AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿ ಸಾವು; ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನಿಯ ಏರಿಕೆ

ಕರ್ನಾಟಕ ರಾಜ್ಯದಲ್ಲೇ ಕೊಕ್ಕರೆ ಬೆಳ್ಳೂರಿನಲ್ಲಿ ಮಾತ್ರ ಕಾಣ ಸಿಗುವ ವಿಶೇಷ ಥಳಿ ಪೆಲಿಕಾನ್ ಪಕ್ಷಿ/ ಹೆಜ್ಜಾರ್ಲೆ ಪಕ್ಷಿ ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿ ಸಾವು; ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನಿಯ ಏರಿಕೆ
ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿ ಸಾವು (ಫೋಟೋ: ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Jan 02, 2023 | 10:20 AM

Share

ಮಂಡ್ಯ: ಕರ್ನಾಟಕ ರಾಜ್ಯದಲ್ಲೇ ಕೊಕ್ಕರೆ ಬೆಳ್ಳೂರಿ (Kokkare Bellur)ನಲ್ಲಿ ಮಾತ್ರ ಕಾಣ ಸಿಗುವ ವಿಶೇಷ ತಳಿ ಪೆಲಿಕನ್ ಪಕ್ಷಿ/ ಹೆಜ್ಜಾರ್ಲೆ ಪಕ್ಷಿ (Hejjarle Bird) ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳಲ್ಲಿ ಆತಂಕ ಉಂಟು ಮಾಡಿದೆ. ಈ ನಡುವೆ ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿಯೊಂದು ಸಾವನ್ನಪ್ಪಿದೆ. ವಿದೇಶದಿಂದ ಬಂದ ಈ ಪಕ್ಷಿಗಳು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರಿನಲ್ಲಿ ನೆಲೆಸಿವೆ. ಈ ಪೈಕಿ ಒಂದು ಪಕ್ಷಿ ಸಾವನ್ನಪ್ಪಿದ್ದು, ಅಧಿಕಾರಿಗಳು ಮರಣೋತ್ತರ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದಾರೆ. ಅಲ್ಲದೆ ಪಕ್ಷಿಯ ಸಾವಿಗೆ ನಿಖರ ಕಾರಣ ತಿಳಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯದಲ್ಲೇ ಕೊಕ್ಕರೆ ಬೆಳ್ಳೂರಿನಲ್ಲಿ ಮಾತ್ರ ಕಾಣ ಸಿಗುವ ವಿಶೇಷ ಥಳಿ ಪೆಲಿಕನ್ ಪಕ್ಷಿ ಅಥವಾ ಹೆಜ್ಜಾರ್ಲೆ ಪಕ್ಷಿ ಸಂತಾನೋತ್ಪತ್ತಿಗಾಗಿ ಕೊಕ್ಕರೆ ಬೆಳ್ಳೂರಿಗೆ ಬಂದಿತ್ತು. ಮಲೇಷಿಯಾ, ಆಸ್ಟ್ರೇಲಿಯಾ ದೇಶಗಳಲ್ಲಿ ಕಾಣ ಸಿಗುವ ಈ ಪಕ್ಷಿಗೆ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಜಿಪಿಎಸ್ ಅಳವಡಿಸಿದ್ದರು. ಆದರೆ, ದಿನದಿಂದ ದಿನಕ್ಕೆ ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನಿಯವಾಗಿ ಏರಿಕೆ ಕಂಡಿದ್ದು, ಪಕ್ಷಿಗಳ ಸಾವಿನಿಂದ ಅಧಿಕಾರಿಗಳು ಕಂಗಾಲಾಗಿರುವುದಂತ ಸತ್ಯ.

Hejjarle bird

ಹೆಜ್ಜಾರ್ಲೆ ಪಕ್ಷಿ ಸಾವು

ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಪಕ್ಷಿಧಾಮವು  ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿದೆ. ಪೆಲಿಕಾನ್ ಹಕ್ಕಿಗೆ ಜಿಪಿಎಸ್ ಟ್ರ್ಯಾಕರ್ ಅಳವಡಿಕೆ ಮೂಲಕ ಈ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿತ್ತು. ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಹೆಜ್ಜಾರ್ಲೆ ಪಕ್ಷಿಗೆ ಟ್ರ್ಯಾಕರ್ ಅಳವಡಿಕೆ ಮಾಡಲಾಗಿದ್ದು, ಹೆಜ್ಜಾರ್ಲೆ ಪಕ್ಷಿ ಯಾವ ದೇಶಕ್ಕೆ ಸಂಚರಿಸುತ್ತೆ ಎಲ್ಲಿ ತಂಗುತ್ತೆ ಅದರ ಚಟುವಟಿಕೆಗಳ ಇಂಚಿಂಚೂ ಮಾಹಿತಿಯ ಟ್ರ್ಯಾಕಿಂಗ್ ಮಾಡಲು ಇದು ಸಹಕಾರಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 2 January 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ