Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಮಂಡ್ಯದಲ್ಲಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್​​ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಅಕ್ಷಯ್ ಕೊಲೆಯಾದ ಯುವಕ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Sep 13, 2023 | 7:06 AM

ಮಂಡ್ಯ, ಸೆ.13: ಸಕ್ಕರೆ ನಾಡಲ್ಲಿ ಬರ್ಬರ ಕೊಲೆ ನಡೆದಿದ್ದು ಇಡೀ ಮಂಡ್ಯದ(Mandya) ಜನ ಬೆಚ್ಚಿಬಿದ್ದಿದ್ದಾರೆ. ನಡು ರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ(Murder) ಮಾಡಿದ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್​ನಲ್ಲಿ ನಡೆದಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22)ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್​​ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳ ದಾಳಿಗೆ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೇ ದ್ವೇಷಕ್ಕೆ ಯುವಕ ಅಕ್ಷಯ್​ನನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಐವರು ಹಂತಕರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತಿರೋ ಕುಟುಂಬ

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ತೋಡೆ ಮಾಂಸ’ಪ್ರಕರಣ

ತಾವರೆಕೆರೆ ಮುಖ್ಯ ರಸ್ತೆ ಸುದ್ಗುಂಟೆಪಾಳ್ಯ ಬಳಿ ಮಟನ್ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಆಗಿದೆ. 200 ರೂಪಾಯಿ ತಂದು ತೊಡೆ ಮಾಂಸ ಬೇಕು ಎಂದು ನರೇಶ್ ಎಂಬ ವ್ಯಕ್ತಿಯೋರ್ವ ಕಿರಿಕ್ ಮಾಡಿದ್ದಾನೆ. 200 ರೂಪಾಯಿಗೆಲ್ಲ ಬರಲ್ಲ ಎಂದಿದಕ್ಕೆ ಅಂಗಡಿ ಯಾಕಿಟ್ಟಿದಿಯಾ ಎಂದು ವ್ಯಕ್ತಿ ಕಿರಿಕ್ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಅವಾಚ್ಯ ಶಬ್ಧಗಳಿಂದ ನಿಂದನೆ ಆಗಿದೆ. ಕಟ್ ಆಗಿರುವ ಟೈಲ್ಸ್ ನಿಂದ ಅಂಗಡಿ ಮಾಲೀಕ ಸೈಯದ್ ಸಲ್ಮಾನ್ ಎಂಬಾತನ ಮೇಲೆ ನಗೇಶ್ ಹಲ್ಲೆ ಮಾಡಿದ್ದಾನೆ. ಟೈಲ್ಸ್ ಹಾಗು ಕೈಗಳಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಕಿದ್ದಾನೆ ಎನ್ನಲಾಗಿದೆ. ಸದ್ಯ ಈ ಘಟನೆ ಸಂಬಂಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ