AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು

ಕೇಂದ್ರದ ಯೋಜನೆಗಳ ಬಗ್ಗೆ ಸಾರ್ವಜನಿಕ ಹಣ ಬಳಸಿ ಸುಳ್ಳು ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮುಖ್ಯ ಕಾರ್ಯದರ್ಶಿ ಮತ್ತು ಸಚಿವರ ವಿರುದ್ಧ ಮಂಡ್ಯ ಬಿಜೆಪಿ ದೂರು ನೀಡಿದೆ. ಇದು ಸಾರ್ವಜನಿಕ ಹಣದ ದುರುಪಯೋಗ ಹಾಗೂ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ರಾಜಕೀಯ ಪ್ರೇರಿತ ಜಾಹೀರಾತುಗಳಿಗೆ ಸಾರ್ವಜನಿಕರ ಹಣ ಬಳಸಬಾರದು ಎಂದು ಬಿಜೆಪಿ ಒತ್ತಾಯಿಸಿದೆ.

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು
ಮಂಡ್ಯ ಬಿಜೆಪಿಯಿಂದ ದೂರು
ಪ್ರಸನ್ನ ಹೆಗಡೆ
|

Updated on: Jan 31, 2026 | 6:12 PM

Share

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಜಾಹೀರಾತು ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಬಳಸುವುದು ಸಾರ್ವಜನಿಕ ಹಣದ ದುರುಪಯೋಗ ಎಂದು ಬಿಜೆಪಿ ಆರೋಪಿಸಿದೆ.

ಅಲ್ಲದೆ, ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಯೋಜನೆಯನ್ನು ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿದ ಅವಮಾನ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಬರಬಹುದು, ಆದರೆ ಸಾರ್ವಜನಿಕ ಹಣ ಬಳಸಿರುವುದರಿಂದ ಅದು ಸುಪ್ರೀಂಕೋರ್ಟ್‌ನ 2015ರ ಮಾರ್ಗಸೂಚಿಗಳ ಗಂಭೀರ ಉಲ್ಲಂಘನೆಯಾಗಿದೆ. ಸರ್ಕಾರಿ ಜಾಹೀರಾತುಗಳು ಕೇವಲ ಮಾಹಿತಿಯುಕ್ತವಾಗಿರಬೇಕು. ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿ ಉತ್ತೇಜಿಸಲು ಅಥವಾ ವಿರೋಧ ಪಕ್ಷದ ವಿರುದ್ಧ ನಕಾರಾತ್ಮಕ ಚಿತ್ರಣ ನೀಡಲು ಸಾರ್ವಜನಿಕ ಹಣ ಬಳಸುವಂತಿಲ್ಲ.ರಾಜಕೀಯ ಟೀಕೆಗಳಿಗಾಗಿ ಸರ್ಕಾರಿ ಇಲಾಖೆಯ ಹೆಸರಿನಲ್ಲಿ ಜಾಹೀರಾತು ನೀಡುವುದು ಸಂವಿಧಾನದ 14ನೇ ವಿಧಿ ಮತ್ತು 21ನೇ ವಿಧಿಯ ಉಲ್ಲಂಘನೆ ಎಂದು ಕೋರ್ಟ್ ತಿಳಿಸಿದೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯದ ಬಗ್ಗೆ ಟೀಕೆ ಮಾಡಲು ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ. ಆದರೆ, ಸರ್ಕಾರಿ ಯಂತ್ರವನ್ನು ಬಳಸಿ ಜನರ ದಾರಿ ತಪ್ಪಿಸುವಂತಹ ಅಥವಾ ಸುಳ್ಳು ಮಾಹಿತಿ ನೀಡುವಂತಹ ಅಪಪ್ರಚಾರ ಮಾಡುವುದು ಸಂವಿಧಾನದ ಆಶಯಗಳಿಗೆ ವಿರುದ್ಧ ಎಂದು ಬಿಜೆಪಿ ದೂರಿದೆ.

ಇದನ್ನೂ ಓದಿ: ಜಾಹೀರಾತು ಜಟಾಪಟಿಗೆ ತಿರುಗಿದ ನರೇಗಾ ಯುದ್ಧ; ಅಧಿವೇಶನದಲ್ಲೂ ‘ಗಾಂಧಿ Vs ಸಂಘಪ್ಪ’ ಸಮರ!

ಕೇಂದ್ರದ ಕಾನೂನಿನ ಬಗ್ಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಬಹುದು ಅಥವಾ ಕೋರ್ಟ್‌ನಲ್ಲಿ ಸವಾಲು ಹಾಕಬಹುದು. ಆದರೆ, ಅಧಿಕೃತವಾಗಿ ಆ ಕಾನೂನನ್ನು ಜಾರಿಗೆ ತರುವಲ್ಲಿ ಅಡ್ಡಿಪಡಿಸುವುದು ಅಥವಾ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುವುದು ಸಾಂವಿಧಾನಿಕವಾಗಿ ತಪ್ಪು. ಹಾಗಾಗಿ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡು ಜಾಹೀರಾತು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆ ಮುಖ್ಯಕಾರ್ಯದರ್ಶಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾ ಬಿಜೆಪಿ ಆಗ್ರಹಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ