AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷದ ಮಗುವಿಗೆ ಬಂತು ಮಾರಕ ಕಾಯಿಲೆ! ನೆರವಿನ ಭರವಸೆ ನೀಡಿದ ಕೇಂದ್ರ ಸಚಿವ ಹೆಚ್​ಡಿಕೆ

ಮಂಡ್ಯದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಅಪರೂಪದ ಎಸ್‌ಎಂಎ (SMA) ಕಾಯಿಲೆಯಿಂದ ಬಳಲುತ್ತಿದೆ. 16 ಕೋಟಿ ರೂ. ಚಿಕಿತ್ಸೆಗೆ ಬೇಕಾಗಿದ್ದು, ಪೋಷಕರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಪರಿಹಾರ ನಿಧಿ ಮೂಲಕ ಹಾಗೂ ವೈಯಕ್ತಿಕವಾಗಿ ನೆರವು ನೀಡುವುದಾಗಿ ಭರವಸೆ ನೀಡಿದ್ದು, ಮಗುವಿನ ಚಿಕಿತ್ಸೆಗೆ ಆಸರೆಯಾಗಿದ್ದಾರೆ.

2 ವರ್ಷದ ಮಗುವಿಗೆ ಬಂತು ಮಾರಕ ಕಾಯಿಲೆ! ನೆರವಿನ ಭರವಸೆ ನೀಡಿದ ಕೇಂದ್ರ ಸಚಿವ ಹೆಚ್​ಡಿಕೆ
2 ವರ್ಷದ ಮಗುವಿಗೆ ಬಂತು ಮಾರಕ ಕಾಯಿಲೆ! ನೆರವಿನ ಭರವಸೆ ನೀಡಿದ ಕೇಂದ್ರ ಸಚಿವ ಹೆಚ್​ಡಿಕೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 07, 2026 | 4:11 PM

Share

ಮಂಡ್ಯ, ಮಾರ್ಚ್​ 07: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿಗೆ ನೆರವು ನೀಡುವಂತೆ ಪೋಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಸಹಾಯದ ಭರವಸೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶಿವಾರ ಗ್ರಾಮದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಎಸ್‌ಎಂಎ (Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ.

ಮಗುವಿನ ಪೋಷಕರಾದ ಚೇತನ್ ಮತ್ತು ಭಾರ್ಗವಿ ದಂಪತಿ ಮಂಡ್ಯದ ವಿಸಿ ಫಾರಂನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 16 ಕೋಟಿ ರೂಪಾಯಿ ಅಗತ್ಯವಿದ್ದು, ವಿದೇಶಗಳಿಂದ ಸುಮಾರು 1.75 ಕೋಟಿ ರೂಪಾಯಿ ನೆರವು ಸಿಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ. ಕುಮಾರಸ್ವಾಮಿ, ಬಾಲಕನ ಚಿಕಿತ್ಸೆಗೆ ಸಾಧ್ಯವಾದಷ್ಟು ನೆರವು ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಪ್ರಧಾನಮಂತ್ರಿ ಪರಿಹಾರ ನಿಧಿ (PM Fund) ಮೂಲಕ ಸಹಾಯ ದೊರಕುವಂತೆ ಪ್ರಯತ್ನಿಸಲಾಗುತ್ತದೆ. ಜೊತೆಗೆ ವೈಯಕ್ತಿಕವಾಗಿಯೂ ನೆರವು ನೀಡುವುದಾಗಿ ಹೇಳಿದ್ದಾರೆ.

ಎಸ್‌ಎಂಎ ಮಾರಕವೇ?

ಇದೊಂದು ಅಪರೂಪದ ಜಿನೆಟಿಕ್ ಕಾಯಿಲೆಯಾಗಿದ್ದು, ಇದು ಮಕ್ಕಳ ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ. ಈ ಕಾಯಿಲೆ ನರಮಂಡಲದ ಮೇಲೆ ಪರಿಣಾಮ ಬೀರಿ ಮಕ್ಕಳಲ್ಲಿ ಕೈ-ಕಾಲುಗಳ ಚಲನೆ ನಿಧಾನವಾಗಿ ಕುಂದುತ್ತ ಹೋಗುವಂತೆ ಮಾಡುತ್ತದೆ. ಚಿಕಿತ್ಸೆ ಸಿಗದಿದ್ದರೆ ಮಗು ನಡೆಯುವುದು, ಕುಳಿತುಕೊಳ್ಳುವುದು ಅಥವಾ ಉಸಿರಾಟಕ್ಕೂ ತೊಂದರೆ ಎದುರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ಅತಿ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​

ಸಾಯಿ ಚಿರಾಗ್‌ ಮಗುವಿಗೆ ಈಗಾಗಲೇ ಕಾಲುಗಳಲ್ಲಿ ಆರಂಭವಾದ ನಿಶಕ್ತಿ ನಿಧಾನವಾಗಿ ದೇಹದ ಮೇಲ್ಭಾಗಕ್ಕೂ ಹರಡುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಗ ಸೋಂಕು ಸೊಂಟದವರೆಗೂ ತಲುಪಿದ್ದು, ಮುಂದಿನ ಆರು ತಿಂಗಳೊಳಗೆ ಚಿಕಿತ್ಸೆ ನೀಡದಿದ್ದರೆ ದೇಹಪೂರ್ತಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಮಗು ವಿಕಲಚೇತನನಾಗುವ ಭೀತಿ ವ್ಯಕ್ತವಾಗಿದ್ದು, ತಕ್ಷಣ ಚಿಕಿತ್ಸೆಗೆ ಸಹಾಯ ಮಾಡಬೇಕೆಂದು ಪೋಷಕರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ