AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಬೈಕ್ ಮೆಕ್ಯಾನಿಕ್ ರಾತ್ರೋರಾತ್ರಿ ಕೋಟ್ಯಾಧಿಪತಿ: 25 ಕೋಟಿ ರೂ. ಲಾಟರಿ ಗೆದ್ದ ಅಲ್ತಾಫ್

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣ ನಿವಾಸಿಯಾದ ಅಲ್ತಾಫ್ ಪಾಷಾ ಎಂಬುವವರು ಕೇರಳ‌ ರಾಜ್ಯದ ಓಣಂ ಲಾಟರಿಯಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿಯನ್ನು ಗೆದ್ದಿದ್ದಾರೆ. ವೃತ್ತಿಯಲ್ಲಿ ಬೈಕ್ ಮೆಕ್ಯಾನಿಕ್ ಆಗಿರುವ ಅಲ್ತಾಫ್, ಇತ್ತೀಚಿಗಷ್ಟೆ ಕೇರಳಕ್ಕೆ ಹೋಗಿದ್ದಾಗ 500 ರೂ ಕೊಟ್ಟು ಲಾಟರಿ ಖರೀದಿ ಮಾಡಿದ್ದರು. ಇದೀಗ ಕೋಟಿ ಗೆದ್ದಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮಂಡ್ಯದ ಬೈಕ್ ಮೆಕ್ಯಾನಿಕ್ ರಾತ್ರೋರಾತ್ರಿ ಕೋಟ್ಯಾಧಿಪತಿ: 25 ಕೋಟಿ ರೂ. ಲಾಟರಿ ಗೆದ್ದ ಅಲ್ತಾಫ್
25 ಕೋಟಿ ರೂ. ಲಾಟರಿ ಗೆದ್ದ ಅಲ್ತಾಫ್ ಪಾಷಾ
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 10, 2024 | 4:30 PM

Share

ಮಂಡ್ಯ, ಅ.10: ಬೈಕ್ ಮೆಕ್ಯಾನಿಕ್​ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದು, ಲಾಟರಿಯಲ್ಲಿ‌ 25 ಕೋಟಿ ರೂ.‌ಬಹುಮಾನ ಪಡೆದಿದ್ದಾರೆ. ಹೌದು, ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣ ನಿವಾಸಿಯಾದ ಅಲ್ತಾಫ್ ಪಾಷಾ, ಕೇರಳ‌ ರಾಜ್ಯದ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದಬೀಗಿದ್ದಾರೆ. ವೃತ್ತಿಯಲ್ಲಿ ಬೈಕ್ ಮೆಕ್ಯಾನಿಕ್ ಆಗಿರುವ ಅಲ್ತಾಫ್, ಇತ್ತೀಚಿಗಷ್ಟೆ ಕೇರಳಕ್ಕೆ ಹೋಗಿದ್ದಾಗ 500 ರೂ ಕೊಟ್ಟು ಲಾಟರಿ ಖರೀದಿ ಮಾಡಿದ್ದರು. ಇದೀಗ ಕೋಟಿ ಗೆದ್ದಿದ್ದಾರೆ.

15 ವರ್ಷದಿಂದ ಲಾಟರಿ ತೆಗೆದುಕೊಳ್ಳುತ್ತಿದ್ದ ಅಲ್ತಾಫ್

ಇನ್ನು ಬಹುಮಾನ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಲಾಟರಿ ಹಣ ಪಡೆಯುವ ಪ್ರಕ್ರಿಯೆಗಾಗಿ ಅಲ್ತಾಫ್ ಕೇರಳಕ್ಕೆ ಪ್ರಯಾಣ ಬೆಳಸಿದ್ದಾರೆ. ಈ ಕುರಿತು ಮಾತನಾಡಿದ ಅವರು,  ‘25 ಕೋಟಿ ಲಾಟರಿ ಬರುತ್ತೆ ಎಂದು ಅಂದು ಕೊಂಡಿರಲಿಲ್ಲ. 15 ವರ್ಷದಿಂದ ಲಾಟರಿ ತೆಗೆದುಕೊಳ್ಳುತ್ತಿದ್ದೇನೆ. ಕರ್ನಾಟಕದಲ್ಲಿ ಲಾಟರಿ ಇದ್ದಾಗಲೂ ಲಾಟರಿಯಿಂದ ಲಾಸ್ ಮಾಡಿಕೊಂಡಿದ್ದೆ. ಕೇರಳದಲ್ಲಿ‌ ಸ್ನೇಹಿತರು, ಸಂಬಂಧಿಕರು ಇದ್ದ ಹಿನ್ನಲೆ ಆಗಾಗ ಕೇರಳಕ್ಕೆ ಹೋಗುತ್ತಿದ್ದೆ. ಅವಾಗ ಲಾಟರಿ ತೆಗೆದುಕೊಂಡು ಬರುತ್ತಿದೆ.

ಇದನ್ನೂ ಓದಿ:ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಮಂಡ್ಯದ ಅಲ್ತಾಫ್​ನ​ ಮನದಾಳದ ಮಾತು

ಅದ್ದೂರಿಯಾಗಿ ಮಗಳ ಮದುವೆ ಮಾಡಬೇಕು-ಅಲ್ತಾಫ್

ಈಗ ಲಾಟರಿಯಲ್ಲಿ ಹಣ ಗೆದ್ದಿದ್ದೇನೆ ಎಂದು ಗೊತ್ತಾದಾಗ ನನಗೆ ನಂಬಲಾಗಲಿಲ್ಲ. ಮನೆಯವರು ಮೊದಲಿಗೆ ನಂಬಲಿಲ್ಲ. ಆನ್​ಲೈನ್​ನಲ್ಲಿ ನೋಡಿದ ಬಳಿಕವಷ್ಟೆ ಎಲ್ಲರಿಗೂ ನಂಬಿಕೆ ಬಂತು. ಈ ಹಣದಿಂದ ಅದ್ದೂರಿಯಾಗಿ ಮಗಳ ಮದುವೆ ಮಾಡಬೇಕು ಅಂದುಕೊಂಡಿದ್ದೇನೆ. ಒಂದು ಮನೆ ಖರೀದಿ ಮಾಡುತ್ತೇನೆ. ಮ್ಯಾಕ್ಯಾನಿಕ್ ಕೆಲಸ ಬಿಟ್ಟು ಬೇರೆ ಬಿಸಿನೆಸ್ ಮಾಡಬೇಕು ಅಂದುಕೊಂಡಿದ್ದೇನೆ ಎಂದು ಹೇಳಿದರು.

25 ಕೋಟಿ ಲಾಟರಿ; ಖುಷಿ ಹಂಚಿಕೊಂಡ ಅಲ್ತಾಫ್ ಪತ್ನಿ, ಮಗಳು

ಇನ್ನು 25 ಕೋಟಿ ಲಾಟರಿ ಬಂದ ಹಿನ್ನಲೆ ಅಲ್ತಾಫ್ ಪತ್ನಿ ಸೀಮಾ ಭಾನು ಮತ್ತು ಮಗಳು ತಾನಿಷಾ ಫಾತೀಮಾ ಅವರು ಟಿವಿ ಡಿಜಿಟಲ್​ ಜೊತೆ ಖುಷಿ ಹಂಚಿಕೊಂಡಿದ್ದು, ‘ಮೊದಲಿಗೆ ನಾವು ಲಾಟರಿಯಲ್ಲಿ ಬಹುಮಾನ ಬಂದಿದೆ ಎಂದು ನಂಬಿರಲಿಲ್ಲ‌. ಇಂದು ಬೆಳಿಗ್ಗೆ ನಮಗೆ ನಂಬಿಕೆ ಬಂದಿದ್ದು. 15 ವರ್ಷದಿಂದ ಲಾಟರಿ ತೆಗೆದುಕೊಳ್ಳುತ್ತಿದ್ದ ಅವರು ಲಾಟರಿ ತೆಗೆದುಕೊಳ್ಳುವುದಕ್ಕೆಂದು ಕೇರಳಕ್ಕೆ ಹೋಗುತ್ತಿದ್ದರು. 15 ವರ್ಷದಿಂದ ಯಾವುದೇ ಲಾಟರಿಯಲ್ಲಿ ಗೆದ್ದಿರಲಿಲ್ಲ‌. ಈಗಲೂ ಅಷ್ಟೆ ನಮಗೆ ಬಂದಿಲ್ಲ ಅಂತನೇ ಅಂದುಕೊಂಡಿದ್ದೇವು.

ಎರಡು ಲಾಟರಿ ಲಾಟರಿ ತಂದಿದ್ದರು. ಒಂದನ್ನು ಯಾರಿಗಾದರೂ ಕೊಟ್ಟುಬಿಡುತ್ತೇನೆ ಅಂದಿದ್ದರು. ಆದ್ರೆ, ಅದೇ ಗೆದ್ದುಬಿಟ್ಟರೆ ಅಂತ ಹೇಳಿದಕ್ಕೆ ಆ ಲಾಟರಿ ಇಟ್ಟುಕೊಂಡರು. ನೋಡಿದರೆ ಅದೇ ಲಾಟರಿಗೆ 25 ಕೋಟಿ ಬಹುಮಾನ ಬಂದಿದೆ. ಮೊದಲಿಗೆ ನಮಗೆ ನಂಬಿಕೆಯೆ ಇರಲಿಲ್ಲ. ಇಷ್ಟು ವರ್ಷ ಲಾಟರಿ ತೆಗೆದುಕೊಳ್ಳುವ ವಿಚಾರಕ್ಕೆ ಮನೆಯಲ್ಲಿ ಗಲಾಟೆ ಆಗಿದೆ. ಲಾಟರಿ ತೆಗೆದುಕೊಳ್ಳುವುದು ಬೇಡ ಅಂತ ಹೇಳುತ್ತಿದ್ದೇವು. ಇದೀಗ ಲಾಟರಿ ಗೆದ್ದಿರುವುದು ಖುಷಿಯಾಗಿದೆ. ಸ್ವಲ್ಪ ಸಾಲ ಇದೆ ಅದನ್ನು ತೀರಿಸಿ ಮನೆ ತೆಗೆದುಕೊಳ್ಳಬೇಕು ಎಂದು ಅಲ್ತಾಫ್ ಮಗಳು ಹಾಗೂ ಆತನ ಪತ್ನಿ ಖುಷಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Thu, 10 October 24

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು