AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಮಂಡ್ಯದಲ್ಲಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್​​ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಅಕ್ಷಯ್ ಕೊಲೆಯಾದ ಯುವಕ
ಪ್ರಶಾಂತ್​ ಬಿ.
| Edited By: ಆಯೇಷಾ ಬಾನು|

Updated on: Sep 13, 2023 | 7:06 AM

Share

ಮಂಡ್ಯ, ಸೆ.13: ಸಕ್ಕರೆ ನಾಡಲ್ಲಿ ಬರ್ಬರ ಕೊಲೆ ನಡೆದಿದ್ದು ಇಡೀ ಮಂಡ್ಯದ(Mandya) ಜನ ಬೆಚ್ಚಿಬಿದ್ದಿದ್ದಾರೆ. ನಡು ರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ(Murder) ಮಾಡಿದ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್​ನಲ್ಲಿ ನಡೆದಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22)ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್​​ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳ ದಾಳಿಗೆ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೇ ದ್ವೇಷಕ್ಕೆ ಯುವಕ ಅಕ್ಷಯ್​ನನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಐವರು ಹಂತಕರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತಿರೋ ಕುಟುಂಬ

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ತೋಡೆ ಮಾಂಸ’ಪ್ರಕರಣ

ತಾವರೆಕೆರೆ ಮುಖ್ಯ ರಸ್ತೆ ಸುದ್ಗುಂಟೆಪಾಳ್ಯ ಬಳಿ ಮಟನ್ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಆಗಿದೆ. 200 ರೂಪಾಯಿ ತಂದು ತೊಡೆ ಮಾಂಸ ಬೇಕು ಎಂದು ನರೇಶ್ ಎಂಬ ವ್ಯಕ್ತಿಯೋರ್ವ ಕಿರಿಕ್ ಮಾಡಿದ್ದಾನೆ. 200 ರೂಪಾಯಿಗೆಲ್ಲ ಬರಲ್ಲ ಎಂದಿದಕ್ಕೆ ಅಂಗಡಿ ಯಾಕಿಟ್ಟಿದಿಯಾ ಎಂದು ವ್ಯಕ್ತಿ ಕಿರಿಕ್ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಅವಾಚ್ಯ ಶಬ್ಧಗಳಿಂದ ನಿಂದನೆ ಆಗಿದೆ. ಕಟ್ ಆಗಿರುವ ಟೈಲ್ಸ್ ನಿಂದ ಅಂಗಡಿ ಮಾಲೀಕ ಸೈಯದ್ ಸಲ್ಮಾನ್ ಎಂಬಾತನ ಮೇಲೆ ನಗೇಶ್ ಹಲ್ಲೆ ಮಾಡಿದ್ದಾನೆ. ಟೈಲ್ಸ್ ಹಾಗು ಕೈಗಳಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಕಿದ್ದಾನೆ ಎನ್ನಲಾಗಿದೆ. ಸದ್ಯ ಈ ಘಟನೆ ಸಂಬಂಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More