AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್ ಜಲಾಶಯಕ್ಕೆ ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ಭೇಟಿ: ಡ್ಯಾಂ ಸ್ಥಿತಿಗತಿ ಬಗ್ಗೆ ಪರಿಶೀಲನೆ

ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ ನೇತೃತ್ವದ ತಂಡ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದೆ. ಕೆಆರ್​ಎಸ್​ ಡ್ಯಾಂ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡಲಿದೆ. ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಕೆಆರ್​ಎಸ್ ಡ್ಯಾಂ ವೀಕ್ಷಿಸಿದ್ದಾರೆ.

ಕೆಆರ್​ಎಸ್ ಜಲಾಶಯಕ್ಕೆ ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ಭೇಟಿ: ಡ್ಯಾಂ ಸ್ಥಿತಿಗತಿ ಬಗ್ಗೆ ಪರಿಶೀಲನೆ
KRS ಡ್ಯಾಂ
ಪ್ರಶಾಂತ್​ ಬಿ.
| Edited By: |

Updated on: Jan 11, 2024 | 8:04 PM

Share

ಮಂಡ್ಯ, ಜನವರಿ 11: ಕೆಆರ್​ಎಸ್​ ಡ್ಯಾಂ (KRS Dam) ಸ್ಥಿತಿಗತಿ ಬಗ್ಗೆ ಅಧ್ಯಯನಕ್ಕೆ ಸಂಸದೀಯ ಸಮಿತಿ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಲಾಗಿದೆ. ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ ನೇತೃತ್ವದ ತಂಡ ಭೇಟಿ ನೀಡಿದ್ದು, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಕೆಆರ್​ಎಸ್ ಡ್ಯಾಂ ವೀಕ್ಷಿಸಿದ್ದಾರೆ.

ಸಂಸದೀಯ ಸಮಿತಿಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸ್ವಾಗತಿಸಿದ್ದಾರೆ. ಸಂಸದೀಯ ಸಮಿತಿ ಭೇಟಿ ವೇಳೆ ಸ್ಥಳೀಯ ಸಂಸದೆ ಸುಮಲತಾ ಗೈರಾಗಿದ್ದರು. ಜಲಸಂಪನ್ಮೂಲ ಸ್ಥಾಯಿ ಸಮಿತಿಯ 17 ಸದಸ್ಯರ ಪೈಕಿ 14 ಜನ ಭೇಟಿ ನೀಡಿದ್ದರು.

ಅಕ್ರಮ ಗಣಿಗಾರಿಕೆ: ಕೆಆರ್​ಎಸ್​ ಡ್ಯಾಂಗೆ ತೊಂದರೆ

ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್​ ಡ್ಯಾಂಗೆ ತೊಂದರೆಯಾಗುತ್ತಿದೆ ಎಂಬ ಕೂಗು ಈ ಹಿಂದೆ ಬಲವಾಗಿ ಕೇಳಿಬಂದ ಬೆನ್ನಲ್ಲೇ ಅಣೆಕಟ್ಟಿನ ಸಮೀಪ ಕಲ್ಲುಗಳು ಕುಸಿದಿದ್ದು, ಜಲಾಶಯದಿಂದ ಮೇಲ್ಭಾಗಕ್ಕೆ ತೆರಳಲು ರಸ್ತೆಯಂತಿರುವ ಪ್ರದೇಶದಲ್ಲಿ ಘಟನೆ ಸಂಭವಿಸಿತ್ತು. ಡ್ಯಾಂ ನಿರ್ಮಾಣದ ನಂತರ ಕಲ್ಲುಗಳು ಮೊದಲ ಬಾರಿಗೆ ಕುಸಿದಿತ್ತು.

ಇದನ್ನೂ ಓದಿ: KRS Dam: ಕೆಆರ್​ಎಸ್​ ಡ್ಯಾಂ ಬಳಿ 30ಕ್ಕೂ ಹೆಚ್ಚು ಕಲ್ಲುಗಳು ಕುಸಿತ; ಆತಂಕ ಬೇಡ ಎಂದ ಅಧಿಕಾರಿಗಳು

ನೀರಾವರಿ ನಿಗಮದ ಅಧಿಕಾರಿಗಳು ದುರಸ್ತಿ ಕಾರ್ಯ ಆರಂಭಿಸಿದ್ದರು. ಆದರೆ, ಗಾರ್ಡನ್​ಗೆ ಹೋಗುವ ರಸ್ತೆಯಲ್ಲಿ ಕುಸಿದಿರುವ ಕಲ್ಲುಗಳಿಂದ ಡ್ಯಾಂ ಸುರಕ್ಷತೆಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಆತಂಕ ಅಗತ್ಯವಿಲ್ಲ ಎಂದು ಹೇಳಿದ್ದರು.

ಕೆಆರ್​ಎಸ್ ಜಲಾಶಯ ರಾಜ್ಯದ ಜನರ ಜೀವನಾಡಿ. ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಲವು ನಗರಗಳಿಗೆ ಕುಡಿಯುವ ನೀರನ್ನ ಓದಗಿಸುವ ಜಲಾಶಯ. ಆದರೆ ಈ ಬಾರಿ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರನ್ನ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿತ್ತು.

ಇದನ್ನೂ ಓದಿ: ಕೆಆರ್​ಎಸ್​ನಲ್ಲಿ ಬಿರುಕಿಲ್ಲ ಎಂದು ಇಂಜಿನಿಯರ್​ಗಳೇ ಹೇಳಿದರೂ ಜಗ್ಗದ ಸುಮಲತಾ; ಅಂದು ಟೀಕಿಸಿದ್ದ ಜೆಡಿಎಸ್​ ನಾಯಕರ ವಿರುದ್ಧ ತನಿಖೆ ಅಸ್ತ್ರ?

ಆದೇಶಕ್ಕೆ ಮಣಿದು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಸಹಾ ಹರಿಸುತ್ತಿದೆ. ಇದರಿಂದ ಜಲಾಶಯ ಸಂಪೂರ್ಣವಾಗಿ ಬರಿದಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಮುಖ ನಗರಗಳಿಗೆ ಜಲಕ್ಷಾಮ ಎದುರಾಗಲಿದೆ. ಹಾಗಾದರೆ ಜಲಾಶಯದ ನೀರಿನ ಮಟ್ಟ ಎಷ್ಟು, ಕುಡಿಯಲು, ವ್ಯವಸಾಯಕ್ಕೆ ಎಷ್ಟು ನೀರು ಬೇಕು. ಇದರಿಂದ ಕೆಲ ಜಿಲ್ಲೆಗಳಿಗೂ ತೊಂದರೆ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?