ಲಹು ಅಕ್ಬರ್ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ನಡೆಸಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ
Image
ಹಿಜಾಬ್​ಗಾಗಿ ವರ್ಷದ ಶಿಕ್ಷಣವನ್ನೆ ಬಲಿಕೊಟ್ಟ ಮುಸ್ಕಾನ್; ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಬಳಿಕ ಕಾಲೇಜಿನತ್ತ ಮುಖವೇ ಹಾಕಿಲ್ಲ

ಹಿಜಾಬ್​ ವಿಚಾರದಲ್ಲಿ ಸರ್ಕಾರದ ಸಮವಸ್ತ್ರ ಸಂಹಿತೆಯನ್ನು ನ್ಯಾಯಾಲಯ ಎತ್ತಿಹಿಡಿದಲ್ಲಿಂದ ಮುಸ್ಕಾನ್ ಕಾಲೇಜಿಗೆ ಹಾಜರಾಗಿಲ್ಲ. ಪರೀಕ್ಷೆಗೂ ಅವರು ಗೈರಾಗಿದ್ದು, ಮುಂದೆ ಹಿಜಾಬ್ ಅವಕಾಶ ಇರುವ ಕಾಲೇಜಿಗೆ ಸೇರುವ ಪ್ಲಾನ್ ಮಾಡಿಕೊಂಡಿದ್ದಾರೆಂದು ವರದಿಯಾಗಿತ್ತು. ನ್ಯಾಯಾಲಯದ ತೀರ್ಪಿನ ನಂತರ ಮಾಧ್ಯಮಗಳೊಂದಿಗೂ ಅಂತರ ಕಾಯ್ದುಕೊಂಡಿರುವ ಅವರು ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ಇತ್ತೀಚೆಗೆ ಮುಸ್ಕಾನ್ ಘೋಷಣೆ ಕೂಗಿದ ಬಗ್ಗೆ ಆಲ್​ಖೈದಾ ಮುಖ್ಯಸ್ಥ ಜವಾಹಿರಿಯೂ ಮಾತನಾಡಿದ್ದು ವಿವಾದ ಸೃಷ್ಟಿಸಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:51 am, Wed, 11 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ