AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲಾಡಳಿತವನ್ನು ಆತಂಕಕ್ಕೀಡು ಮಾಡಿದೆ. ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ನಿಗೂಢತೆ ಮುಂದುವರಿದಿದೆ. ಕೆ.ಆರ್.ಪೇಟೆಯ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ಅಕ್ರಮ ಸ್ಕ್ಯಾನಿಂಗ್ ದಂಧೆ ಬಯಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!
ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆImage Credit source: tv9
ದಿಲೀಪ್​, ಚೌಡಹಳ್ಳಿ
| Edited By: |

Updated on: May 01, 2026 | 9:34 AM

Share

ಮಂಡ್ಯ, ಮೇ 1: ಮಂಡ್ಯ (Mandya) ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ (RCH) ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿವೆ. ಇದು ಜಿಲ್ಲೆಯ ಸಾಮಾಜಿಕ ಆರೋಗ್ಯದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಅನೇಕ ಪೋಕ್ಸೋ ಪ್ರಕರಣಗಳಲ್ಲಿ ದಾಖಲಾಗಿಲ್ಲ ಕೇಸ್!

ವರದಿಯಾಗಿರುವ 1,354 ಪ್ರಕರಣಗಳ ಪೈಕಿ ಪೋಕ್ಸೋ (POCSO) ಕೇಸ್​ಗಳ ಸಂಖ್ಯೆ ಕೇವಲ ಕೇವಲ 674. ಅಂದರೆ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿಲ್ಲ ಎಂಬ ಕಹಿ ಸತ್ಯ ಬಯಲಾಗಿದೆ. ಬಾಲ್ಯ ವಿವಾಹ, ಪ್ರೀತಿಯ ಜಾಲ, ಮತ್ತು ಲೈಂಗಿಕ ದೌರ್ಜನ್ಯದಂತಹ ಕಾರಣಗಳಿಂದಾಗಿ 14 ರಿಂದ 18 ವರ್ಷದೊಳಗಿನ ಬಾಲಕಿಯರು ಗರ್ಭಿಣಿಯರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಲೋಕಾಯುಕ್ತ ದಾಳಿ ವೇಳೆ ಬಯಲಾಯ್ತು ಸ್ಕ್ಯಾನಿಂಗ್ ದಂಧೆ

ಇತ್ತೀಚೆಗೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಮತ್ತಷ್ಟು ಆಘಾತಕಾರಿ ವಿಷಯಗಳು ಹೊರಬಂದಿವೆ. ಈ ಕೇಂದ್ರಗಳಲ್ಲಿ ನಿಯಮ ಬಾಹಿರವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಸ್ಕ್ಯಾನಿಂಗ್ ದಂಧೆಯ ಜಾಲ ಎಷ್ಟು ಆಳವಾಗಿ ಹರಡಿದೆ ಎಂಬುದು ಸಾಬೀತಾಗಿದೆ.

ಇದನ್ನೂ ಓದಿ: ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ಕೇಸ್​ ಬೇಧಿಸಿದ ಖಾಕಿ: ಮಂಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆಯ ಕಿಂಗ್‌ಪಿನ್ ಬಂಧನ

ಈ ಹಿಂದೆ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮಂಡ್ಯ ಜಿಲ್ಲೆ ಕರ್ನಾಟಕವನ್ನೇ ಬೆಚ್ಚಿಬೀಳಿಸಿತ್ತು. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್​, ತೋಟದ ಮನೆಗಳಲ್ಲಿ ಅವ್ಯಾಹತವಾಗಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ನಡೆದಿರುವುದು ರಾಜ್ಯಾದ್ಯಂತ ಸಂಚಲಕ್ಕೆ ಕಾರಣವಾಗಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ, ಹೆಣ್ಣು ಭ್ರೂಣ ಹತ್ಯೆಯ ಕಬಂಧಬಾಹು ಮೈಸೂರಿನ ವರೆಗೆ ವಿಸ್ತರಿಸುವುರುವುದು ಗೊತ್ತಾಗಿತ್ತು. ಕೊನೆಯಲ್ಲಿ ಘಟನೆಯ ಕಿಂಗ್​ಪಿನ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಇದೀಗ ಮಂಡ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!